<p>ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದ ಧಾರವಾಡದ ಮಾಳಮಡ್ಡಿಯ ರಾಘವೇಂದ್ರ ಶಂಕ್ರಪ್ಪ ಎಂಬುವವರು ಮಂಗಳವಾರ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಒಂದು ವಾರದಿಂದ ಕಟ್ಟಡಕ್ಕೆ ಬಣ್ಣ ಹಚ್ಚುವ ಕೆಲಸ ನಡೆದಿತ್ತು.</p>.<p>ಎರಡನೆ ಮಹಡಿಯಿಂದ ಬಿದ್ದ ತಕ್ಷಣವೇ ಆಸ್ಪತ್ರೆಯ ತುರ್ತು ಚಿಕಿತ್ಸೆ ವಿಭಾಗಕ್ಕೆ ಕರೆದುಕೊಂಡು ಹೋಗಲಾಗಿತ್ತು. ಆ ವೇಳೆಗಾಗಲೇ ರಾಘವೇಂದ್ರ ಮೃತಪಟ್ಟಿದ್ದರು ಎಂದು ವೈದ್ಯಕೀಯ ಸಿಬ್ಬಂದಿ ತಿಳಿಸಿದ್ದಾರೆ. ವಿದ್ಯಾನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.</p>.<p>ಇಲಿಯಾಸ್ ಸಾವು: ಡಿ. 11ರಂದು ನಗರದಲ್ಲಿ ನಡೆದಿದ್ದ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಲಿಯಾಸ್ ಅಹ್ಮದ್ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಎಗ್ ರೈಸ್ ಅಂಗಡಿ ನಡೆಸುತ್ತಿದ್ದ ಅಹ್ಮದ್ ಮೇಲೆ ಹಲ್ಲೆ ನಡೆದಿತ್ತು. ಶಹರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.</p>.<p>ಮಹಿಳೆ ಮೇಲೆ ಹಲ್ಲೆ, ಬಂಧನ: ಹೆಗ್ಗೇರಿಯ ಮಾರುತಿ ನಗರದಲ್ಲಿ ಭಾನುವಾರ ತಡರಾತ್ರಿ ರಾಜೇಶ್ವರಿ ಎಂಬುವರ ಮೇಲೆ ರೌಡಿಶೀಟರ್ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.</p>.<p>ಗಲಾಟೆ ಮಾಡಬೇಡಿ ಎಂದು ರಾಜೇಶ್ವರಿ ಬುದ್ಧಿವಾದ ಹೇಳಿದ್ದಕ್ಕೆ ರೌಡಿಶೀಟರ್ ಸಚಿನ್ ಹೆಬ್ಬಳ್ಳಿ ಮತ್ತು ರಾಕೇಶ ಹೆಬ್ಬಳ್ಳಿ ಸೇರಿಕೊಂಡು ಹಲ್ಲೆ ಮಾಡಿದ್ದರು. ಈ ಕುರಿತು ಮಹಿಳೆ ದೂರು ನೀಡಿದ್ದರು. ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೂವರ ಬಂಧನ: ನಗರದ ವಿವಿಧೆಡೆ ಜೂಜಾಟದಲ್ಲಿ ತೊಡಗಿದ್ದ ಮೂವರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದ್ದು ಅವರಿಂದ ₹21,620 ನಗದು ವಶಪಡಿಸಿಕೊಳ್ಳಲಾಗಿದೆ.</p>.<p>ಹಳೇ-ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಆನಂದ ನಗರದಲ್ಲಿ ಜೂಜಾಟವಾಡುತ್ತಿದ್ದ ಮುಜಾಮೀಲ್ ಸುದರ್ಜಿ ಮತ್ತು ಮಲ್ಲಿಕ ಬಳಿಗಾರ ಎಂಬುವರಿಂದ ₹20,300 ಹಣ ಮತ್ತು ಎರಡು ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಶೋಕ ನಗರ ಠಾಣೆ ವ್ಯಾಪ್ತಿಯ ಶಕ್ತಿ ಕಾಲೊನಿಯಲ್ಲಿ ಜೂಜಾಟವಾಡುತ್ತಿದ್ದ ಸ್ವಾಗತ ಕಾಲೊನಿಯ ಇರ್ಷಾದ ಹುಬ್ಬಳ್ಳಿ ಎಂಬಾತನನ್ನು ಬಂಧಿಸಿ ₹1,320 ವಶಕ್ಕೆ ಪಡೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದ ಧಾರವಾಡದ ಮಾಳಮಡ್ಡಿಯ ರಾಘವೇಂದ್ರ ಶಂಕ್ರಪ್ಪ ಎಂಬುವವರು ಮಂಗಳವಾರ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಒಂದು ವಾರದಿಂದ ಕಟ್ಟಡಕ್ಕೆ ಬಣ್ಣ ಹಚ್ಚುವ ಕೆಲಸ ನಡೆದಿತ್ತು.</p>.<p>ಎರಡನೆ ಮಹಡಿಯಿಂದ ಬಿದ್ದ ತಕ್ಷಣವೇ ಆಸ್ಪತ್ರೆಯ ತುರ್ತು ಚಿಕಿತ್ಸೆ ವಿಭಾಗಕ್ಕೆ ಕರೆದುಕೊಂಡು ಹೋಗಲಾಗಿತ್ತು. ಆ ವೇಳೆಗಾಗಲೇ ರಾಘವೇಂದ್ರ ಮೃತಪಟ್ಟಿದ್ದರು ಎಂದು ವೈದ್ಯಕೀಯ ಸಿಬ್ಬಂದಿ ತಿಳಿಸಿದ್ದಾರೆ. ವಿದ್ಯಾನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.</p>.<p>ಇಲಿಯಾಸ್ ಸಾವು: ಡಿ. 11ರಂದು ನಗರದಲ್ಲಿ ನಡೆದಿದ್ದ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಲಿಯಾಸ್ ಅಹ್ಮದ್ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಎಗ್ ರೈಸ್ ಅಂಗಡಿ ನಡೆಸುತ್ತಿದ್ದ ಅಹ್ಮದ್ ಮೇಲೆ ಹಲ್ಲೆ ನಡೆದಿತ್ತು. ಶಹರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.</p>.<p>ಮಹಿಳೆ ಮೇಲೆ ಹಲ್ಲೆ, ಬಂಧನ: ಹೆಗ್ಗೇರಿಯ ಮಾರುತಿ ನಗರದಲ್ಲಿ ಭಾನುವಾರ ತಡರಾತ್ರಿ ರಾಜೇಶ್ವರಿ ಎಂಬುವರ ಮೇಲೆ ರೌಡಿಶೀಟರ್ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.</p>.<p>ಗಲಾಟೆ ಮಾಡಬೇಡಿ ಎಂದು ರಾಜೇಶ್ವರಿ ಬುದ್ಧಿವಾದ ಹೇಳಿದ್ದಕ್ಕೆ ರೌಡಿಶೀಟರ್ ಸಚಿನ್ ಹೆಬ್ಬಳ್ಳಿ ಮತ್ತು ರಾಕೇಶ ಹೆಬ್ಬಳ್ಳಿ ಸೇರಿಕೊಂಡು ಹಲ್ಲೆ ಮಾಡಿದ್ದರು. ಈ ಕುರಿತು ಮಹಿಳೆ ದೂರು ನೀಡಿದ್ದರು. ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೂವರ ಬಂಧನ: ನಗರದ ವಿವಿಧೆಡೆ ಜೂಜಾಟದಲ್ಲಿ ತೊಡಗಿದ್ದ ಮೂವರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದ್ದು ಅವರಿಂದ ₹21,620 ನಗದು ವಶಪಡಿಸಿಕೊಳ್ಳಲಾಗಿದೆ.</p>.<p>ಹಳೇ-ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಆನಂದ ನಗರದಲ್ಲಿ ಜೂಜಾಟವಾಡುತ್ತಿದ್ದ ಮುಜಾಮೀಲ್ ಸುದರ್ಜಿ ಮತ್ತು ಮಲ್ಲಿಕ ಬಳಿಗಾರ ಎಂಬುವರಿಂದ ₹20,300 ಹಣ ಮತ್ತು ಎರಡು ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಶೋಕ ನಗರ ಠಾಣೆ ವ್ಯಾಪ್ತಿಯ ಶಕ್ತಿ ಕಾಲೊನಿಯಲ್ಲಿ ಜೂಜಾಟವಾಡುತ್ತಿದ್ದ ಸ್ವಾಗತ ಕಾಲೊನಿಯ ಇರ್ಷಾದ ಹುಬ್ಬಳ್ಳಿ ಎಂಬಾತನನ್ನು ಬಂಧಿಸಿ ₹1,320 ವಶಕ್ಕೆ ಪಡೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>