ಹುಬ್ಬಳ್ಳಿ: ಮಹದಾಯಿ ಐ ತೀರ್ಪಿನ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವುದು ಸ್ವಾಗತಾರ್ಹ. ಕೇಂದ್ರ ಸರ್ಕಾರ ಇನ್ನು ತಡ ಮಾಡದೆ ಅಧಿಸೂಚನೆ ಹೊರಡಿಸಬೇಕು. ಕಾಮಗಾರಿ ಆರಂಭಿಸಲು ಅಗತ್ಯ ಇರುವ ವಿವಿಧ ಇಲಾಖೆಗಳ ಅನುಮತಿಯನ್ನೂ ಕೂಡಲೇ ನೀಡಬೇಕು ಎಂದು ಕಳಸಾ– ಬಂಡೂರಿ ಹೋರಾಟಗಾರ, ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಆಗ್ರಹಿಸಿದರು.