<p><strong>ಹುಬ್ಬಳ್ಳಿ:</strong> ‘ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ₹37 ಸಾವಿರ ಕೋಟಿ ಬಾಕಿ ಬರಬೇಕಿದೆ. ಬಾಕಿ ಬಿಡುಗಡೆ ಮಾಡಲ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲಾಗುವುದು’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಹೇಳಿದರು.</p>.<p>ಪ್ರತಿಭಟನೆಯ ಪೂರ್ವಭಾವಿಯಾಗಿ ನಗರದಲ್ಲಿ ಗುರುವಾರ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆಯ ಬಳಿಕವೂ ಬಾಕಿ ಹಣ ಬಿಡುಗಡೆ ಮಾಡದಿದ್ದಲ್ಲಿ ಏಪ್ರಿಲ್ ತಿಂಗಳ ಬಳಿಕ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು‘ ಎಂದು ಎಚ್ಚರಿಸಿದರು.</p>.<p>‘ಮೂರು ವರ್ಷಗಳಿಂದ ಕಾಮಗಾರಿಗಳ ಬಿಲ್ ಪಾವತಿಸಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕೆಲವು ಗುತ್ತಿಗೆದಾರರು ಸಾಲ ಮಾಡಿ ಕಾಮಗಾರಿ ಪೂರ್ಣಗೊಳಿಸಿದ್ದಾರೆ. ಬಾಕಿ ಪಾವತಿಸದ ಕಾರಣ ಸಂಕಷ್ಟಕ್ಕೀಡಾಗಿದ್ದಾರೆ’ ಎಂದರು.</p>.<p>ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ 20 ಸಾವಿರಕ್ಕೂ ಹೆಚ್ಚು ಗುತ್ತಿಗೆದಾರರು ಭಾಗವಹಿಸುವ ನಿರೀಕ್ಷೆ ಇದೆ. ಜಲ ಸಂಪನ್ಮೂಲ ಇಲಾಖೆಯಿಂದ ₹13 ಸಾವಿರ ಕೋಟಿ, ಲೋಕೋಪಯೋಗಿ ಇಲಾಖೆಯಿಂದ ₹8,370 ಕೋಟಿ, ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ₹3,800 ಕೋಟಿ, ಸಣ್ಣ ನೀರಾವರಿ ಇಲಾಖೆ ₹3 ಸಾವಿರ ಕೋಟಿ, ನಗರಾಭಿವೃದ್ಧಿ ಇಲಾಖೆ ₹2 ಸಾವಿರ ಕೋಟಿ ಬಾಕಿ ಬರಬೇಕಿದೆ ಎಂದು ತಿಳಿಸಿದರು.</p>.<p>ಪ್ಯಾಕೇಜ್ ಟೆಂಡರ್ ಪದ್ಧತಿ ರದ್ದು ಮಾಡಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು. ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ಈಗ ಹೆಚ್ಚಿನ ಪ್ಯಾಕೇಜ್ ಟೆಂಡರ್ ವ್ಯವಸ್ಥೆ ಇದೆ. ಹೆಚ್ಚು ಮೊತ್ತದ ಕಾಮಗಾರಿಗಳ ಪ್ಯಾಕೇಜ್ ಬೇರೆ ರಾಜ್ಯದ ಗುತ್ತಿಗೆದಾರರ ಪಾಲಾಗುತ್ತಿವೆ ಎಂದರು.</p>.<p>ಹಣ ಬಿಡುಗಡೆ ಮಾಡಲು ಈ ಸರ್ಕಾರದಲ್ಲಿಯೂ ಹೆಚ್ಚಿನ ಕಮಿಷನ್ ನೀಡಬೇಕಿದೆ. ಮುಖ್ಯಮಂತ್ರಿ ಅವರು ಗುತ್ತಿಗೆದಾರರೊಂದಿಗೆ ಸಭೆ ನಡೆಸಿದರೆ ಬಹುತೇಕ ಸಮಸ್ಯೆಗಳು ಬಗೆಹರಿಯಲಿದೆ ಎಂದು ಹೇಳಿದರು.</p>.<p><strong>ಕಮಿಷನ್ ಕೊಡದೆ ಭೂಮಿಪೂಜೆ ನಡೆಯಲ್ಲ</strong>: ‘ಯಾವುದೇ ಕಾಮಗಾರಿಗೆ ಸಂಬಂಧಿಸಿದಂತೆ ಕಾರ್ಯಾದೇಶ ನೀಡಿದರೂ, ಸ್ಥಳೀಯ ಶಾಸಕ, ಸಂಬಂಧಪಟ್ಟ ಇಲಾಖೆ ಸಚಿವರಿಗೆ ಕಮಿಷನ್ ನೀಡುವವರೆಗೆ ಅವರು ಭೂಮಿಪೂಜೆಗೆ ಬರುವುದಿಲ್ಲ. ಹೀಗಾಗಿ ನಿಗದಿತ ಅವಧಿಯಲ್ಲಿ ಕಾಮಗಾರಿಗಳು ಮುಗಿಯುವುದಿಲ್ಲ’ ಎಂದರು.</p>.<p>ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಗುರುಸಿದ್ದಪ್ಪ ಬಿ.ಎಸ್., ಎಂ.ಕೆ.ಮುಲ್ಲಾ, ಕಾರ್ಯಾಧ್ಯಕ್ಷರಾದ ಸುರೇಶ ಭೂಮರಡ್ಡಿ, ಬಿ.ಸಿ.ದಿನೇಶ, ಧಾರವಾಡ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಂ.ಎಸ್. ಸಂಕಾಗೌಡಶಾನಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು. </p>.<div><blockquote>ನಾವು ಬೆದರಿಕೆ ಅಥವಾ ಬ್ಲಾಕ್ಮೇಲ್ ಮಾಡುತ್ತಿಲ್ಲ. ರಾಜ್ಯದ 1.50 ಲಕ್ಷ ಗುತ್ತಿಗೆದಾರರ ಹಿತ ಕಾಯುವುದೇ ನಮ್ಮ ಉದ್ದೇಶ. ಮಾಡಿದ ಕೆಲಸಕ್ಕೆ ಕೂಲಿ ಕೇಳುವುದು ತಪ್ಪಲ್ಲ </blockquote><span class="attribution">ಆರ್. ಮಂಜುನಾಥ ಅಧ್ಯಕ್ಷ ರಾಜ್ಯ ಗುತ್ತಿಗೆದಾರರ ಸಂಘ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ₹37 ಸಾವಿರ ಕೋಟಿ ಬಾಕಿ ಬರಬೇಕಿದೆ. ಬಾಕಿ ಬಿಡುಗಡೆ ಮಾಡಲ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲಾಗುವುದು’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಹೇಳಿದರು.</p>.<p>ಪ್ರತಿಭಟನೆಯ ಪೂರ್ವಭಾವಿಯಾಗಿ ನಗರದಲ್ಲಿ ಗುರುವಾರ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆಯ ಬಳಿಕವೂ ಬಾಕಿ ಹಣ ಬಿಡುಗಡೆ ಮಾಡದಿದ್ದಲ್ಲಿ ಏಪ್ರಿಲ್ ತಿಂಗಳ ಬಳಿಕ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು‘ ಎಂದು ಎಚ್ಚರಿಸಿದರು.</p>.<p>‘ಮೂರು ವರ್ಷಗಳಿಂದ ಕಾಮಗಾರಿಗಳ ಬಿಲ್ ಪಾವತಿಸಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕೆಲವು ಗುತ್ತಿಗೆದಾರರು ಸಾಲ ಮಾಡಿ ಕಾಮಗಾರಿ ಪೂರ್ಣಗೊಳಿಸಿದ್ದಾರೆ. ಬಾಕಿ ಪಾವತಿಸದ ಕಾರಣ ಸಂಕಷ್ಟಕ್ಕೀಡಾಗಿದ್ದಾರೆ’ ಎಂದರು.</p>.<p>ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ 20 ಸಾವಿರಕ್ಕೂ ಹೆಚ್ಚು ಗುತ್ತಿಗೆದಾರರು ಭಾಗವಹಿಸುವ ನಿರೀಕ್ಷೆ ಇದೆ. ಜಲ ಸಂಪನ್ಮೂಲ ಇಲಾಖೆಯಿಂದ ₹13 ಸಾವಿರ ಕೋಟಿ, ಲೋಕೋಪಯೋಗಿ ಇಲಾಖೆಯಿಂದ ₹8,370 ಕೋಟಿ, ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ₹3,800 ಕೋಟಿ, ಸಣ್ಣ ನೀರಾವರಿ ಇಲಾಖೆ ₹3 ಸಾವಿರ ಕೋಟಿ, ನಗರಾಭಿವೃದ್ಧಿ ಇಲಾಖೆ ₹2 ಸಾವಿರ ಕೋಟಿ ಬಾಕಿ ಬರಬೇಕಿದೆ ಎಂದು ತಿಳಿಸಿದರು.</p>.<p>ಪ್ಯಾಕೇಜ್ ಟೆಂಡರ್ ಪದ್ಧತಿ ರದ್ದು ಮಾಡಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು. ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ಈಗ ಹೆಚ್ಚಿನ ಪ್ಯಾಕೇಜ್ ಟೆಂಡರ್ ವ್ಯವಸ್ಥೆ ಇದೆ. ಹೆಚ್ಚು ಮೊತ್ತದ ಕಾಮಗಾರಿಗಳ ಪ್ಯಾಕೇಜ್ ಬೇರೆ ರಾಜ್ಯದ ಗುತ್ತಿಗೆದಾರರ ಪಾಲಾಗುತ್ತಿವೆ ಎಂದರು.</p>.<p>ಹಣ ಬಿಡುಗಡೆ ಮಾಡಲು ಈ ಸರ್ಕಾರದಲ್ಲಿಯೂ ಹೆಚ್ಚಿನ ಕಮಿಷನ್ ನೀಡಬೇಕಿದೆ. ಮುಖ್ಯಮಂತ್ರಿ ಅವರು ಗುತ್ತಿಗೆದಾರರೊಂದಿಗೆ ಸಭೆ ನಡೆಸಿದರೆ ಬಹುತೇಕ ಸಮಸ್ಯೆಗಳು ಬಗೆಹರಿಯಲಿದೆ ಎಂದು ಹೇಳಿದರು.</p>.<p><strong>ಕಮಿಷನ್ ಕೊಡದೆ ಭೂಮಿಪೂಜೆ ನಡೆಯಲ್ಲ</strong>: ‘ಯಾವುದೇ ಕಾಮಗಾರಿಗೆ ಸಂಬಂಧಿಸಿದಂತೆ ಕಾರ್ಯಾದೇಶ ನೀಡಿದರೂ, ಸ್ಥಳೀಯ ಶಾಸಕ, ಸಂಬಂಧಪಟ್ಟ ಇಲಾಖೆ ಸಚಿವರಿಗೆ ಕಮಿಷನ್ ನೀಡುವವರೆಗೆ ಅವರು ಭೂಮಿಪೂಜೆಗೆ ಬರುವುದಿಲ್ಲ. ಹೀಗಾಗಿ ನಿಗದಿತ ಅವಧಿಯಲ್ಲಿ ಕಾಮಗಾರಿಗಳು ಮುಗಿಯುವುದಿಲ್ಲ’ ಎಂದರು.</p>.<p>ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಗುರುಸಿದ್ದಪ್ಪ ಬಿ.ಎಸ್., ಎಂ.ಕೆ.ಮುಲ್ಲಾ, ಕಾರ್ಯಾಧ್ಯಕ್ಷರಾದ ಸುರೇಶ ಭೂಮರಡ್ಡಿ, ಬಿ.ಸಿ.ದಿನೇಶ, ಧಾರವಾಡ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಂ.ಎಸ್. ಸಂಕಾಗೌಡಶಾನಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು. </p>.<div><blockquote>ನಾವು ಬೆದರಿಕೆ ಅಥವಾ ಬ್ಲಾಕ್ಮೇಲ್ ಮಾಡುತ್ತಿಲ್ಲ. ರಾಜ್ಯದ 1.50 ಲಕ್ಷ ಗುತ್ತಿಗೆದಾರರ ಹಿತ ಕಾಯುವುದೇ ನಮ್ಮ ಉದ್ದೇಶ. ಮಾಡಿದ ಕೆಲಸಕ್ಕೆ ಕೂಲಿ ಕೇಳುವುದು ತಪ್ಪಲ್ಲ </blockquote><span class="attribution">ಆರ್. ಮಂಜುನಾಥ ಅಧ್ಯಕ್ಷ ರಾಜ್ಯ ಗುತ್ತಿಗೆದಾರರ ಸಂಘ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>