<p><strong>ಹುಬ್ಬಳ್ಳಿ:</strong> ತೆಲಂಗಾಣ ಪೊಲೀಸರು ಸ್ಥಳೀಯ ಜನರ ಭಾವನೆಗಳಿಗೆ ಅನುಗುಣವಾಗಿ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ವಿವಿಧ ಆಯಾಮಗಳಲ್ಲಿ ಚರ್ಚೆ ನಡೆಯುತ್ತಿದೆಯಾದರೂ, ಕ್ರಿಮಿನಲ್ಗಳಿಗೆಎನ್ಕೌಂಟರ್ ಎಚ್ಚರಿಕೆಯ ಗಂಟೆಯಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದರು.</p>.<p>ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಹೈದರಾಬಾದ್ ಪೊಲೀಸರು ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಒಂದು ವೇಳೆ ಆರೋಪಿಗಳು ತಪ್ಪಿಸಿಕೊಂಡು ಹೋಗಿದ್ದರೆ ಪರಿಸ್ಥಿತಿ ಎನಾಗುತ್ತಿತ್ತು ಎಂದು ಪ್ರಶ್ನಿಸಿದರು.</p>.<p>ಹೀನ ಕೃತ್ಯ ಮಾಡುವ ಆರೋಪಿಗಳಿಗೆ ಇದು ತಕ್ಕ ಶಿಕ್ಷೆ ಎಂದರು.</p>.<p>ಪೊಲೀಸರ ಕ್ರಮಕ್ಕೆ ವಿರೋಧ ಕೂಡ ವ್ಯಕ್ತವಾಗುತ್ತಿದೆಯಲ್ಲ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಮೇಲ್ನೋಟಕ್ಕೆ ಪೊಲೀಸರು ಮಾಡಿದ ಕೆಲಸ ಉತ್ತಮ ಎಂದು ಕಾಣಿಸುತ್ತಿದೆ. ವಿಶ್ವನಾಥ ಸಜ್ಜನರ ದಕ್ಷ ಅಧಿಕಾರಿ. ನಮ್ಮ ಕುಟುಂಬದ ಸ್ನೇಹಿತರೂ ಆಗಿದ್ದಾರೆ ಎಂದರು.</p>.<p><strong>ಪೊಲೀಸರ ಕ್ರಮ ಸರಿ: ಪ್ರದೀಪ್ ಶೆಟ್ಟರ್</strong></p>.<p>ಅತ್ಯಾಚಾರದಆರೋಪಿಗಳಿಗೆ ಗುಂಡಿಕ್ಕಿದಪೊಲೀಸರ ಕ್ರಮ ಸರಿಯಾಗಿದೆ. ಇದನ್ನು ದೇಶಾದ್ಯಂತ ಜನ ಸಂಭ್ರಮಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ತೆಲಂಗಾಣ ಪೊಲೀಸರು ಸ್ಥಳೀಯ ಜನರ ಭಾವನೆಗಳಿಗೆ ಅನುಗುಣವಾಗಿ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ವಿವಿಧ ಆಯಾಮಗಳಲ್ಲಿ ಚರ್ಚೆ ನಡೆಯುತ್ತಿದೆಯಾದರೂ, ಕ್ರಿಮಿನಲ್ಗಳಿಗೆಎನ್ಕೌಂಟರ್ ಎಚ್ಚರಿಕೆಯ ಗಂಟೆಯಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದರು.</p>.<p>ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಹೈದರಾಬಾದ್ ಪೊಲೀಸರು ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಒಂದು ವೇಳೆ ಆರೋಪಿಗಳು ತಪ್ಪಿಸಿಕೊಂಡು ಹೋಗಿದ್ದರೆ ಪರಿಸ್ಥಿತಿ ಎನಾಗುತ್ತಿತ್ತು ಎಂದು ಪ್ರಶ್ನಿಸಿದರು.</p>.<p>ಹೀನ ಕೃತ್ಯ ಮಾಡುವ ಆರೋಪಿಗಳಿಗೆ ಇದು ತಕ್ಕ ಶಿಕ್ಷೆ ಎಂದರು.</p>.<p>ಪೊಲೀಸರ ಕ್ರಮಕ್ಕೆ ವಿರೋಧ ಕೂಡ ವ್ಯಕ್ತವಾಗುತ್ತಿದೆಯಲ್ಲ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಮೇಲ್ನೋಟಕ್ಕೆ ಪೊಲೀಸರು ಮಾಡಿದ ಕೆಲಸ ಉತ್ತಮ ಎಂದು ಕಾಣಿಸುತ್ತಿದೆ. ವಿಶ್ವನಾಥ ಸಜ್ಜನರ ದಕ್ಷ ಅಧಿಕಾರಿ. ನಮ್ಮ ಕುಟುಂಬದ ಸ್ನೇಹಿತರೂ ಆಗಿದ್ದಾರೆ ಎಂದರು.</p>.<p><strong>ಪೊಲೀಸರ ಕ್ರಮ ಸರಿ: ಪ್ರದೀಪ್ ಶೆಟ್ಟರ್</strong></p>.<p>ಅತ್ಯಾಚಾರದಆರೋಪಿಗಳಿಗೆ ಗುಂಡಿಕ್ಕಿದಪೊಲೀಸರ ಕ್ರಮ ಸರಿಯಾಗಿದೆ. ಇದನ್ನು ದೇಶಾದ್ಯಂತ ಜನ ಸಂಭ್ರಮಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>