<p><strong>ಹುಬ್ಬಳ್ಳಿ:</strong> ಕರ್ನಾಟಕ ಜಿಮ್ಖಾನಾ ಅಸೋಸಿಯೇಷನ್ ಆಶ್ರಯದಲ್ಲಿ ಹಮ್ಮಿಕೊಂಡಿರುವ ಕೆಜಿಪಿಎಲ್ (ಕರ್ನಾಟಕ ಜಿಮ್ಖಾನಾ ಪ್ರೀಮಿಯರ್ ಲೀಗ್) ಬ್ಯಾಡ್ಮಿಂಟನ್ ಟೂರ್ನಿ–ಸೀಸನ್ 3ಗೆ ನಗರದ ಜಿಮ್ಖಾನಾ ಕ್ಲಬ್ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ಕ್ಲಬ್ ಚೇರ್ಮನ್ ನಂದಕುಮಾರ ಮಾತನಾಡಿ, ‘ವಿಶ್ವ ಬ್ಯಾಡ್ಮಿಂಟನ್ ದಿನಾಚರಣೆಗೆ ಅಂಗವಾಗಿ ಈ ಟೂರ್ನಿ ಆಯೋಜಿಸಲಾಗಿದ್ದು, ಈ ಮೂಲಕ ಕ್ರೀಡಾಪಟುಗಳ ಹಾಗೂ ಕ್ರೀಡಾಭಿಮಾನಿಗಳ ಸ್ಥೈರ್ಯ ಹೆಚ್ಚಿಸಲಾಗಿದೆ’ ಎಂದರು.</p>.<p>ಅಸೋಸಿಯೇಷನ್ ಉಪಾಧ್ಯಕ್ಷ ಗೋವಿಂದ ಜೋಶಿ ಮಾತನಾಡಿ, ‘ಕ್ರೀಡೆ ಆರೋಗ್ಯಕರ ಜೀವನಶೈಲಿಯ ಭಾಗವಾಗಿದೆ. ಒತ್ತಡದಿಂದ ಹೊರಬರಲು ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಅಸೋಸಿಯೇಷನ್ ಕಾರ್ಯದರ್ಶಿ ವೀರಣ್ಣ ಸವಡಿ ಮಾತನಾಡಿ, ‘ಟೂರ್ನಿಯಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸಿದ್ದು, ರಾಜ್ಯಮಟ್ಟದಲ್ಲಿ ಪ್ರತಿನಿಧಿಸಿದ ಆಟಗಾರರು ಕೂಡ ಆಡಲಿದ್ದಾರೆ. ಕ್ರೀಡಾಪ್ರೇಮಿಗಳಿಗೆ ಇದು ರಸದೌತಣ ನೀಡಲಿದೆ’ ಎಂದು ತಿಳಿಸಿದರು.</p>.<p>ದುರ್ಗಾ ಡೆವಲಪರ್ಸ್ ಮತ್ತು ಪ್ರಮೋಟರ್ಸ್ನ ವ್ಯವಸ್ಥಾಪಕ ನಿರ್ದೇಶಕ ವೀರೇಶ ಉಂಡಿ ಮಾತನಾಡಿದರು. ಸಂಯೋಜಕ ಉದಯ ಬಾಡಕರ್, ಸಂಕಲ್ಪ ಶೆಟ್ಟರ್, ಸಮುಂದ್ರಸಿಂಗ್, ವಿನೋದ ಬತ್ತದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಕರ್ನಾಟಕ ಜಿಮ್ಖಾನಾ ಅಸೋಸಿಯೇಷನ್ ಆಶ್ರಯದಲ್ಲಿ ಹಮ್ಮಿಕೊಂಡಿರುವ ಕೆಜಿಪಿಎಲ್ (ಕರ್ನಾಟಕ ಜಿಮ್ಖಾನಾ ಪ್ರೀಮಿಯರ್ ಲೀಗ್) ಬ್ಯಾಡ್ಮಿಂಟನ್ ಟೂರ್ನಿ–ಸೀಸನ್ 3ಗೆ ನಗರದ ಜಿಮ್ಖಾನಾ ಕ್ಲಬ್ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ಕ್ಲಬ್ ಚೇರ್ಮನ್ ನಂದಕುಮಾರ ಮಾತನಾಡಿ, ‘ವಿಶ್ವ ಬ್ಯಾಡ್ಮಿಂಟನ್ ದಿನಾಚರಣೆಗೆ ಅಂಗವಾಗಿ ಈ ಟೂರ್ನಿ ಆಯೋಜಿಸಲಾಗಿದ್ದು, ಈ ಮೂಲಕ ಕ್ರೀಡಾಪಟುಗಳ ಹಾಗೂ ಕ್ರೀಡಾಭಿಮಾನಿಗಳ ಸ್ಥೈರ್ಯ ಹೆಚ್ಚಿಸಲಾಗಿದೆ’ ಎಂದರು.</p>.<p>ಅಸೋಸಿಯೇಷನ್ ಉಪಾಧ್ಯಕ್ಷ ಗೋವಿಂದ ಜೋಶಿ ಮಾತನಾಡಿ, ‘ಕ್ರೀಡೆ ಆರೋಗ್ಯಕರ ಜೀವನಶೈಲಿಯ ಭಾಗವಾಗಿದೆ. ಒತ್ತಡದಿಂದ ಹೊರಬರಲು ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಅಸೋಸಿಯೇಷನ್ ಕಾರ್ಯದರ್ಶಿ ವೀರಣ್ಣ ಸವಡಿ ಮಾತನಾಡಿ, ‘ಟೂರ್ನಿಯಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸಿದ್ದು, ರಾಜ್ಯಮಟ್ಟದಲ್ಲಿ ಪ್ರತಿನಿಧಿಸಿದ ಆಟಗಾರರು ಕೂಡ ಆಡಲಿದ್ದಾರೆ. ಕ್ರೀಡಾಪ್ರೇಮಿಗಳಿಗೆ ಇದು ರಸದೌತಣ ನೀಡಲಿದೆ’ ಎಂದು ತಿಳಿಸಿದರು.</p>.<p>ದುರ್ಗಾ ಡೆವಲಪರ್ಸ್ ಮತ್ತು ಪ್ರಮೋಟರ್ಸ್ನ ವ್ಯವಸ್ಥಾಪಕ ನಿರ್ದೇಶಕ ವೀರೇಶ ಉಂಡಿ ಮಾತನಾಡಿದರು. ಸಂಯೋಜಕ ಉದಯ ಬಾಡಕರ್, ಸಂಕಲ್ಪ ಶೆಟ್ಟರ್, ಸಮುಂದ್ರಸಿಂಗ್, ವಿನೋದ ಬತ್ತದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>