ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆ ಮತ್ತು ಆಡಳಿತಾಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ, ಕಿಮ್ಸ್ ಆಸ್ಪತ್ರೆಯ ಶುಶ್ರೂಷಕರು ಗುರುವಾರ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.
ಶುಶ್ರೂಷಕರ ತಂಡವನ್ನುಬೆಳಿಗ್ಗೆ ಭೇಟಿ ಮಾಡಿದ ಜಿಲ್ಲಾಧಿಕಾರಿ ಅಹವಾಲುಗಳನ್ನು ಆಲಿಸಿ, ಮನವಿ ಸ್ವೀಕರಿಸಿದರು.
ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಡಿ.ಸಿ ಭರವಸೆ ನೀಡಿದ್ದಾರೆ. ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರೊಂದಿಗೆ ಚರ್ಚಿಸಿರುವುದಾಗಿ ಹೇಳಿದ ಅವರು, ಆಡಳಿತಾಧಿಕಾರಿಯೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಶುಶ್ರೂಷಕರು ‘ಪ್ರಜಾವಾಣಿ’ಗೆ ತಿಳಿಸಿದರು.
ಬೇಡಿಕೆಗಳ ಮನವಿ ಪತ್ರವನ್ನು ಆಡಳಿತಾಧಿಕಾರಿ ಹರಿದು ಹಾಕಿ, ನೌಕರರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ, ಬುಧವಾರ ರಾತ್ರಿಯವರೆಗೆ ಶುಶ್ರೂಷಕರು ಪ್ರತಿಭಟಿಸಿದ್ದರು.