‘ಜಗದೀಶ ಶೆಟ್ಟರ್ ಅವರು ಸಚಿವ ಸ್ಥಾನ ಬೇಡ ಎಂದಾಗ, ಅರವಿಂದ ಬೆಲ್ಲದ ಅವರಿಗೆ ಬೆಂಬಲ ನೀಡುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ, ಅದಕ್ಕೆ ವ್ಯತಿರಿಕ್ತವಾಗಿ ರಾಜಕೀಯ ನಡೆದಿದ್ದು, ಬಿಜೆಪಿ ಹೈಕಮಾಂಡ್ ನಡೆಯೇ ಪ್ರಶ್ನಿಸುವಂತಾಗಿದೆ. ಇದನ್ನು ವಿರೋಧಿಸಿ ಶೀಘ್ರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತೇವೆ. ಅಗತ್ಯವಿದ್ದರೆ ಜಗದೀಶ ಶೆಟ್ಟರ್, ಪ್ರಲ್ಹಾದ ಜೋಶಿ ನಿವಾಸದ ಎದುರು ಸಹ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.