<p><strong>ಹುಬ್ಬಳ್ಳಿ</strong>: ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಗದಗ ಸೇರಿಕಿತ್ತೂರು ಕರ್ನಾಟಕದ ವಿವಿಧೆಡೆ ಸೋಮವಾರ ಬಿರುಸಿನ ಮಳೆ ಸುರಿಯಿತು.</p>.<p>ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಗಾಳಿ, ಸಿಡಿಲು ಸಹಿತ ಮಳೆ ಸುರಿದಿದ್ದರಿಂದ 70ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, 20ಕ್ಕೂ ಹೆಚ್ಚು ಕಾರು, ದ್ವಿಚಕ್ರ ವಾಹನಗಳು ಜಖಂಗೊಂಡಿವೆ.</p>.<p>ಧಾರವಾಡ ಜಿಲ್ಲೆ ಅಂಬೋಳಿ ಗ್ರಾಮದಲ್ಲಿ ಮನೆಯ ಚಾವಣಿಯ ಶೀಟುಗಳು ಹಾರಿ ಹೋಗಿವೆ. ಅಣ್ಣಿಗೇರಿ, ನವಲಗುಂದ, ಕಲಘಟಗಿ, ಉಪ್ಪಿನಬೆಟಗೇರಿ, ಗುಡಗೇರಿಯಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಬೆಳಗಾವಿ ಜಿಲ್ಲೆ ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದಲ್ಲಿ ಮುನವಳ್ಳಿ–ಬೈಲಹೊಂಗಲಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಸೇತುವೆ ಕೊಚ್ಚಿ ಹೋಗಿ ಸಂಚಾರ ಸಂಪೂರ್ಣ ಬಂದ್ ಆಗಿದೆ.</p>.<p>ಉತ್ತರ ಕನ್ನಡ ಜಿಲ್ಲೆಯ ಜಿಲ್ಲೆಯ ಹಳಿಯಾಳದಲ್ಲಿ ಬಿರುಸಿನ, ಭಟ್ಕಳ ಸೇರಿದಂತೆ ಕರಾವಳಿ ಪ್ರದೇಶ, ಮುಂಡಗೋಡ ಸೇರಿ ಅರೆಮಲೆನಾಡು ಭಾಗದಲ್ಲಿ ಸಾಧಾರಣ ಮಳೆ ಆಯಿತು.</p>.<p>ಆಳ ಸಮುದ್ರಕ್ಕೆ ತೆರಳಬೇಕಿದ್ದ ಹತ್ತಾರು ದೋಣಿಗಳು ಇಲ್ಲಿನ ಬೈತಕೋಲ ಮೀನುಗಾರಿಕೆ ಬಂದರಿನಲ್ಲಿ ಲಂಗರು ಹಾಕಿವೆ. ಮಲ್ಪೆ, ಗೋವಾ ಸೇರಿದಂತೆ ವಿವಿಧೆಡೆಯ ದೋಣಿಗಳು ಇಲ್ಲಿಯೇ ಆಶ್ರಯ ಪಡೆದಿವೆ.</p>.<p>ಗದಗ ನಗರ ಸೇರಿದಂತೆ ತಾಲ್ಲೂಕಿನ ಸುತ್ತಮುತ್ತ ಬಿರುಗಾಳಿ ಸಹಿತ ಮಳೆ ಸುರಿಯಿತು. ಬಾಗಲಕೋಟೆ, ನವನಗರ, ಜಿಲ್ಲೆಯ ತೇರದಾಳದಲ್ಲಿ ಜೋರು ಗಾಳಿ, ಮಳೆಯಿಂದಾಗಿ ಕೆಲವೆಡೆ ಮರಗಳು ಧರೆಗುರುಳಿದವು.</p>.<p>ಬಿರುಸಿನ ಮಳೆ – ಬೆಳೆಗಳಿಗೆ ಹಾನಿ (ಚಾಮರಾಜನಗರ ವರದಿ) : ಜಿಲ್ಲೆಯ ಹನೂರು, ಗುಂಡ್ಲುಪೇಟೆ, ಯಳಂದೂರು, ಚಾಮರಾಜನಗರ ತಾಲ್ಲೂಕುಗಳಲ್ಲಿ ಸೋಮವಾರ ಬಿರುಸಿನ ಮಳೆಸುರಿಯಿತು.</p>.<p>ಗುಂಡ್ಲುಪೇಟೆ ತಾಲ್ಲೂಕಿನ ಬೀಮನಮಡುವಿನಲ್ಲಿ ರೈತ ಮಹದೇವ ಅವರ ಜಮೀನಿನಲ್ಲಿ ಬೆಳೆದಿದ್ದ ಬೆಳ್ಳುಳ್ಳಿ, ಈರುಳ್ಳಿ, ಅರಿಸಿನ ಬೆಳೆ ಕೊಚ್ಚಿ ಹೋಗಿದೆ. ಹಲವೆಡೆ ಬಾಳೆ ಗಿಡಗಳು, ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಹನೂರು ತಾಲ್ಲೂಕಿನಲ್ಲಿ ಕೆರೆ– ಕಟ್ಟೆಗಳಲ್ಲಿ ಕೊಂಚ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-51-1349567284</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಗದಗ ಸೇರಿಕಿತ್ತೂರು ಕರ್ನಾಟಕದ ವಿವಿಧೆಡೆ ಸೋಮವಾರ ಬಿರುಸಿನ ಮಳೆ ಸುರಿಯಿತು.</p>.<p>ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಗಾಳಿ, ಸಿಡಿಲು ಸಹಿತ ಮಳೆ ಸುರಿದಿದ್ದರಿಂದ 70ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, 20ಕ್ಕೂ ಹೆಚ್ಚು ಕಾರು, ದ್ವಿಚಕ್ರ ವಾಹನಗಳು ಜಖಂಗೊಂಡಿವೆ.</p>.<p>ಧಾರವಾಡ ಜಿಲ್ಲೆ ಅಂಬೋಳಿ ಗ್ರಾಮದಲ್ಲಿ ಮನೆಯ ಚಾವಣಿಯ ಶೀಟುಗಳು ಹಾರಿ ಹೋಗಿವೆ. ಅಣ್ಣಿಗೇರಿ, ನವಲಗುಂದ, ಕಲಘಟಗಿ, ಉಪ್ಪಿನಬೆಟಗೇರಿ, ಗುಡಗೇರಿಯಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಬೆಳಗಾವಿ ಜಿಲ್ಲೆ ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದಲ್ಲಿ ಮುನವಳ್ಳಿ–ಬೈಲಹೊಂಗಲಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಸೇತುವೆ ಕೊಚ್ಚಿ ಹೋಗಿ ಸಂಚಾರ ಸಂಪೂರ್ಣ ಬಂದ್ ಆಗಿದೆ.</p>.<p>ಉತ್ತರ ಕನ್ನಡ ಜಿಲ್ಲೆಯ ಜಿಲ್ಲೆಯ ಹಳಿಯಾಳದಲ್ಲಿ ಬಿರುಸಿನ, ಭಟ್ಕಳ ಸೇರಿದಂತೆ ಕರಾವಳಿ ಪ್ರದೇಶ, ಮುಂಡಗೋಡ ಸೇರಿ ಅರೆಮಲೆನಾಡು ಭಾಗದಲ್ಲಿ ಸಾಧಾರಣ ಮಳೆ ಆಯಿತು.</p>.<p>ಆಳ ಸಮುದ್ರಕ್ಕೆ ತೆರಳಬೇಕಿದ್ದ ಹತ್ತಾರು ದೋಣಿಗಳು ಇಲ್ಲಿನ ಬೈತಕೋಲ ಮೀನುಗಾರಿಕೆ ಬಂದರಿನಲ್ಲಿ ಲಂಗರು ಹಾಕಿವೆ. ಮಲ್ಪೆ, ಗೋವಾ ಸೇರಿದಂತೆ ವಿವಿಧೆಡೆಯ ದೋಣಿಗಳು ಇಲ್ಲಿಯೇ ಆಶ್ರಯ ಪಡೆದಿವೆ.</p>.<p>ಗದಗ ನಗರ ಸೇರಿದಂತೆ ತಾಲ್ಲೂಕಿನ ಸುತ್ತಮುತ್ತ ಬಿರುಗಾಳಿ ಸಹಿತ ಮಳೆ ಸುರಿಯಿತು. ಬಾಗಲಕೋಟೆ, ನವನಗರ, ಜಿಲ್ಲೆಯ ತೇರದಾಳದಲ್ಲಿ ಜೋರು ಗಾಳಿ, ಮಳೆಯಿಂದಾಗಿ ಕೆಲವೆಡೆ ಮರಗಳು ಧರೆಗುರುಳಿದವು.</p>.<p>ಬಿರುಸಿನ ಮಳೆ – ಬೆಳೆಗಳಿಗೆ ಹಾನಿ (ಚಾಮರಾಜನಗರ ವರದಿ) : ಜಿಲ್ಲೆಯ ಹನೂರು, ಗುಂಡ್ಲುಪೇಟೆ, ಯಳಂದೂರು, ಚಾಮರಾಜನಗರ ತಾಲ್ಲೂಕುಗಳಲ್ಲಿ ಸೋಮವಾರ ಬಿರುಸಿನ ಮಳೆಸುರಿಯಿತು.</p>.<p>ಗುಂಡ್ಲುಪೇಟೆ ತಾಲ್ಲೂಕಿನ ಬೀಮನಮಡುವಿನಲ್ಲಿ ರೈತ ಮಹದೇವ ಅವರ ಜಮೀನಿನಲ್ಲಿ ಬೆಳೆದಿದ್ದ ಬೆಳ್ಳುಳ್ಳಿ, ಈರುಳ್ಳಿ, ಅರಿಸಿನ ಬೆಳೆ ಕೊಚ್ಚಿ ಹೋಗಿದೆ. ಹಲವೆಡೆ ಬಾಳೆ ಗಿಡಗಳು, ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಹನೂರು ತಾಲ್ಲೂಕಿನಲ್ಲಿ ಕೆರೆ– ಕಟ್ಟೆಗಳಲ್ಲಿ ಕೊಂಚ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-51-1349567284</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>