<p><strong>ಹುಬ್ಬಳ್ಳಿ</strong>: ‘ರಾಜ್ಯ ಬಜೆಟ್ನಲ್ಲಿ ಜೈನ ಸಮುದಾಯದ ಯಾವುದೇ ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷಿಸಲಾಗಿದೆ. ಶೀಘ್ರದಲ್ಲಿ ಸಮಾಜದವರ ಸಭೆ ನಡೆಸಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಇಲ್ಲಿನ ವರೂರು ನವಗ್ರಹತೀರ್ಥ ಕ್ಷೇತ್ರದ ಗುಣಧರನಂಧಿ ಮಹಾರಾಜರು ಎಚ್ಚರಿಸಿದರು.</p>.<p>‘ಬಜೆಟ್ ಗಾತ್ರ ನಾಲ್ಕು ಲಕ್ಷ ಕೋಟಿ ರೂಪಾಯಿಗೆ ಏರಿದರೂ ನಮ್ಮ ಸಮಾಜಕ್ಕೆ ನೀಡುವ ಅನುದಾನ ಕಡಿಮೆ ಆಗುತ್ತಾ ಬರುತ್ತಿದೆ. ಈ ಬಜೆಟ್ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಕೇವಲ ₹100 ಕೋಟಿ ನೀಡಲಾಗಿದೆ. ಇದರಲ್ಲಿ ಜೈನರು, ಕ್ರೈಸ್ತರು, ಸಿಖ್ಖರು ಹಾಗೂ ಬೌದ್ಧರು ಹಂಚಿಕೊಂಡರೇ ₹33 ಕೋಟಿ ಬರುತ್ತದೆ. ಸರ್ಕಾರ ನಡೆಸಲು ಹಣದ ಕೊರತೆ ಇದ್ದರೆ, ನಮಗೆ ಬರುವ ಪಾಲನ್ನು ವಾಪಸ್ ಕೊಡಲು ಜೈನ ಸಮಾಜ ಸಿದ್ಧವಿದೆ’ ಎಂದು ಭಾನುವಾರ ಪ್ರತಿಕ್ರಿಯಿಸಿದರು.</p>.<p>‘ಸಮಾಜದ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ಜೈನ ಅಭಿವೃದ್ಧಿ ನಿಗಮದ ಸ್ಥಾಪನೆ ಅಗತ್ಯವಾಗಿದ್ದು, ಈ ಬಗ್ಗೆ ಸಮಾಜದ ಮುಖಂಡರು, ಸ್ವಾಮೀಜಿಗಳು ಒತ್ತಾಯಿಸಿದ್ದರು. ನಿಗಮ ಸ್ಥಾಪನೆ ಮಾಡುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಸಹ ಭರವಸೆ ನೀಡಿದ್ದರು. ಆದರೂ ಬಜೆಟ್ನಲ್ಲಿ ಈ ಬಗ್ಗೆ ಪ್ರಸ್ತಾವ ಮಾಡದೆ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ’ ಎಂದು ದೂರಿದರು.</p>.<p>‘ವರೂರು ನವಗ್ರಹ ತೀರ್ಥಕ್ಷೇತ್ರದ ಅಭಿವೃದ್ಧಿಗೆ ₹2 ಕೋಟಿ ನೆರವು ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಅದನ್ನು ಈಡೇರಿಸಿಲ್ಲ. ಈ ಹಿಂದೆ ಸಹ ರಾಜ್ಯದ ಪ್ರತಿ ಮಠಕ್ಕೆ ಎರಡೂವರೆ ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಲಾಗಿತ್ತು. ಈವರೆಗೂ ಯಾವ ಮಠಗಳಿಗೂ ಪೂರ್ಣ ಹಣ ನೀಡಿಲ್ಲ’ ಎಂದು ದೂರಿದರು.</p>.<p>‘ಪ್ರಸಕ್ತ ಬಜೆಟ್ನಲ್ಲಿ ದಕ್ಷಿಣ ಕರ್ನಾಟಕ ಭಾಗಕ್ಕೆ ನೀಡಲಾದ ಆದ್ಯತೆಯನ್ನು ಉತ್ತರ ಕರ್ನಾಟಕ ಭಾಗಕ್ಕೆ ನೀಡಿಲ್ಲ. ಹೀಗಾಗಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಕೇವಲ ದಕ್ಷಿಣ ಕರ್ನಾಟಕದ ಬಜೆಟ್ ಆಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ರಾಜ್ಯ ಬಜೆಟ್ನಲ್ಲಿ ಜೈನ ಸಮುದಾಯದ ಯಾವುದೇ ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷಿಸಲಾಗಿದೆ. ಶೀಘ್ರದಲ್ಲಿ ಸಮಾಜದವರ ಸಭೆ ನಡೆಸಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಇಲ್ಲಿನ ವರೂರು ನವಗ್ರಹತೀರ್ಥ ಕ್ಷೇತ್ರದ ಗುಣಧರನಂಧಿ ಮಹಾರಾಜರು ಎಚ್ಚರಿಸಿದರು.</p>.<p>‘ಬಜೆಟ್ ಗಾತ್ರ ನಾಲ್ಕು ಲಕ್ಷ ಕೋಟಿ ರೂಪಾಯಿಗೆ ಏರಿದರೂ ನಮ್ಮ ಸಮಾಜಕ್ಕೆ ನೀಡುವ ಅನುದಾನ ಕಡಿಮೆ ಆಗುತ್ತಾ ಬರುತ್ತಿದೆ. ಈ ಬಜೆಟ್ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಕೇವಲ ₹100 ಕೋಟಿ ನೀಡಲಾಗಿದೆ. ಇದರಲ್ಲಿ ಜೈನರು, ಕ್ರೈಸ್ತರು, ಸಿಖ್ಖರು ಹಾಗೂ ಬೌದ್ಧರು ಹಂಚಿಕೊಂಡರೇ ₹33 ಕೋಟಿ ಬರುತ್ತದೆ. ಸರ್ಕಾರ ನಡೆಸಲು ಹಣದ ಕೊರತೆ ಇದ್ದರೆ, ನಮಗೆ ಬರುವ ಪಾಲನ್ನು ವಾಪಸ್ ಕೊಡಲು ಜೈನ ಸಮಾಜ ಸಿದ್ಧವಿದೆ’ ಎಂದು ಭಾನುವಾರ ಪ್ರತಿಕ್ರಿಯಿಸಿದರು.</p>.<p>‘ಸಮಾಜದ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ಜೈನ ಅಭಿವೃದ್ಧಿ ನಿಗಮದ ಸ್ಥಾಪನೆ ಅಗತ್ಯವಾಗಿದ್ದು, ಈ ಬಗ್ಗೆ ಸಮಾಜದ ಮುಖಂಡರು, ಸ್ವಾಮೀಜಿಗಳು ಒತ್ತಾಯಿಸಿದ್ದರು. ನಿಗಮ ಸ್ಥಾಪನೆ ಮಾಡುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಸಹ ಭರವಸೆ ನೀಡಿದ್ದರು. ಆದರೂ ಬಜೆಟ್ನಲ್ಲಿ ಈ ಬಗ್ಗೆ ಪ್ರಸ್ತಾವ ಮಾಡದೆ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ’ ಎಂದು ದೂರಿದರು.</p>.<p>‘ವರೂರು ನವಗ್ರಹ ತೀರ್ಥಕ್ಷೇತ್ರದ ಅಭಿವೃದ್ಧಿಗೆ ₹2 ಕೋಟಿ ನೆರವು ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಅದನ್ನು ಈಡೇರಿಸಿಲ್ಲ. ಈ ಹಿಂದೆ ಸಹ ರಾಜ್ಯದ ಪ್ರತಿ ಮಠಕ್ಕೆ ಎರಡೂವರೆ ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಲಾಗಿತ್ತು. ಈವರೆಗೂ ಯಾವ ಮಠಗಳಿಗೂ ಪೂರ್ಣ ಹಣ ನೀಡಿಲ್ಲ’ ಎಂದು ದೂರಿದರು.</p>.<p>‘ಪ್ರಸಕ್ತ ಬಜೆಟ್ನಲ್ಲಿ ದಕ್ಷಿಣ ಕರ್ನಾಟಕ ಭಾಗಕ್ಕೆ ನೀಡಲಾದ ಆದ್ಯತೆಯನ್ನು ಉತ್ತರ ಕರ್ನಾಟಕ ಭಾಗಕ್ಕೆ ನೀಡಿಲ್ಲ. ಹೀಗಾಗಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಕೇವಲ ದಕ್ಷಿಣ ಕರ್ನಾಟಕದ ಬಜೆಟ್ ಆಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>