<p><strong>ಹುಬ್ಬಳ್ಳಿ: </strong>‘ಕಿತ್ತೂರು ಉತ್ಸವಕ್ಕೆ ಹೋಗಿದ್ದರಿಂದ ನಾನು ಅಧಿಕಾರ ಕಳೆದುಕೊಂಡಿಲ್ಲ. ಮುಖ್ಯಮಂತ್ರಿ ಆಗಿ ನನ್ನ ಅವಧಿ ನಿಗದಿಯಾಗಿದ್ದು 10 ತಿಂಗಳು ಮಾತ್ರ. ಅದನ್ನು ಪೂರ್ಣಗೊಳಿಸಿದ್ದೇನೆ’ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.</p>.<p>ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಕಿತ್ತೂರು ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಿತ್ತೂರು ಉತ್ಸವ ಉದ್ಘಾಟನೆ ಮಾಡಿದ ನಂತರ ಜಗದೀಶ ಶೆಟ್ಟರ್ ಅವರು ಅಧಿಕಾರ ಕಳೆದುಕೊಂಡರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕಿತ್ತೂರು ಉತ್ಸವ, ಚಾಮರಾಜನಗರಕ್ಕೆ ಹೋದರೂ ನನಗೆ ಏನೂ ಆಗಲಿಲ್ಲ’ ಎಂದರು.</p>.<p>‘ಕಂದಾಯ ಸಚಿವ, ವಿಧಾನಸಭಾಧ್ಯಕ್ಷನಾಗಿದ್ದಾಗ ಪ್ರತಿ ವರ್ಷ ಕಿತ್ತೂರು ಉತ್ಸವಕ್ಕೆ ಹೋಗಿದ್ದೇನೆ. ಮುಖ್ಯಮಂತ್ರಿ ಆದ ನಂತರ ಮೂರೇ ತಿಂಗಳಲ್ಲಿ ಚಾಮರಾಜನಗರಕ್ಕೂ ಭೇಟಿ ನೀಡಿದ್ದೆ’ ಎಂದು ಹೇಳಿದರು.</p>.<p>‘ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿತ್ತೂರು ಉತ್ಸವಕ್ಕೆ ಹೋಗುತ್ತಿದ್ದಾರೆ. ಮಹಾತ್ಮ ಬಸವೇಶ್ವರರು 12ನೇ ಶತಮಾನದಲ್ಲಿಯೇ ಮೌಢ್ಯದ ಬಿರುದ್ಧ ಹೋರಾಟ ನಡೆಸಿದ್ದಾರೆ. ಜನರು ಮೂಢನಂಬಿಕೆಗಳನ್ನು ಬಿಡಬೇಕು’ ಎಂದರು.</p>.<p>’ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲ. ಚುನಾವಣೆಗೆ ಇನ್ನೂ ಆರು ತಿಂಗಳು ಇರುವ ಮೊದಲೇ 120 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಅವರನ್ನು ಸ್ವೀಕರಿಸುವುದು, ಬಿಡುವುದು ಜನರಿಗೆ ಬಿಟ್ಟಿದ್ದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>‘ಕಿತ್ತೂರು ಉತ್ಸವಕ್ಕೆ ಹೋಗಿದ್ದರಿಂದ ನಾನು ಅಧಿಕಾರ ಕಳೆದುಕೊಂಡಿಲ್ಲ. ಮುಖ್ಯಮಂತ್ರಿ ಆಗಿ ನನ್ನ ಅವಧಿ ನಿಗದಿಯಾಗಿದ್ದು 10 ತಿಂಗಳು ಮಾತ್ರ. ಅದನ್ನು ಪೂರ್ಣಗೊಳಿಸಿದ್ದೇನೆ’ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.</p>.<p>ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಕಿತ್ತೂರು ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಿತ್ತೂರು ಉತ್ಸವ ಉದ್ಘಾಟನೆ ಮಾಡಿದ ನಂತರ ಜಗದೀಶ ಶೆಟ್ಟರ್ ಅವರು ಅಧಿಕಾರ ಕಳೆದುಕೊಂಡರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕಿತ್ತೂರು ಉತ್ಸವ, ಚಾಮರಾಜನಗರಕ್ಕೆ ಹೋದರೂ ನನಗೆ ಏನೂ ಆಗಲಿಲ್ಲ’ ಎಂದರು.</p>.<p>‘ಕಂದಾಯ ಸಚಿವ, ವಿಧಾನಸಭಾಧ್ಯಕ್ಷನಾಗಿದ್ದಾಗ ಪ್ರತಿ ವರ್ಷ ಕಿತ್ತೂರು ಉತ್ಸವಕ್ಕೆ ಹೋಗಿದ್ದೇನೆ. ಮುಖ್ಯಮಂತ್ರಿ ಆದ ನಂತರ ಮೂರೇ ತಿಂಗಳಲ್ಲಿ ಚಾಮರಾಜನಗರಕ್ಕೂ ಭೇಟಿ ನೀಡಿದ್ದೆ’ ಎಂದು ಹೇಳಿದರು.</p>.<p>‘ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿತ್ತೂರು ಉತ್ಸವಕ್ಕೆ ಹೋಗುತ್ತಿದ್ದಾರೆ. ಮಹಾತ್ಮ ಬಸವೇಶ್ವರರು 12ನೇ ಶತಮಾನದಲ್ಲಿಯೇ ಮೌಢ್ಯದ ಬಿರುದ್ಧ ಹೋರಾಟ ನಡೆಸಿದ್ದಾರೆ. ಜನರು ಮೂಢನಂಬಿಕೆಗಳನ್ನು ಬಿಡಬೇಕು’ ಎಂದರು.</p>.<p>’ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲ. ಚುನಾವಣೆಗೆ ಇನ್ನೂ ಆರು ತಿಂಗಳು ಇರುವ ಮೊದಲೇ 120 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಅವರನ್ನು ಸ್ವೀಕರಿಸುವುದು, ಬಿಡುವುದು ಜನರಿಗೆ ಬಿಟ್ಟಿದ್ದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>