ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, ‘ಯಡಿಯೂರಪ್ಪ ಅವರನ್ನ ಗುರಿ ಮಾಡಿ ರಾಜಕೀಯವಾಗಿ ಅವರನ್ನು ಮುಗಿಸುವ ಪ್ರಯತ್ನ ಇದಾಗಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಪಕ್ಷದವರೇ ಸಾಕಷ್ಟು ಆಪಾದನೆ ಮಾಡಿದ್ದರು. ಭ್ರಷ್ಟಾಚಾರದ ಆರೋಪ ಇರುವ ಕಾರಣದಿಂದಲೇ ಅವರ ಆಪ್ತರ ಮೇಲೆ ಐಟಿ ದಾಳಿ ನಡೆದಿದೆ’ ಎಂದರು.