ಧಾರವಾಡ: 'ಯಾವುದೇ ಮಠವನ್ನು ನಿರ್ಲಕ್ಷಿಸುವುದಿಲ್ಲ. ಹಣಕಾಸಿನ ಹೊಂದಾಣಿಕೆಯಲ್ಲಿ ಸ್ವಲ್ಪ ತಡವಾಗಿದೆಯಷ್ಟೇ' ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮುಜರಾಯಿ ಇಲಾಖೆ ಖಾತೆಯಲ್ಲಿರುವ ಹಣವನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡಲಾಗುವುದು. ಇದನ್ನು ಮತ್ತೊಮ್ಮೆ ಪರಿಶೀಲಿಸಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಈ ಕುರಿತು ಮಠಾಧೀಶರೊಂದಿಗೂ ಚರ್ಚಿಸಿದ್ದಾರೆ' ಎಂದರು.
ಪೌರತ್ವ ಕಾಯ್ದೆ ವಿರೋಧಿಸಿ ಯು.ಟಿ.ಖಾದರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪೂಜಾರಿ, 'ಈ ಬಾರಿ ರಾಜ್ಯದಲ್ಲಿ ವರುಣನ ಕೃಪೆಯಿಂದ ಉತ್ತಮ ಮಳೆಯಾಗಿದೆ. ಹೀಗಾಗಿ ಬೆಂಕಿ ಬಿಳಿಸುವುದು ಅವರಿಗೆ ಗೊತ್ತಿದ್ದರೆ, ಅದರ ಶಮನ ಮಾಡುವ ಸಾಮರ್ಥ್ಯ ನಮಗೂ ಇದೆ' ಎಂದರು.