ಬಿ.ಎಸ್. ಯಡಿಯೂರಪ್ಪ ಅವರು ವಿದೇಶ ಪ್ರವಾಸ ಕೈಗೊಂಡಿದ್ದರಿಂದ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಬೇಗನೆ ದೆಹಲಿಗೆ ಹೊರಟರು. ಎಲ್ಲರೂ ಉಪಸ್ಥಿತರಿದ್ದಾಗ ಸಭೆ ನಡೆಸುವುದಾಗಿ ತೀರ್ಮಾನಿಸಿ, ಕಾರ್ಯಕಾರಿ ಸಮಿತಿ ಸಭೆಯನ್ನು ಮುಂದೂಡಲಾಯಿತು. ಆಗ, ಬೆಳಗಾವಿಯಲ್ಲಿ ಪಕ್ಷದ ಅಭ್ಯರ್ಥಿಯ ಸೋಲು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.