‘ಚುನಾವಣಾ ಫಲಿತಾಂಶ ತಮಗೆ ಸಮಾಧಾನ ತಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಶಾಸಕ ಜಗದೀಶ ಶೆಟ್ಟರ್ ಹೇಳಲಿ ನೋಡೋಣ. ಸ್ಥಳೀಯವಾಗಿ ಮತದಾನದ ಹಕ್ಕು ಹಾಗೂ ಘಟಾನುಘಟಿ ನಾಯಕರಿದ್ದರೂ, ಬಹುಮತ ಪಡೆಯಲು ಬಿಜೆಪಿಗೆ ಸಾಧ್ಯವಾಗಿಲ್ಲ. ತಮಗೆ ಬೇಕಾದ ಹಾಗೆ ವಾರ್ಡ್ ವಿಂಗಡಣೆ ಮಾಡಿ, ಮೀಸಲಾತಿ ಘೋಷಿಸಿಕೊಂಡು, ಚುನಾವಣೆ ನಡೆಸಿದರು. ಆದರೂ ಅವರಿಗೆ, ಅವಳಿನಗರದ ಮತದಾರರು ತಕ್ಕ ಉತ್ತರ ಪತ್ರ ನೀಡಿದ್ದಾರೆ’ ಎಂದು ಅಭಿಪ್ರಾಯಪಟ್ಟರು.