ಬಿ.ಎಲ್.ಸಂತೋಷ್ ಅವರು ತಮ್ಮ ಮಾನಸಪುತ್ರ ಮಹೇಶ ಟೆಂಗಿನಕಾಯಿ ಅವರಿಗೆ ಟಿಕೆಟ್ ಕೊಡಿಸಿದ್ದಾರೆ ಎಂಬ ಜಗದೀಶ ಶೆಟ್ಟರ್ ಅವರ ಆರೋಪಕ್ಕೆ ಪ್ರತಿಕ್ರಿಯಿಸದ ಅವರು, ‘ಇದು ಅವರ ವೈಯಕ್ತಿಕ ಅಭಿಪ್ರಾಯ. ರಾಜ್ಯ ಮತ್ತು ಜಿಲ್ಲಾ ಮಟ್ಟದ ಕೋರ್ ಕಮಿಟಿ ಮತ್ತು ಶಕ್ತಿ ಕೇಂದ್ರಗಳ ಪ್ರಮುಖರ ಅಭಿಪ್ರಾಯ ಆಧರಿಸಿ ಕೇಂದ್ರೀಯ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿ ನನಗೆ ಟಿಕೆಟ್ ನೀಡಿದೆ. ಒಂದು ವೇಳೆ ಶೆಟ್ಟರ್ ಅವರಿಗೆ ಟಿಕೆಟ್ ನೀಡಿದ್ದರೆ ಅವರ ಪರವಾಗಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದೆ’ ಎಂದು ತಿಳಿಸಿದರು.