ಫ್ರಾನ್ಸ್ನ ರಾಷ್ಟ್ರೀಯ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಶ್ರೀನಿವಾಸ ಕಾವೇರಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಇದಕ್ಕಾಗಿ ಇಡೀ ರಾಜ್ಯದಲ್ಲೇ ಕರ್ನಾಟಕ ವಿಶ್ವವಿದ್ಯಾಲಯವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಸಂಶೋಧನಾ ಕ್ಷೇತ್ರವನ್ನು ಇನ್ನಷ್ಟು ಸದೃಢಗೊಳಿಸುವುದು ಮತ್ತು ಜಾಗತಿಕ ಮಟ್ಟದಲ್ಲಿನ ಸವಾಲುಗಳನ್ನು ಎದುರಿಸಲು ನುರಿತ ಸಂಶೋಧಕರನ್ನು ಸಜ್ಜಗೊಳಿಸುವ ಕುರಿತು ಐರೋಪ್ಯ ಒಕ್ಕೂಟದ ಈ ತಂಡ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ನಡೆಯುತ್ತಿರುವ ಕಾರ್ಯಾಗಾರವು ಜ. 16ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಜರುಗಲಿದೆ’ ಎಂದು ಮಾಹಿತಿ ನೀಡಿದರು.