ಏನಿದು ಪ್ರಕರಣ: ‘ನಗರದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಗರೀಬ್ನವಾಜ್ ಅವರ ಸ್ನೇಹಿತ ದಿಲ್ವಾರ್, ಆನ್ಲೈನ್ನಲ್ಲಿ ಕ್ಯಾಸಿನೋ ಗೇಮ್ ಆಡಿ, ಸುಮಾರು ₹ 10 ಕೋಟಿ ಸಂಪಾದಿಸಿದ್ದ. ಸ್ನೇಹಿತರ ಜೊತೆ ಸೇರಿ ಬೇಕಾಬಿಟ್ಟಿಯಾಗಿ ಹಣ ವೆಚ್ಚ ಮಾಡುತ್ತಿದ್ದ. ಅಲ್ಲದೆ, ಅಷ್ಟೊಂದು ಹಣ ತನ್ನಲ್ಲಿ ಇಟ್ಟುಕೊಳ್ಳಲು ಸಮಸ್ಯೆಯಾಗುತ್ತದೆ ಎಂದು ಸ್ನೇಹಿತ ಗರೀಬ್ನವಾಜ್ ಖಾತೆಗೆ ಒಂದಷ್ಟು ಹಣ ವರ್ಗಾಯಿಸಿರುತ್ತಾನೆ. ಈ ವಿಷಯ ತಿಳಿದ ಆರೋಪಿತರು ಅವನ ಸ್ನೇಹಿತ, ಮಹ್ಮದ್ ಆರೀಫ್ ಎಂಬುವವನ ಸಹಾಯ ಪಡೆದು, ಗರೀಬ್ನವಾಜ್ನನ್ನು ಗೋಕುಲ ರಸ್ತೆಯ ಡೆಕಥ್ಲಾನ್ ಬಳಿ ಅಪಹರಿಸುತ್ತಾರೆ. ನಂತರ ಅವರ ತಂದೆಗೆ ಕರೆ ಮಾಡಿ ₹1ಕೋಟಿಗೆ ಬೇಡಿಕೆ ಇಡುತ್ತಾರೆ. ಒಪ್ಪದಿದ್ದಾಗ ₹15 ಲಕ್ಷ ನೀಡಬೇಕು, ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.