ಹುಬ್ಬಳ್ಳಿ: ಜಗದೀಶ ಶೆಟ್ಟರ್ ಜತೆ ಈಗಷ್ಟೇ ಮಾತನಾಡಿದ್ದೇನೆ. ಅವರು ಬೆಂಗಳೂರಿಗೆ ಬಂದ ಬಳಿಕ ಚರ್ಚೆ ನಡೆಸುವೆ. ಇಂದು ಅವರ ಮನೆಗೆ ಭೇಟಿ ನೀಡಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದಾಗಿ ಬೆಂಗಳೂರಿಗೆ 9 ಗಂಟೆಗೆ ವಿಮಾನ ಪ್ರಯಾಣ ಕೈಗೊಳ್ಳಬೇಕಾಗಿದ್ದರಿಂದ ಭೇಟಿ ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.