<p><strong>ಹುಬ್ಬಳ್ಳಿ:</strong> ಹುಬ್ಬಳ್ಳಿಯಿಂದ ದೇಶದ ಪ್ರಮುಖ ನಗರಗಳಿಗೆ ವಿಮಾನಯಾನ ಸೌಲಭ್ಯ ಕಲ್ಪಿಸಬೇಕೆಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ (ಕೆಸಿಸಿಐ) ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.</p>.<p>ಮುಂಬೈ, ಜೋಧಪುರ, ಅಹಮದಾಬಾದ್, ಕೊಚ್ಚಿ, ಸೂರತ್, ಗೋವಾ, ಬೆಂಗಳೂರು, ತಿರುಪತಿಗೆ ಹೋಗುವ ವಿಮಾನಗಳನ್ನು ಪುನರಾರಂಭಿಸಬೇಕು. ಸ್ಟಾರ್ ಏರ್ ವಿಮಾನಗಳ ಸೇವೆ ಕೊನೆ ಕ್ಷಣದಲ್ಲಿ ರದ್ದಾಗುವುದರಿಂದ ಆಗುತ್ತಿರುವ ತೊಂದರೆ ನಿವಾರಿಸಬೇಕು ಎಂದು ಮುಖಂಡರು ಮನವಿ ಮಾಡಿದರು.</p>.<p>ಹುಬ್ಬಳ್ಳಿ–ಅಂಕೋಲಾ, ಹುಬ್ಬಳ್ಳಿ ಬೆಳಗಾವಿ (ಕಿತ್ತೂರು ಮಾರ್ಗದಿಂದ) ರೈಲ್ವೆ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಸಳಿಸಬೇಕು, ಲೋಂಡಾ ಕಡೆಗೆ ಹೆಚ್ಚುವರಿ ಫುಟ್ ಓವರ್ ಬ್ರಿಡ್ಜ್ (ಎಫ್ಒಬಿ) ನಿರ್ಮಿಸಬೇಕು. ಬಡವರಿಗೆ ಅಕ್ಕಿ ವಿತರಣೆ ಸಮರ್ಪಕವಾಗಿ ನಡೆಯಬೇಕು. ನವೀಕರಿಸಬಹುದಾದ ಇಂಧನಕ್ಕೆ ಸಂಬಂಧಿಸಿದ ಹೆಚ್ಚಿನ ಯೋಜನೆಗಳನ್ನು ಈ ಭಾಗದಲ್ಲಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.</p>.<p>ಸಂಸ್ಥೆಯ ಅಧ್ಯಕ್ಷ ಎಸ್. ಸಂಶಿಮಠ, ಉಪಾಧ್ಯಕ್ಷ ಸಂದೀಪ ಬಿಡಸಾರಿಯಾ, ಗೌರವ ಕಾರ್ಯದರ್ಶಿಗಳಾದ ರವೀಂದ್ರ ಎಸ್. ಬಳಿಗಾರ, ಮಹೇಂದ್ರ ಸಿಂಘಿ, ಸದಸ್ಯ ಚನ್ನು ಹೊಸಮನಿ, ಎಂ.ಸಿ. ಹಿರೇಮಠ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಹುಬ್ಬಳ್ಳಿಯಿಂದ ದೇಶದ ಪ್ರಮುಖ ನಗರಗಳಿಗೆ ವಿಮಾನಯಾನ ಸೌಲಭ್ಯ ಕಲ್ಪಿಸಬೇಕೆಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ (ಕೆಸಿಸಿಐ) ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.</p>.<p>ಮುಂಬೈ, ಜೋಧಪುರ, ಅಹಮದಾಬಾದ್, ಕೊಚ್ಚಿ, ಸೂರತ್, ಗೋವಾ, ಬೆಂಗಳೂರು, ತಿರುಪತಿಗೆ ಹೋಗುವ ವಿಮಾನಗಳನ್ನು ಪುನರಾರಂಭಿಸಬೇಕು. ಸ್ಟಾರ್ ಏರ್ ವಿಮಾನಗಳ ಸೇವೆ ಕೊನೆ ಕ್ಷಣದಲ್ಲಿ ರದ್ದಾಗುವುದರಿಂದ ಆಗುತ್ತಿರುವ ತೊಂದರೆ ನಿವಾರಿಸಬೇಕು ಎಂದು ಮುಖಂಡರು ಮನವಿ ಮಾಡಿದರು.</p>.<p>ಹುಬ್ಬಳ್ಳಿ–ಅಂಕೋಲಾ, ಹುಬ್ಬಳ್ಳಿ ಬೆಳಗಾವಿ (ಕಿತ್ತೂರು ಮಾರ್ಗದಿಂದ) ರೈಲ್ವೆ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಸಳಿಸಬೇಕು, ಲೋಂಡಾ ಕಡೆಗೆ ಹೆಚ್ಚುವರಿ ಫುಟ್ ಓವರ್ ಬ್ರಿಡ್ಜ್ (ಎಫ್ಒಬಿ) ನಿರ್ಮಿಸಬೇಕು. ಬಡವರಿಗೆ ಅಕ್ಕಿ ವಿತರಣೆ ಸಮರ್ಪಕವಾಗಿ ನಡೆಯಬೇಕು. ನವೀಕರಿಸಬಹುದಾದ ಇಂಧನಕ್ಕೆ ಸಂಬಂಧಿಸಿದ ಹೆಚ್ಚಿನ ಯೋಜನೆಗಳನ್ನು ಈ ಭಾಗದಲ್ಲಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.</p>.<p>ಸಂಸ್ಥೆಯ ಅಧ್ಯಕ್ಷ ಎಸ್. ಸಂಶಿಮಠ, ಉಪಾಧ್ಯಕ್ಷ ಸಂದೀಪ ಬಿಡಸಾರಿಯಾ, ಗೌರವ ಕಾರ್ಯದರ್ಶಿಗಳಾದ ರವೀಂದ್ರ ಎಸ್. ಬಳಿಗಾರ, ಮಹೇಂದ್ರ ಸಿಂಘಿ, ಸದಸ್ಯ ಚನ್ನು ಹೊಸಮನಿ, ಎಂ.ಸಿ. ಹಿರೇಮಠ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>