<p><strong>ಹುಬ್ಬಳ್ಳಿ:</strong> ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ, ಗದಗ, ವಿಜಯಪುರ, ಬೆಳಗಾವಿ ವಿಭಾಗದಲ್ಲಿನ ಕೈಗಾರಿಕಾ ವಸಾಹತುಗಳನ್ನು ವಿಶೇಷ ಸೌಲಭ್ಯಗಳೊಂದಿಗೆ ಅಭಿವೃದ್ಧಿ ಪಡಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಈ ಬಾರಿ ಬಜೆಟ್ನಲ್ಲಿ ಆದ್ಯತೆ ನೀಡಬೇಕು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು (ಕೆಸಿಸಿಐ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.</p>.<p>ಬೆಂಗಳೂರಿನಲ್ಲಿ ಈಚೆಗೆ ಮುಖ್ಯಮಂತ್ರಿಯವರನ್ನು ಭೇಟಿಯಾದ ಕೆಸಿಸಿಐ ಅಧ್ಯಕ್ಷ ಜಿ.ಕೆ.ಆದಪ್ಪಗೌಡರ ಮತ್ತು ಗೌರವ ಕಾರ್ಯದರ್ಶಿ ಉದಯ ರೇವಣಕರ ಅವರು ಬೇಡಿಕೆಗಳಿಗೆ ಸ್ಪಂದಿಸುವಂತೆ ಕೋರಿದರು. ‘ಡಿಫೆನ್ಸ್ ಪಾರ್ಕ್ ಸ್ಥಾಪನೆಗೆ ಕಿತ್ತೂರ ಭಾಗದಲ್ಲಿ ತಾತ್ವಿಕವಾಗಿ ಒಪ್ಪಿಗೆ ನೀಡಲಾಗಿದ್ದು, ಯೋಜನೆಯ ಅನುಷ್ಠಾನದಿಂದ ಉದ್ಯೋಗಾವಕಾಶ ಹೆಚ್ಚುತ್ತದೆ. ಈ ಬಗ್ಗೆ ಕ್ರಮ ವಹಿಸಬೇಕು’ ಎಂದು ಅವರು ಮನವಿ ಮಾಡಿದರು.</p>.<p>ನವಲಗುಂದ, ನರಗುಂದ ಮುನವಳ್ಳಿ, ಯರಗಟ್ಟಿ ಗೋಕಾಕ ಮತ್ತು ಘಟಪ್ರಭಾವನ್ನು ಸಂಪರ್ಕಿಸುವ ಅಣ್ಣಿಗೇರಿಯಿಂದ ಯಲ್ಲಮ್ಮನಗುಡ್ಡ 134 ಕಿಮೀ., ಹೊಸ ರೈಲು ಮಾರ್ಗದ ಸಮೀಕ್ಷೆ ಮಾಡಬೇಕು. ಅಮರಗೋಳದ ಎಪಿಎಂಸಿ ಮಾರುಕಟ್ಟೆಯಲ್ಲಿ ಮೂಲಸೌಕರ್ಯ ಕೊರತೆಯಿದ್ದು, ಮಾರುಕಟ್ಟೆ ಅಭಿವೃದ್ಧಿಗೆ ₹500 ಕೋಟಿ ಅನುದಾನ ನೀಡುವ ಮೂಲಕ ಪೂರ್ಣ ಪ್ರಮಾಣದಲ್ಲಿ ಅಗತ್ಯ ಸೌಕರ್ಯ ಕಲ್ಪಿಸಬೇಕು. ಎಲ್ಲಾ ಎಪಿಎಂಸಿಗಳಲ್ಲಿ ವೈಫೈ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಅವರು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ, ಗದಗ, ವಿಜಯಪುರ, ಬೆಳಗಾವಿ ವಿಭಾಗದಲ್ಲಿನ ಕೈಗಾರಿಕಾ ವಸಾಹತುಗಳನ್ನು ವಿಶೇಷ ಸೌಲಭ್ಯಗಳೊಂದಿಗೆ ಅಭಿವೃದ್ಧಿ ಪಡಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಈ ಬಾರಿ ಬಜೆಟ್ನಲ್ಲಿ ಆದ್ಯತೆ ನೀಡಬೇಕು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು (ಕೆಸಿಸಿಐ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.</p>.<p>ಬೆಂಗಳೂರಿನಲ್ಲಿ ಈಚೆಗೆ ಮುಖ್ಯಮಂತ್ರಿಯವರನ್ನು ಭೇಟಿಯಾದ ಕೆಸಿಸಿಐ ಅಧ್ಯಕ್ಷ ಜಿ.ಕೆ.ಆದಪ್ಪಗೌಡರ ಮತ್ತು ಗೌರವ ಕಾರ್ಯದರ್ಶಿ ಉದಯ ರೇವಣಕರ ಅವರು ಬೇಡಿಕೆಗಳಿಗೆ ಸ್ಪಂದಿಸುವಂತೆ ಕೋರಿದರು. ‘ಡಿಫೆನ್ಸ್ ಪಾರ್ಕ್ ಸ್ಥಾಪನೆಗೆ ಕಿತ್ತೂರ ಭಾಗದಲ್ಲಿ ತಾತ್ವಿಕವಾಗಿ ಒಪ್ಪಿಗೆ ನೀಡಲಾಗಿದ್ದು, ಯೋಜನೆಯ ಅನುಷ್ಠಾನದಿಂದ ಉದ್ಯೋಗಾವಕಾಶ ಹೆಚ್ಚುತ್ತದೆ. ಈ ಬಗ್ಗೆ ಕ್ರಮ ವಹಿಸಬೇಕು’ ಎಂದು ಅವರು ಮನವಿ ಮಾಡಿದರು.</p>.<p>ನವಲಗುಂದ, ನರಗುಂದ ಮುನವಳ್ಳಿ, ಯರಗಟ್ಟಿ ಗೋಕಾಕ ಮತ್ತು ಘಟಪ್ರಭಾವನ್ನು ಸಂಪರ್ಕಿಸುವ ಅಣ್ಣಿಗೇರಿಯಿಂದ ಯಲ್ಲಮ್ಮನಗುಡ್ಡ 134 ಕಿಮೀ., ಹೊಸ ರೈಲು ಮಾರ್ಗದ ಸಮೀಕ್ಷೆ ಮಾಡಬೇಕು. ಅಮರಗೋಳದ ಎಪಿಎಂಸಿ ಮಾರುಕಟ್ಟೆಯಲ್ಲಿ ಮೂಲಸೌಕರ್ಯ ಕೊರತೆಯಿದ್ದು, ಮಾರುಕಟ್ಟೆ ಅಭಿವೃದ್ಧಿಗೆ ₹500 ಕೋಟಿ ಅನುದಾನ ನೀಡುವ ಮೂಲಕ ಪೂರ್ಣ ಪ್ರಮಾಣದಲ್ಲಿ ಅಗತ್ಯ ಸೌಕರ್ಯ ಕಲ್ಪಿಸಬೇಕು. ಎಲ್ಲಾ ಎಪಿಎಂಸಿಗಳಲ್ಲಿ ವೈಫೈ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಅವರು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>