<p><strong>ಹುಬ್ಬಳ್ಳಿ:</strong> ವರ್ತಮಾನದ ಸಮಸ್ಯೆಗಳ ಕುರಿತು ಚರ್ಚಿಸಲು ನಗರದ ಮೂರು ಸಾವಿರ ಮಠದಲ್ಲಿ ಮಾರ್ಚ್ 27ರಂದು ಬೆಳಿಗ್ಗೆ 9.30ಕ್ಕೆ ಮಠಾಧೀಶರ ಚಿಂತನ ಮಂಥನ ಸಭೆ ಕರೆಯಲಾಗಿದೆ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p><p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ.</p><p>ಸಾಮಾಜಿಕ, ಧಾರ್ಮಿಕ, ರಾಜಕೀಯ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ರಾಜ್ಯದ ಎಲ್ಲ ಮಠಾಧೀಶರಿಗೆ ಆಹ್ವಾನ ನೀಡಲಾಗಿದೆ ಎಂದರು.</p><p>ಇತಿಹಾಸದಿಂದಲೂ ಸಮಾಜದಲ್ಲಿ ಸಮಸ್ಯೆಗಳು ಎದುರಾದಾಗ ಮಠಾಧೀಶರು, ಸನ್ಯಾಸಿಗಳು ಧ್ವನಿ ಎತ್ತಿದ್ದಾರೆ. ಇದು ಒಂದು ಸಮಾಜಕ್ಕೆ ಸೀಮಿತವಾದ ಸಭೆಯಲ್ಲ. ಎಲ್ಲ ಮಠಾಧೀಶರು ಇದರಲ್ಲಿ ಭಾಗವಹಿಸಿ ಸಮಸ್ಯೆಗಳ ಪರಿಹಾರಕ್ಕೆ ಸಲಹೆ, ಸೂಚನೆ ನೀಡಲಿದ್ದು, ಈ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.</p><p>'ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂಬುದು ಕೇವಲ ಊಹಾಪೋಹ. ಸ್ಪರ್ಧೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಒಬ್ಬ ಮಠಾಧೀಶನಾಗಿ ವೈಯಕ್ತಿಕ ತೀರ್ಮಾನ ತೆಗೆದುಕೊಳ್ಳುವ ಶಕ್ತಿ, ಸ್ವಾತಂತ್ರ್ಯ ನನಗೆ ಇಲ್ಲ' ಎಂದು ಸ್ಪಷ್ಟಪಡಿಸಿದರು.</p><p>ಪ್ರಾಮಾಣಿಕರಿಗೆ ಅಪವಾದ ಸಹಜ. ಅದರಲ್ಲಿಯೂ ನನ್ನ ಮೇಲೆ ಹೆಚ್ಚು ಆರೋಪಗಳು ಬರುತ್ತವೆ. ಆದರೆ ಯಾವುದೇ ಆಮಿಷಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ನನಗೆ ಯಾವುದೇ ಕುಟುಂಬವಿಲ್ಲ. ಮಠಾಧೀಶರು ಸಮಾಜದ ಮಕ್ಕಳು. ಎಲ್ಲ ಆರೋಪಗಳನ್ನು ಎದುರಿಸುವ ಶಕ್ತಿ ನನಗೆ ಇದೆ ಎಂದರು.</p><p>ರಾಜಕಾರಣಿಗಳು ಅಧಿಕಾರದ ಮದದಿಂದ ದಾರಿ ತಪ್ಪುತ್ತಿದ್ದಾರೆ. ಅವರನ್ನು ಸರಿ ದಾರಿಗೆ ತರುವ ಕೆಲಸವನ್ನು ಮಠಾಧೀಶರು ಮಾಡಲಿದ್ದಾರೆ. ಅದು ನಮ್ಮ ಕರ್ತವ್ಯ ಎಂದು ಹೇಳಿದರು.</p>.ರಾಜಕೀಯ ನಾಯಕರು ಪಕ್ಷಮುಖಿ; ಸ್ವಾಮೀಜಿಗಳು ಮಠಮುಖಿ: ದಿಂಗಾಲೇಶ್ವರ ಸ್ವಾಮೀಜಿ .ಮಠಾಧೀಶರು ರಾಜಕಾರಣಿಗಳ ಅಡಿಯಾಳಾಗಬೇಡಿ: ದಿಂಗಾಲೇಶ್ವರ ಸ್ವಾಮೀಜಿ.ಯಡಿಯೂರಪ್ಪ ಕಣ್ಣೀರಲ್ಲಿ ಕೊಚ್ಚಿ ಹೋದ ಬಿಜೆಪಿ: ದಿಂಗಾಲೇಶ್ವರ ಸ್ವಾಮೀಜಿ.ಅನುದಾನ ಪಡೆಯಲು ಮಠಗಳೂ ಶೇ 30 ರಷ್ಟು ಕಮಿಷನ್ ನೀಡಬೇಕಿದೆ: ದಿಂಗಾಲೇಶ್ವರ ಸ್ವಾಮೀಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ವರ್ತಮಾನದ ಸಮಸ್ಯೆಗಳ ಕುರಿತು ಚರ್ಚಿಸಲು ನಗರದ ಮೂರು ಸಾವಿರ ಮಠದಲ್ಲಿ ಮಾರ್ಚ್ 27ರಂದು ಬೆಳಿಗ್ಗೆ 9.30ಕ್ಕೆ ಮಠಾಧೀಶರ ಚಿಂತನ ಮಂಥನ ಸಭೆ ಕರೆಯಲಾಗಿದೆ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p><p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ.</p><p>ಸಾಮಾಜಿಕ, ಧಾರ್ಮಿಕ, ರಾಜಕೀಯ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ರಾಜ್ಯದ ಎಲ್ಲ ಮಠಾಧೀಶರಿಗೆ ಆಹ್ವಾನ ನೀಡಲಾಗಿದೆ ಎಂದರು.</p><p>ಇತಿಹಾಸದಿಂದಲೂ ಸಮಾಜದಲ್ಲಿ ಸಮಸ್ಯೆಗಳು ಎದುರಾದಾಗ ಮಠಾಧೀಶರು, ಸನ್ಯಾಸಿಗಳು ಧ್ವನಿ ಎತ್ತಿದ್ದಾರೆ. ಇದು ಒಂದು ಸಮಾಜಕ್ಕೆ ಸೀಮಿತವಾದ ಸಭೆಯಲ್ಲ. ಎಲ್ಲ ಮಠಾಧೀಶರು ಇದರಲ್ಲಿ ಭಾಗವಹಿಸಿ ಸಮಸ್ಯೆಗಳ ಪರಿಹಾರಕ್ಕೆ ಸಲಹೆ, ಸೂಚನೆ ನೀಡಲಿದ್ದು, ಈ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.</p><p>'ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂಬುದು ಕೇವಲ ಊಹಾಪೋಹ. ಸ್ಪರ್ಧೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಒಬ್ಬ ಮಠಾಧೀಶನಾಗಿ ವೈಯಕ್ತಿಕ ತೀರ್ಮಾನ ತೆಗೆದುಕೊಳ್ಳುವ ಶಕ್ತಿ, ಸ್ವಾತಂತ್ರ್ಯ ನನಗೆ ಇಲ್ಲ' ಎಂದು ಸ್ಪಷ್ಟಪಡಿಸಿದರು.</p><p>ಪ್ರಾಮಾಣಿಕರಿಗೆ ಅಪವಾದ ಸಹಜ. ಅದರಲ್ಲಿಯೂ ನನ್ನ ಮೇಲೆ ಹೆಚ್ಚು ಆರೋಪಗಳು ಬರುತ್ತವೆ. ಆದರೆ ಯಾವುದೇ ಆಮಿಷಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ನನಗೆ ಯಾವುದೇ ಕುಟುಂಬವಿಲ್ಲ. ಮಠಾಧೀಶರು ಸಮಾಜದ ಮಕ್ಕಳು. ಎಲ್ಲ ಆರೋಪಗಳನ್ನು ಎದುರಿಸುವ ಶಕ್ತಿ ನನಗೆ ಇದೆ ಎಂದರು.</p><p>ರಾಜಕಾರಣಿಗಳು ಅಧಿಕಾರದ ಮದದಿಂದ ದಾರಿ ತಪ್ಪುತ್ತಿದ್ದಾರೆ. ಅವರನ್ನು ಸರಿ ದಾರಿಗೆ ತರುವ ಕೆಲಸವನ್ನು ಮಠಾಧೀಶರು ಮಾಡಲಿದ್ದಾರೆ. ಅದು ನಮ್ಮ ಕರ್ತವ್ಯ ಎಂದು ಹೇಳಿದರು.</p>.ರಾಜಕೀಯ ನಾಯಕರು ಪಕ್ಷಮುಖಿ; ಸ್ವಾಮೀಜಿಗಳು ಮಠಮುಖಿ: ದಿಂಗಾಲೇಶ್ವರ ಸ್ವಾಮೀಜಿ .ಮಠಾಧೀಶರು ರಾಜಕಾರಣಿಗಳ ಅಡಿಯಾಳಾಗಬೇಡಿ: ದಿಂಗಾಲೇಶ್ವರ ಸ್ವಾಮೀಜಿ.ಯಡಿಯೂರಪ್ಪ ಕಣ್ಣೀರಲ್ಲಿ ಕೊಚ್ಚಿ ಹೋದ ಬಿಜೆಪಿ: ದಿಂಗಾಲೇಶ್ವರ ಸ್ವಾಮೀಜಿ.ಅನುದಾನ ಪಡೆಯಲು ಮಠಗಳೂ ಶೇ 30 ರಷ್ಟು ಕಮಿಷನ್ ನೀಡಬೇಕಿದೆ: ದಿಂಗಾಲೇಶ್ವರ ಸ್ವಾಮೀಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>