<p><strong>ಹುಬ್ಬಳ್ಳಿ: </strong>ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘೋಷಿಸಿದರು.</p>.<p>ಇಲ್ಲಿ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಬಿಜೆಪಿ ನಾಯಕರು ಹೇಳಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿ.ಎಸ್. ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಬಿಜೆಪಿ ಸೇರ್ಪಡೆ ದಿನಾಂಕ ನಿಗದಿಪಡಿಸಲಾಗುವುದು ಎಂದರು.</p>.<p>ಹೊರಟ್ಟಿ ಸದ್ಯಕ್ಕೆ ಜೆಡಿಎಸ್ ಪಕ್ಷದಲ್ಲಿ ಇದ್ದಾರೆ.</p>.<p><strong>ಓದಿ...<a href="https://www.prajavani.net/india-news/karnataka-senior-ips-officer-bhaskar-rao-will-join-to-aap-tomorrow-925001.html" target="_blank">ಎಎಪಿಗೆ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್: ನಾಳೆ ದೆಹಲಿಯಲ್ಲಿ ಪಕ್ಷ ಸೇರ್ಪಡೆ</a></strong></p>.<p>ನಿಮ್ಮ ಸ್ಪರ್ಧೆಗೆ ಬಿಜೆಪಿಯ ಕೆಲವರಿಂದ ವಿರೋಧವಿದೆಯಲ್ಲ ಎನ್ನುವ ಪ್ರಶ್ನೆಗೆ 'ಯಾರು ವಿರೋಧ ಮಾಡುತ್ತಿದ್ದಾರೆ ಅದು ನನಗೆ ಬೇಕಾಗಿಲ್ಲ. ಶನಿವಾರ ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ ಎಂದರು.</p>.<p>ಬಿಜೆಪಿಯಿಂದ ಸ್ಪರ್ಧೆಗೆ ಎಚ್.ಡಿ. ಕುಮಾರಸ್ವಾಮಿ ಅವರು ಮುಕ್ತವಾಗಿ ಒಪ್ಪಿದ್ದಾರೆ. ಬಿಜೆಪಿ ಸೇರ್ಪಡೆಗೆ ಕರ್ನಾಟಕದ ಎಲ್ಲಾ ನಾಯಕರು ಒಪ್ಪಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘೋಷಿಸಿದರು.</p>.<p>ಇಲ್ಲಿ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಬಿಜೆಪಿ ನಾಯಕರು ಹೇಳಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿ.ಎಸ್. ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಬಿಜೆಪಿ ಸೇರ್ಪಡೆ ದಿನಾಂಕ ನಿಗದಿಪಡಿಸಲಾಗುವುದು ಎಂದರು.</p>.<p>ಹೊರಟ್ಟಿ ಸದ್ಯಕ್ಕೆ ಜೆಡಿಎಸ್ ಪಕ್ಷದಲ್ಲಿ ಇದ್ದಾರೆ.</p>.<p><strong>ಓದಿ...<a href="https://www.prajavani.net/india-news/karnataka-senior-ips-officer-bhaskar-rao-will-join-to-aap-tomorrow-925001.html" target="_blank">ಎಎಪಿಗೆ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್: ನಾಳೆ ದೆಹಲಿಯಲ್ಲಿ ಪಕ್ಷ ಸೇರ್ಪಡೆ</a></strong></p>.<p>ನಿಮ್ಮ ಸ್ಪರ್ಧೆಗೆ ಬಿಜೆಪಿಯ ಕೆಲವರಿಂದ ವಿರೋಧವಿದೆಯಲ್ಲ ಎನ್ನುವ ಪ್ರಶ್ನೆಗೆ 'ಯಾರು ವಿರೋಧ ಮಾಡುತ್ತಿದ್ದಾರೆ ಅದು ನನಗೆ ಬೇಕಾಗಿಲ್ಲ. ಶನಿವಾರ ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ ಎಂದರು.</p>.<p>ಬಿಜೆಪಿಯಿಂದ ಸ್ಪರ್ಧೆಗೆ ಎಚ್.ಡಿ. ಕುಮಾರಸ್ವಾಮಿ ಅವರು ಮುಕ್ತವಾಗಿ ಒಪ್ಪಿದ್ದಾರೆ. ಬಿಜೆಪಿ ಸೇರ್ಪಡೆಗೆ ಕರ್ನಾಟಕದ ಎಲ್ಲಾ ನಾಯಕರು ಒಪ್ಪಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>