<p><strong>ಹುಬ್ಬಳ್ಳಿ: </strong>ಸಚಿವರಾಗಿ ಮೊದಲ ಬಾರಿಗೆ ಜಿಲ್ಲೆಗೆ ಬಂದ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ನಗರದ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.</p>.<p>ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದವರೆಗೆ ವಾದ್ಯಮೇಳಗಳಿಂದ ಅಭಿಮಾನಿಗಳು ತೆರೆದ ಜೀಪಿನಲ್ಲಿ ಮೆರವಣಿಗೆ ನಡೆಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ನಂತರ ಆರ್.ಎಸ್.ಎಸ್. ಕಚೇರಿಯಾದ ಕೇಶವಕುಂಜ, ಸಿದ್ಧಾರೂಢ ಮಠ, ಮೂರುಸಾವಿರ ಮಠಕ್ಕೆ ಭೇಟಿ ನೀಡಿದರು.</p>.<p>ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ್ದಾರೆ. ಯಾವುದೇ ಖಾತೆ ನೀಡಿದರೂ, ಹಿರಿಯರ ಮಾರ್ಗದರ್ಶನದಲ್ಲಿ ನಿಭಾಯಿಸಿಕೊಂಡು ಹೋಗುತ್ತೇನೆ ಎಂದರು.</p>.<p>ಕಳಸಾ ಬಂಡೂರಿ ಯೋಜನೆ ಹೋರಾಟದ ಮೂಲಕವೇ ನಾನು ಮೇಲೆ ಬಂದವನು. ಆ ಯೋಜನೆ ಅನುಷ್ಠಾನಕ್ಕೆ ಆಂತರಿಕವಾಗಿ ಕೆಲವು ಸಮಸ್ಯೆಗಳಿದ್ದು, ಅನಗತ್ಯ ಗೊಂದಲ ಸೃಷ್ಟಿಯಾಗಬಾರದು. ಕಾನೂನಿನ ಮೂಲಕ ಅದಕ್ಕೊಂದು ತಾರ್ಕಿಕ ಅಂತ್ಯ ಹಾಕಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.</p>.<p>ಜಿಲ್ಲೆಯ ತುಪ್ರಿಹಳ್ಳ ಮತ್ತು ಬೆಣ್ಣೆ ಹಳ್ಳದಿಂದ ಉಂಟಾಗುವ ನೆರೆ ಸಮಸ್ಯೆ ಪರಿಹಾರಕ್ಕೆ ಡ್ರೋಣ್ ಸಮೀಕ್ಷೆ ನಡೆಸಲಾಗಿದೆ. ಸಚಿವ ಸಂಪುಟದ ಆದೇಶಕ್ಕೆ ಕಾಯುತ್ತಿದ್ದೇವೆ. ಮುಂದಿನ ಎರಡು ತಿಂಗಳಲ್ಲಿ ಆ ಭಾಗದ ಜನತೆಗೆ ಸಿಹಿ ಸುದ್ದಿ ನೀಡುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಸಚಿವರಾಗಿ ಮೊದಲ ಬಾರಿಗೆ ಜಿಲ್ಲೆಗೆ ಬಂದ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ನಗರದ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.</p>.<p>ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದವರೆಗೆ ವಾದ್ಯಮೇಳಗಳಿಂದ ಅಭಿಮಾನಿಗಳು ತೆರೆದ ಜೀಪಿನಲ್ಲಿ ಮೆರವಣಿಗೆ ನಡೆಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ನಂತರ ಆರ್.ಎಸ್.ಎಸ್. ಕಚೇರಿಯಾದ ಕೇಶವಕುಂಜ, ಸಿದ್ಧಾರೂಢ ಮಠ, ಮೂರುಸಾವಿರ ಮಠಕ್ಕೆ ಭೇಟಿ ನೀಡಿದರು.</p>.<p>ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ್ದಾರೆ. ಯಾವುದೇ ಖಾತೆ ನೀಡಿದರೂ, ಹಿರಿಯರ ಮಾರ್ಗದರ್ಶನದಲ್ಲಿ ನಿಭಾಯಿಸಿಕೊಂಡು ಹೋಗುತ್ತೇನೆ ಎಂದರು.</p>.<p>ಕಳಸಾ ಬಂಡೂರಿ ಯೋಜನೆ ಹೋರಾಟದ ಮೂಲಕವೇ ನಾನು ಮೇಲೆ ಬಂದವನು. ಆ ಯೋಜನೆ ಅನುಷ್ಠಾನಕ್ಕೆ ಆಂತರಿಕವಾಗಿ ಕೆಲವು ಸಮಸ್ಯೆಗಳಿದ್ದು, ಅನಗತ್ಯ ಗೊಂದಲ ಸೃಷ್ಟಿಯಾಗಬಾರದು. ಕಾನೂನಿನ ಮೂಲಕ ಅದಕ್ಕೊಂದು ತಾರ್ಕಿಕ ಅಂತ್ಯ ಹಾಕಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.</p>.<p>ಜಿಲ್ಲೆಯ ತುಪ್ರಿಹಳ್ಳ ಮತ್ತು ಬೆಣ್ಣೆ ಹಳ್ಳದಿಂದ ಉಂಟಾಗುವ ನೆರೆ ಸಮಸ್ಯೆ ಪರಿಹಾರಕ್ಕೆ ಡ್ರೋಣ್ ಸಮೀಕ್ಷೆ ನಡೆಸಲಾಗಿದೆ. ಸಚಿವ ಸಂಪುಟದ ಆದೇಶಕ್ಕೆ ಕಾಯುತ್ತಿದ್ದೇವೆ. ಮುಂದಿನ ಎರಡು ತಿಂಗಳಲ್ಲಿ ಆ ಭಾಗದ ಜನತೆಗೆ ಸಿಹಿ ಸುದ್ದಿ ನೀಡುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>