ಬೆನ್ನಟ್ಟಿದ ಪೊಲೀಸರು: ಜಿಲ್ಲೆಯಲ್ಲಿ ಕಟ್ಟಿನಿಟ್ಟಿನ ಲಾಕ್ಡೌನ್ ಜಾರಿಯಲ್ಲಿದ್ದರೂ ಮಾಸ್ಕ್ ಧರಿಸದೇ ಕಾರಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಚನ್ನಮ್ಮ ವೃತ್ತದಲ್ಲಿ ಪೊಲೀಸರು ವಿಚಾರಣೆ ನಡೆಸಲು ಮುಂದಾದಾಗ ಆ ವ್ಯಕ್ತಿ ಕಾರು ಚಲಾಯಿಸಿಕೊಂಡು ಹೋಗಲು ಯತ್ನಿಸಿದ್ದ. ಬಳಿಕ ಪೊಲೀಸರು ಸಾಯಿ ಬಾಬಾ ದೇವಸ್ಥಾನದ ತನಕ ಬೆನ್ನು ಹತ್ತಿ ಆತನನ್ನು ಹಿಡಿದು ವಿಚಾರಣೆ ಮಾಡಿದರು.