‘ಒಂದು ತಿಂಗಳ ಹಿಂದೆ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದೆ. ಆಗಲೇ ನಿಮ್ಮ ಅಹವಾಲು ಸಲ್ಲಿಸಿದ್ದರೆ, ಇಷ್ಟು ಹೊತ್ತಿಗೆ ನಿಮ್ಮ ಬಹುತೇಕ ಬೇಡಿಕೆಗಳು ಈಡೇರುತ್ತಿದ್ದವು. ಬೆಂಗಳೂರಿಗೆ ಹೋದ ತಕ್ಷಣ ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ಸರ್ಕಾರದ ಪ್ರತಿನಿಧಿಗಳು ಹಾಗೂ ಒಕ್ಕೂಟದ ಮುಖಂಡರನ್ನು ಸೇರಿಸಿ ಸಭೆ ನಡೆಸಲಾಗುವುದು. ಅಲ್ಲಿ ಶಿಕ್ಷಕರ ಸಮಸ್ಯೆ ಪರಿಹರಿಸಲಾಗುವುದು. ಸದ್ಯಕ್ಕೆ ಮುಷ್ಕರ ಕೈಬಿಟ್ಟು, ತರಗತಿಗೆ ತೆರಳಿ’ ಎಂದರು.