<p><strong>ಹುಬ್ಬಳ್ಳಿ:</strong> ಆರ್ಎಸ್ಎಸ್, ಬಿಜೆಪಿಯ ದೊಡ್ಡಪ್ಪ. ಸುಳ್ಳಿನ ಕಂತೆಯನ್ನೇ ಅವರು ಪ್ರಚಾರ ಮಾಡುತ್ತಾರೆ. ಅದಕ್ಕೆ ಜನರೂ ಬಲಿಯಾಗುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಟೀಕಿಸಿದರು.</p>.<p>ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಧನೆ ಮಾಡದೆ, ಸುಳ್ಳಿನ ಕಂತೆ ಹೇಳಿ ಜನರನ್ನು ನಂಬಿಸುತ್ತಿದ್ದಾರೆ. ಜನರು ಎಚ್ಚರಿಸುವ ಕೆಲಸ ಆಗಬೇಕಿದೆ ಎಂದರು.</p>.<p>ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾಲ್ವರು ಮುಖ್ಯಮಂತ್ರಿಗಳಾಗುವುದು ಖಚಿತ. ಈಗ ಇಬ್ಬರು ಆಗಿದ್ದಾರೆ. ಇನ್ನಿಬ್ಬರು ಆಗಬೇಕಿದೆ ಎಂದು ವ್ಯಂಗ್ಯವಾಡಿದರು.</p>.<p>ಅವಿಭಜಿತ ಧಾರವಾಡ ವಿಧಾನ ಪರಿಷತ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರವಾಗಿದೆ. ಹಣ, ಅಧಿಕಾರ, ತೋಳ್ಬಲ, ಆಮಿಷ ಒಡ್ಡುವ ಹಾಗೂ ಭಯ ಸೃಷ್ಟಿ ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.</p>.<p>ಹಾನಗಲ್ ವಿಧಾನಸಭಾ ಉಪ ಚುನಾವಣೆಯಲ್ಲಿ ಹೀಗೆ ಮಾಡಿದಾಗ ಜನರು ಬುದ್ಧಿ ಕಲಿಸಿದ್ದರು. ಈಗಲೂ ಹಾಗೆಯೇ ಮಾಡಲಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆ ಬಲ ಪಡಿಸಲು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಗರು ಪಕ್ಷದ ಅಭ್ಯರ್ಥಿಗೆ ಮಾತ್ರ ಮೊದಲ ಪ್ರಾಶಸ್ತ್ಯ ಮತ ನೀಡಬೇಕು. ಮೊದಲ ಪ್ರಾಶಸ್ತ್ಯದ ಮತದಲ್ಲಿಯೇ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/unemployment-how-long-should-youth-of-india-have-to-be-patient-says-bjp-mp-varun-gandhi-889105.html" target="_blank">ಯುವಕರು ಎಷ್ಟು ದಿನ ತಾಳ್ಮೆಯಿಂದಿರಬೇಕು: ನಿರುದ್ಯೋಗದ ಬಗ್ಗೆ ವರುಣ್ ಗಾಂಧಿ ಹೇಳಿಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಆರ್ಎಸ್ಎಸ್, ಬಿಜೆಪಿಯ ದೊಡ್ಡಪ್ಪ. ಸುಳ್ಳಿನ ಕಂತೆಯನ್ನೇ ಅವರು ಪ್ರಚಾರ ಮಾಡುತ್ತಾರೆ. ಅದಕ್ಕೆ ಜನರೂ ಬಲಿಯಾಗುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಟೀಕಿಸಿದರು.</p>.<p>ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಧನೆ ಮಾಡದೆ, ಸುಳ್ಳಿನ ಕಂತೆ ಹೇಳಿ ಜನರನ್ನು ನಂಬಿಸುತ್ತಿದ್ದಾರೆ. ಜನರು ಎಚ್ಚರಿಸುವ ಕೆಲಸ ಆಗಬೇಕಿದೆ ಎಂದರು.</p>.<p>ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾಲ್ವರು ಮುಖ್ಯಮಂತ್ರಿಗಳಾಗುವುದು ಖಚಿತ. ಈಗ ಇಬ್ಬರು ಆಗಿದ್ದಾರೆ. ಇನ್ನಿಬ್ಬರು ಆಗಬೇಕಿದೆ ಎಂದು ವ್ಯಂಗ್ಯವಾಡಿದರು.</p>.<p>ಅವಿಭಜಿತ ಧಾರವಾಡ ವಿಧಾನ ಪರಿಷತ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರವಾಗಿದೆ. ಹಣ, ಅಧಿಕಾರ, ತೋಳ್ಬಲ, ಆಮಿಷ ಒಡ್ಡುವ ಹಾಗೂ ಭಯ ಸೃಷ್ಟಿ ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.</p>.<p>ಹಾನಗಲ್ ವಿಧಾನಸಭಾ ಉಪ ಚುನಾವಣೆಯಲ್ಲಿ ಹೀಗೆ ಮಾಡಿದಾಗ ಜನರು ಬುದ್ಧಿ ಕಲಿಸಿದ್ದರು. ಈಗಲೂ ಹಾಗೆಯೇ ಮಾಡಲಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆ ಬಲ ಪಡಿಸಲು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಗರು ಪಕ್ಷದ ಅಭ್ಯರ್ಥಿಗೆ ಮಾತ್ರ ಮೊದಲ ಪ್ರಾಶಸ್ತ್ಯ ಮತ ನೀಡಬೇಕು. ಮೊದಲ ಪ್ರಾಶಸ್ತ್ಯದ ಮತದಲ್ಲಿಯೇ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/unemployment-how-long-should-youth-of-india-have-to-be-patient-says-bjp-mp-varun-gandhi-889105.html" target="_blank">ಯುವಕರು ಎಷ್ಟು ದಿನ ತಾಳ್ಮೆಯಿಂದಿರಬೇಕು: ನಿರುದ್ಯೋಗದ ಬಗ್ಗೆ ವರುಣ್ ಗಾಂಧಿ ಹೇಳಿಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>