<p><strong>ಹುಬ್ಬಳ್ಳಿ:</strong> ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆಜೂನ್ನಲ್ಲಿ ನಡೆಯಲಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಇದರಿಂದ ಹೊರಟ್ಟಿ ಅವರಿಗೆ ಹಾಗೂ ಬಿಜೆಪಿಗೆ ಲಾಭವೇನು ಎಂಬ ಲೆಕ್ಕಾಚಾರ ನಡೆಯುತ್ತಿದೆ.</p>.<p>ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ದಶಕದ ಹಿಂದೆಯೇ ಬಸವರಾಜ ಹೊರಟ್ಟಿ ಅವರನ್ನು ಬಿಜೆಪಿಗೆ ಕರೆ ತರಲು ಮುಂದಾಗಿದ್ದರು. ಆಗ ನಯವಾಗಿ ಅವರ ಆಹ್ವಾನ ತಿರಸ್ಕರಿಸಿದ್ದ ಹೊರಟ್ಟಿ, ಈಗ ಸೇರ್ಪಡೆಯಾಗಲು ಕಾರಣವೇನು ಎಂಬ ಚರ್ಚೆ ಮುನ್ನಲೆಗೆ ಬಂದಿದೆ.</p>.<p><strong>ಬಿಜೆಪಿ ಲೆಕ್ಕಾಚಾರ:</strong>ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ, ಪರಿಷತ್ನಲ್ಲಿ ಬಹುಮತಕ್ಕೆ ಇನ್ನೂ ಒಂದು ಮತ ಕಡಿಮೆ ಇದೆ. ಹೊರಟ್ಟಿ ಅವರ ಸೇರ್ಪಡೆಯಿಂದ ಆ ಕೊರತೆ ನೀಗಿಸಬಹುದು.</p>.<p>ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಹೊರಟ್ಟಿ ಅವರು ಸತತ ಏಳು ಬಾರಿ ಗೆಲುವು ಸಾಧಿಸಿದ್ದಾರೆ. ಅವರನ್ನು ಸೋಲಿಸಲು ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಂದ ಸಾಧ್ಯವಾಗಿಲ್ಲ. ಈ ಬಾರಿಯೂ ಬಿಜೆಪಿಯಲ್ಲಿ ಆಕಾಂಕ್ಷಿಗಳು ಇದ್ದಾರೆ. ಆದರೆ, ಅವರು ಗೆಲ್ಲುವ ವಿಶ್ವಾಸ ಆ ಪಕ್ಷದ ನಾಯಕರಿಗೆ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ಷೇತ್ರ ಶಿಗ್ಗಾವಿ ಹಾಗೂ ಅವರ ಮನೆ ಇರುವ ಹುಬ್ಬಳ್ಳಿ ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತವೆ. ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿರುವಾಗ ವಿಧಾನ ಪರಿಷತ್ ಚುನಾವಣೆ ಸೋಲು ಬೇರೆಯದೇ ಸಂದೇಶ ನೀಡಬಹುದು. ಹೊರಟ್ಟಿಯಾದರೆ, ಗೆಲುವು ಸುಲಭವಾಗಬಹುದು ಎಂಬುದು ಬಿಜೆಪಿ ಮುಖಂಡರ ಲೆಕ್ಕಾಚಾರ.</p>.<p><strong>ಹೊರಟ್ಟಿ ಲೆಕ್ಕಾಚಾರ:</strong>ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ರಚನೆಯಾಗಿ ಮಂತ್ರಿಯಾಗುವ ಸಾಧ್ಯತೆಗಳು ತೀರಾ ಕಡಿಮೆ. ಬಿಜೆಪಿ ಸೇರ್ಪಡೆಯಾದರೆ ವಿಧಾನ ಪರಿಷತ್ನ ಸಭಾಪತಿಯಾಗಿ ಮುಂದುವರಿಯಬಹುದು.</p>.<p>ಪುತ್ರ ವಸಂತ ಹೊರಟ್ಟಿಗೆ ರಾಜಕೀಯ ನೆಲೆ ಕಲ್ಪಿಸಲು ಹೊರಟ್ಟಿ ಅವರು 2014ರಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರದಿಂದ ಪುತ್ರನನ್ನು ಕಣಕ್ಕಿಳಿಸಿದ್ದರು. ಆದರೆ, ಗೆಲುವು ದಕ್ಕಲಿಲ್ಲ. ಆ ನಂತರ ಅವರ ಪುತ್ರ ರಾಜಕೀಯದಿಂದ ದೂರ ಉಳಿದಿದ್ದಾರೆ. ತಮ್ಮ ರಾಜಕೀಯ ನಿವೃತ್ತಿ ನಂತರ ಪುತ್ರ ಜೆಡಿಎಸ್ನಿಂದ ಸ್ಪರ್ಧಿಸಿದರೆ ಗೆಲುವು ಕಷ್ಟ. ಅದೇ ಬಿಜೆಪಿಯಲ್ಲಿದ್ದರೆ ಪುತ್ರನಿಗೆ ರಾಜಕೀಯ ಸ್ಥಾನಮಾನ ಕಲ್ಪಿಸಬಹುದು ಎಂಬುದು ಅವರ ಲೆಕ್ಕಾಚಾರ ಎನ್ನುತ್ತವೆ ಅವರ ಆಪ್ತ ಮೂಲಗಳು.</p>.<p>ವಂಶಪಾರಂಪರ್ಯ ರಾಜಕಾರಣಕ್ಕೆ ಬಿಜೆಪಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅವಕಾಶ ನಿರಾಕರಿಸಲಾಗುತ್ತಿದೆ. ಹಿಂದೆ ಸಭಾಪತಿಯಾಗಿದ್ದ ಡಿ.ಎಚ್. ಶಂಕರಮೂರ್ತಿ ಅವರ ರಾಜಕೀಯ ನಿವೃತ್ತಿ ನಂತರ ಅವರ ಪುತ್ರನಿಗೆ ಅವಕಾಶ ನೀಡಲಾಗಿದೆ. ಅಂತಹದೇ ಅವಕಾಶ ನೀಡಬೇಕು ಎಂಬ ಮಾತುಕತೆಯೊಂದಿಗೆ ಹೊರಟ್ಟಿ ಬಿಜೆಪಿಯತ್ತ ಹೆಜ್ಜೆಯಿಟ್ಟಿದ್ದಾರೆ ಎನ್ನಲಾಗುತ್ತಿದೆ.</p>.<p><strong>ಬಿಜೆಪಿ ನಾಯಕರ ಮೌನ:</strong> ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸುವುದಾಗಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಹೇಳಿಕೆಯ ನಂತರವೂ ಬಿಜೆಪಿ ಆಕಾಂಕ್ಷಿಯಾಗಿರುವ ಮೋಹನ ಲಿಂಬಿಕಾಯಿ ಅವರು, ಹೊರಟ್ಟಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಹೊರಟ್ಟಿ ಹೇಳಿಕೆ ಸಮರ್ಥಿಸಿಕೊಳ್ಳದೆ ಬಿಜೆಪಿ ನಾಯಕರು ಮೌನವಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆಜೂನ್ನಲ್ಲಿ ನಡೆಯಲಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಇದರಿಂದ ಹೊರಟ್ಟಿ ಅವರಿಗೆ ಹಾಗೂ ಬಿಜೆಪಿಗೆ ಲಾಭವೇನು ಎಂಬ ಲೆಕ್ಕಾಚಾರ ನಡೆಯುತ್ತಿದೆ.</p>.<p>ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ದಶಕದ ಹಿಂದೆಯೇ ಬಸವರಾಜ ಹೊರಟ್ಟಿ ಅವರನ್ನು ಬಿಜೆಪಿಗೆ ಕರೆ ತರಲು ಮುಂದಾಗಿದ್ದರು. ಆಗ ನಯವಾಗಿ ಅವರ ಆಹ್ವಾನ ತಿರಸ್ಕರಿಸಿದ್ದ ಹೊರಟ್ಟಿ, ಈಗ ಸೇರ್ಪಡೆಯಾಗಲು ಕಾರಣವೇನು ಎಂಬ ಚರ್ಚೆ ಮುನ್ನಲೆಗೆ ಬಂದಿದೆ.</p>.<p><strong>ಬಿಜೆಪಿ ಲೆಕ್ಕಾಚಾರ:</strong>ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ, ಪರಿಷತ್ನಲ್ಲಿ ಬಹುಮತಕ್ಕೆ ಇನ್ನೂ ಒಂದು ಮತ ಕಡಿಮೆ ಇದೆ. ಹೊರಟ್ಟಿ ಅವರ ಸೇರ್ಪಡೆಯಿಂದ ಆ ಕೊರತೆ ನೀಗಿಸಬಹುದು.</p>.<p>ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಹೊರಟ್ಟಿ ಅವರು ಸತತ ಏಳು ಬಾರಿ ಗೆಲುವು ಸಾಧಿಸಿದ್ದಾರೆ. ಅವರನ್ನು ಸೋಲಿಸಲು ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಂದ ಸಾಧ್ಯವಾಗಿಲ್ಲ. ಈ ಬಾರಿಯೂ ಬಿಜೆಪಿಯಲ್ಲಿ ಆಕಾಂಕ್ಷಿಗಳು ಇದ್ದಾರೆ. ಆದರೆ, ಅವರು ಗೆಲ್ಲುವ ವಿಶ್ವಾಸ ಆ ಪಕ್ಷದ ನಾಯಕರಿಗೆ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ಷೇತ್ರ ಶಿಗ್ಗಾವಿ ಹಾಗೂ ಅವರ ಮನೆ ಇರುವ ಹುಬ್ಬಳ್ಳಿ ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತವೆ. ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿರುವಾಗ ವಿಧಾನ ಪರಿಷತ್ ಚುನಾವಣೆ ಸೋಲು ಬೇರೆಯದೇ ಸಂದೇಶ ನೀಡಬಹುದು. ಹೊರಟ್ಟಿಯಾದರೆ, ಗೆಲುವು ಸುಲಭವಾಗಬಹುದು ಎಂಬುದು ಬಿಜೆಪಿ ಮುಖಂಡರ ಲೆಕ್ಕಾಚಾರ.</p>.<p><strong>ಹೊರಟ್ಟಿ ಲೆಕ್ಕಾಚಾರ:</strong>ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ರಚನೆಯಾಗಿ ಮಂತ್ರಿಯಾಗುವ ಸಾಧ್ಯತೆಗಳು ತೀರಾ ಕಡಿಮೆ. ಬಿಜೆಪಿ ಸೇರ್ಪಡೆಯಾದರೆ ವಿಧಾನ ಪರಿಷತ್ನ ಸಭಾಪತಿಯಾಗಿ ಮುಂದುವರಿಯಬಹುದು.</p>.<p>ಪುತ್ರ ವಸಂತ ಹೊರಟ್ಟಿಗೆ ರಾಜಕೀಯ ನೆಲೆ ಕಲ್ಪಿಸಲು ಹೊರಟ್ಟಿ ಅವರು 2014ರಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರದಿಂದ ಪುತ್ರನನ್ನು ಕಣಕ್ಕಿಳಿಸಿದ್ದರು. ಆದರೆ, ಗೆಲುವು ದಕ್ಕಲಿಲ್ಲ. ಆ ನಂತರ ಅವರ ಪುತ್ರ ರಾಜಕೀಯದಿಂದ ದೂರ ಉಳಿದಿದ್ದಾರೆ. ತಮ್ಮ ರಾಜಕೀಯ ನಿವೃತ್ತಿ ನಂತರ ಪುತ್ರ ಜೆಡಿಎಸ್ನಿಂದ ಸ್ಪರ್ಧಿಸಿದರೆ ಗೆಲುವು ಕಷ್ಟ. ಅದೇ ಬಿಜೆಪಿಯಲ್ಲಿದ್ದರೆ ಪುತ್ರನಿಗೆ ರಾಜಕೀಯ ಸ್ಥಾನಮಾನ ಕಲ್ಪಿಸಬಹುದು ಎಂಬುದು ಅವರ ಲೆಕ್ಕಾಚಾರ ಎನ್ನುತ್ತವೆ ಅವರ ಆಪ್ತ ಮೂಲಗಳು.</p>.<p>ವಂಶಪಾರಂಪರ್ಯ ರಾಜಕಾರಣಕ್ಕೆ ಬಿಜೆಪಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅವಕಾಶ ನಿರಾಕರಿಸಲಾಗುತ್ತಿದೆ. ಹಿಂದೆ ಸಭಾಪತಿಯಾಗಿದ್ದ ಡಿ.ಎಚ್. ಶಂಕರಮೂರ್ತಿ ಅವರ ರಾಜಕೀಯ ನಿವೃತ್ತಿ ನಂತರ ಅವರ ಪುತ್ರನಿಗೆ ಅವಕಾಶ ನೀಡಲಾಗಿದೆ. ಅಂತಹದೇ ಅವಕಾಶ ನೀಡಬೇಕು ಎಂಬ ಮಾತುಕತೆಯೊಂದಿಗೆ ಹೊರಟ್ಟಿ ಬಿಜೆಪಿಯತ್ತ ಹೆಜ್ಜೆಯಿಟ್ಟಿದ್ದಾರೆ ಎನ್ನಲಾಗುತ್ತಿದೆ.</p>.<p><strong>ಬಿಜೆಪಿ ನಾಯಕರ ಮೌನ:</strong> ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸುವುದಾಗಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಹೇಳಿಕೆಯ ನಂತರವೂ ಬಿಜೆಪಿ ಆಕಾಂಕ್ಷಿಯಾಗಿರುವ ಮೋಹನ ಲಿಂಬಿಕಾಯಿ ಅವರು, ಹೊರಟ್ಟಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಹೊರಟ್ಟಿ ಹೇಳಿಕೆ ಸಮರ್ಥಿಸಿಕೊಳ್ಳದೆ ಬಿಜೆಪಿ ನಾಯಕರು ಮೌನವಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>