ಧಾರವಾಡ: ನಿಗಮ ಮತ್ತು ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ವಿನಯ ಕುಲಕರ್ಣಿ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಮಂಡಳಿಗೆ ನೇಮಕ ಮಾಡಿರುವುದು ಖುಷಿಯಾಗಿದೆ. ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಬಹಳ ಮುಖ್ಯವಾದ ಕೆಲಸ. ಇಂಥದೊಂದು ಕೆಲಸ ನಿರ್ವಹಿಸಲು ಅವಕಾಶ ಸಿಕ್ಕಿದೆ. ವಹಿಸಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ’ ಎಂದು ತಿಳಿಸಿದರು.