<p><strong>ಹುಬ್ಬಳ್ಳಿ: </strong>‘ವ್ಯಕ್ತಿಯೊಬ್ಬರ ಮನೆ ಮೇಲೆ ನಡೆದಿರುವ ಐಟಿ ದಾಳಿಗೆ ಅವರು ಯಡಿಯೂರಪ್ಪ ಆಪ್ತ ಎಂದು ನಾನು ಸರ್ಟಿಫಿಕೇಟ್ ಕೊಡುವುದಿಲ್ಲ. ದಾಳಿ ಬಗ್ಗೆ ನನಗೆ ಎಲ್ಲವೂ ಗೊತ್ತಿದೆ. ಸದ್ಯಕ್ಕೆ ಈ ಬಗ್ಗೆ ಏನೂ ಮಾತನಾಡುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಡಿಯೂರಪ್ಪ ಅವರನ್ನು ಹೈಕಮಾಂಡ್ ಹೇಗೆ ನಡೆಸಿಕೊಂಡು ಬಂದಿದೆ ಎಂದು ರಾಜ್ಯದ ಜನರಿಗೆ ಗೊತ್ತಿದೆ ಎಂದರು.</p>.<p>ಹಾನಗಲ್ ಕ್ಷೇತ್ರದಲ್ಲಿ ಜನ ಬದಲಾವಣೆ ಬಯಸಿದ್ದು, ಈಗಿನ ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ನಮ್ಮ ಅಭ್ಯರ್ಥಿ ನಿರಂತರವಾಗಿ ಜನಸಂಪರ್ಕದಲ್ಲಿದ್ದಾರೆ. ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರದಿಂದ ನಮಗೆ ಏನೂ ಸಿಕ್ಕಿಲ್ಲ ಎಂದು ಜನ ಆಕ್ರೋಶಗೊಂಡಿದ್ದಾರೆ. ಆದ್ದರಿಂದ ಬದಲಾವಣೆ ಬಯಸಿದ್ದಾರೆ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/district/dharwad/karnataka-politics-siddaramaiah-basavaraj-bommai-bs-yediyurappa-it-raid-873552.html" target="_blank">ಸಿ.ಎಂ ಬೊಮ್ಮಾಯಿ ಮನೆ ಮೇಲೆ ಐಟಿ ದಾಳಿ ಮಾಡೋಕೆ ಆಗುತ್ತಾ? ಸಿದ್ದರಾಮಯ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>‘ವ್ಯಕ್ತಿಯೊಬ್ಬರ ಮನೆ ಮೇಲೆ ನಡೆದಿರುವ ಐಟಿ ದಾಳಿಗೆ ಅವರು ಯಡಿಯೂರಪ್ಪ ಆಪ್ತ ಎಂದು ನಾನು ಸರ್ಟಿಫಿಕೇಟ್ ಕೊಡುವುದಿಲ್ಲ. ದಾಳಿ ಬಗ್ಗೆ ನನಗೆ ಎಲ್ಲವೂ ಗೊತ್ತಿದೆ. ಸದ್ಯಕ್ಕೆ ಈ ಬಗ್ಗೆ ಏನೂ ಮಾತನಾಡುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಡಿಯೂರಪ್ಪ ಅವರನ್ನು ಹೈಕಮಾಂಡ್ ಹೇಗೆ ನಡೆಸಿಕೊಂಡು ಬಂದಿದೆ ಎಂದು ರಾಜ್ಯದ ಜನರಿಗೆ ಗೊತ್ತಿದೆ ಎಂದರು.</p>.<p>ಹಾನಗಲ್ ಕ್ಷೇತ್ರದಲ್ಲಿ ಜನ ಬದಲಾವಣೆ ಬಯಸಿದ್ದು, ಈಗಿನ ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ನಮ್ಮ ಅಭ್ಯರ್ಥಿ ನಿರಂತರವಾಗಿ ಜನಸಂಪರ್ಕದಲ್ಲಿದ್ದಾರೆ. ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರದಿಂದ ನಮಗೆ ಏನೂ ಸಿಕ್ಕಿಲ್ಲ ಎಂದು ಜನ ಆಕ್ರೋಶಗೊಂಡಿದ್ದಾರೆ. ಆದ್ದರಿಂದ ಬದಲಾವಣೆ ಬಯಸಿದ್ದಾರೆ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/district/dharwad/karnataka-politics-siddaramaiah-basavaraj-bommai-bs-yediyurappa-it-raid-873552.html" target="_blank">ಸಿ.ಎಂ ಬೊಮ್ಮಾಯಿ ಮನೆ ಮೇಲೆ ಐಟಿ ದಾಳಿ ಮಾಡೋಕೆ ಆಗುತ್ತಾ? ಸಿದ್ದರಾಮಯ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>