<p><strong>ಹುಬ್ಬಳ್ಳಿ:</strong> ನಗರದ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪ್ರಾದೇಶಿಕ ಎಂಜಿನಿಯರಿಂಗ್ ಶಿಕ್ಷಣ ಕುರಿತ ವಿಚಾರ ಸಂಕಿರಣ ಗುರುವಾರ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಎಜ್ಯುಕೇಷನ್ ನೆಟ್ವರ್ಕ್ ಸಂಶೋಧನಾ ಕೇಂದ್ರದ ಮುಖ್ಯಸ್ಥೆ ಥೆರೆಸಾ ಹ್ಯಾಟ್ಟಿಂಗ್ , ‘ಸಂಪನ್ಮೂಲ, ಕಾರ್ಯಾಗಾರ ಹಾಗೂ ನಿಯತಕಾಲಿಕೆಗಳ ಮೂಲಕ ಸ್ವತಂತ್ರವಾದ ಹಾಗೂ ಸಮುದಾಯಕ್ಕೆ ನೆರವಾಗುವ ಸ್ಥಳೀಯ ಜಾಲಗಳ ರಚನೆ ಈ ವಿಚಾರ ಸಂಕಿರಣದ ಉದ್ದೇಶವಾಗಿದೆ’ ಎಂದು ಹೇಳಿದರು.</p>.<p>ಐಯುಸಿಇಇಯ ಕಾರ್ಯನಿರ್ವಾಹಕ ನಿರ್ದೇಶಕ ಕೃಷ್ಣ ವೇದುಲ ಮಾತನಾಡಿ, ಎಂಜಿನಿಯರಿಂಗ್ ಶಿಕ್ಷಣದಲ್ಲಿ ಸಮಗ್ರ ಸಂಶೋಧನೆಯ ಮಹತ್ವದ ಬಗ್ಗೆ ತಿಳಿಸಿದರು.</p>.<p>ಕೆಎಲ್ಇ ತಾಂತ್ರಿಕ ವಿ.ವಿ. ಕುಲಪತಿ ಅಶೋಕ ಶೆಟ್ಟರ್, ಜಾಗತಿಕ ಗುಣಮಟ್ಟದ ಶಿಕ್ಷಣದ ಅಗತ್ಯತೆ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ 800 ಡಾಲರ್ ಮೌಲ್ಯದ ಡಂಕನ್ ಫಿರ್ಸರ್ ಪ್ರಶಸ್ತಿಯನ್ನು ಲಿನ್ಸಾ ರೂನೆ ಅವರಿಗೆ ಪ್ರದಾನ ಮಾಡಲಾಯಿತು.</p>.<p>ಸೊಲ್ಲಾಪುರದ ಎಂಐಟಿ ವಿಶ್ವ ಪ್ರಯಾಗ್ ವಿವಿಯ ಕುಲಪತಿ ಗೋಪಾಲ ಕೃಷ್ಣ ಜೋಶಿ, ಕೆ.ಜಿ. ರೆಡ್ಡಿ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರೋಹಿತ್ ಕಂದಕಟ್ಲ, ಪ್ರಕಾಶ ತಿವಾರಿ, ಸೋಹಂ ಸೊಹೊನಿ, ಬಿ.ಎಸ್. ಅನಾಮಿ, ವಿಜಯಲಕ್ಷ್ಮಿ, ಪ್ರೀತಿ ಬಾಳಿಗರ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ನಗರದ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪ್ರಾದೇಶಿಕ ಎಂಜಿನಿಯರಿಂಗ್ ಶಿಕ್ಷಣ ಕುರಿತ ವಿಚಾರ ಸಂಕಿರಣ ಗುರುವಾರ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಎಜ್ಯುಕೇಷನ್ ನೆಟ್ವರ್ಕ್ ಸಂಶೋಧನಾ ಕೇಂದ್ರದ ಮುಖ್ಯಸ್ಥೆ ಥೆರೆಸಾ ಹ್ಯಾಟ್ಟಿಂಗ್ , ‘ಸಂಪನ್ಮೂಲ, ಕಾರ್ಯಾಗಾರ ಹಾಗೂ ನಿಯತಕಾಲಿಕೆಗಳ ಮೂಲಕ ಸ್ವತಂತ್ರವಾದ ಹಾಗೂ ಸಮುದಾಯಕ್ಕೆ ನೆರವಾಗುವ ಸ್ಥಳೀಯ ಜಾಲಗಳ ರಚನೆ ಈ ವಿಚಾರ ಸಂಕಿರಣದ ಉದ್ದೇಶವಾಗಿದೆ’ ಎಂದು ಹೇಳಿದರು.</p>.<p>ಐಯುಸಿಇಇಯ ಕಾರ್ಯನಿರ್ವಾಹಕ ನಿರ್ದೇಶಕ ಕೃಷ್ಣ ವೇದುಲ ಮಾತನಾಡಿ, ಎಂಜಿನಿಯರಿಂಗ್ ಶಿಕ್ಷಣದಲ್ಲಿ ಸಮಗ್ರ ಸಂಶೋಧನೆಯ ಮಹತ್ವದ ಬಗ್ಗೆ ತಿಳಿಸಿದರು.</p>.<p>ಕೆಎಲ್ಇ ತಾಂತ್ರಿಕ ವಿ.ವಿ. ಕುಲಪತಿ ಅಶೋಕ ಶೆಟ್ಟರ್, ಜಾಗತಿಕ ಗುಣಮಟ್ಟದ ಶಿಕ್ಷಣದ ಅಗತ್ಯತೆ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ 800 ಡಾಲರ್ ಮೌಲ್ಯದ ಡಂಕನ್ ಫಿರ್ಸರ್ ಪ್ರಶಸ್ತಿಯನ್ನು ಲಿನ್ಸಾ ರೂನೆ ಅವರಿಗೆ ಪ್ರದಾನ ಮಾಡಲಾಯಿತು.</p>.<p>ಸೊಲ್ಲಾಪುರದ ಎಂಐಟಿ ವಿಶ್ವ ಪ್ರಯಾಗ್ ವಿವಿಯ ಕುಲಪತಿ ಗೋಪಾಲ ಕೃಷ್ಣ ಜೋಶಿ, ಕೆ.ಜಿ. ರೆಡ್ಡಿ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರೋಹಿತ್ ಕಂದಕಟ್ಲ, ಪ್ರಕಾಶ ತಿವಾರಿ, ಸೋಹಂ ಸೊಹೊನಿ, ಬಿ.ಎಸ್. ಅನಾಮಿ, ವಿಜಯಲಕ್ಷ್ಮಿ, ಪ್ರೀತಿ ಬಾಳಿಗರ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>