ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿ ಸಂತ್ರಸ್ತ ಜನರನ್ನು ಮಾತನಾಡಿಸಿದ್ದೇನೆ. ಆಗಸ್ಟ್ 1ರಂದು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡುತ್ತೇನೆ. ಪರಿಹಾರ ನೀಡುವಲ್ಲಿ ಬಿಜೆಪಿ ಸರ್ಕಾರ ಬರೀ ಸುಳ್ಳು ಹೇಳುತ್ತಿದೆ. ಜನರ ನೋವು ಆಲಿಸುವಲ್ಲಿ ವಿಫಲವಾಗಿದೆ. ಹೊಸ ಮುಖ್ಯಮಂತ್ರಿ ಏನು ಮಾಡುತ್ತಾರೆ ಎನ್ನುವುದನ್ನು ನೋಡಬೇಕಿದೆ ಎಂದರು.