ರೈತ ಚಳವಳಿ ಮೂಲಕ ನಾಯಕರಾಗಿ ಹೊರಹೊಮ್ಮಿದ ಬಾಬಾಗೌಡ ಪಾಟೀಲ, ಈ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದ್ದರು. 1989ರಲ್ಲಿ ನೆರೆಯ ಕಿತ್ತೂರು ಹಾಗೂ ಧಾರವಾಡ ಎರಡೂ ಕ್ಷೇತ್ರಗಳಲ್ಲಿ ಗೆದ್ದ ಅವರು, ನಂತರ ಧಾರವಾಡ ಕ್ಷೇತ್ರವನ್ನು ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರಿಗೆ ಬಿಟ್ಟುಕೊಟ್ಟು, ಅವರನ್ನೂ ಆರಿಸಿ ತಂದರು. ಅಷ್ಟರ ಮಟ್ಟಿಗೆ ರೈತ ಚಳವಳಿ ಈ ಕ್ಷೇತ್ರದ ಮೇಲೆ ಪ್ರಭಾವ ಬೀರಿತ್ತು.