<p><strong>ಧಾರವಾಡ:</strong> 'ಯಾವುದೇ ಮಠವನ್ನು ನಿರ್ಲಕ್ಷಿಸುವುದಿಲ್ಲ. ಹಣಕಾಸಿನ ಹೊಂದಾಣಿಕೆಯಲ್ಲಿ ಸ್ವಲ್ಪ ತಡವಾಗಿದೆಯಷ್ಟೇ' ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮುಜರಾಯಿ ಇಲಾಖೆ ಖಾತೆಯಲ್ಲಿರುವ ಹಣವನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡಲಾಗುವುದು. ಇದನ್ನು ಮತ್ತೊಮ್ಮೆ ಪರಿಶೀಲಿಸಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಈ ಕುರಿತು ಮಠಾಧೀಶರೊಂದಿಗೂ ಚರ್ಚಿಸಿದ್ದಾರೆ' ಎಂದರು.</p>.<p>ಪೌರತ್ವ ಕಾಯ್ದೆ ವಿರೋಧಿಸಿ ಯು.ಟಿ.ಖಾದರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪೂಜಾರಿ, 'ಈ ಬಾರಿ ರಾಜ್ಯದಲ್ಲಿ ವರುಣನ ಕೃಪೆಯಿಂದ ಉತ್ತಮ ಮಳೆಯಾಗಿದೆ. ಹೀಗಾಗಿ ಬೆಂಕಿ ಬಿಳಿಸುವುದು ಅವರಿಗೆ ಗೊತ್ತಿದ್ದರೆ, ಅದರ ಶಮನ ಮಾಡುವ ಸಾಮರ್ಥ್ಯ ನಮಗೂ ಇದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> 'ಯಾವುದೇ ಮಠವನ್ನು ನಿರ್ಲಕ್ಷಿಸುವುದಿಲ್ಲ. ಹಣಕಾಸಿನ ಹೊಂದಾಣಿಕೆಯಲ್ಲಿ ಸ್ವಲ್ಪ ತಡವಾಗಿದೆಯಷ್ಟೇ' ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮುಜರಾಯಿ ಇಲಾಖೆ ಖಾತೆಯಲ್ಲಿರುವ ಹಣವನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡಲಾಗುವುದು. ಇದನ್ನು ಮತ್ತೊಮ್ಮೆ ಪರಿಶೀಲಿಸಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಈ ಕುರಿತು ಮಠಾಧೀಶರೊಂದಿಗೂ ಚರ್ಚಿಸಿದ್ದಾರೆ' ಎಂದರು.</p>.<p>ಪೌರತ್ವ ಕಾಯ್ದೆ ವಿರೋಧಿಸಿ ಯು.ಟಿ.ಖಾದರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪೂಜಾರಿ, 'ಈ ಬಾರಿ ರಾಜ್ಯದಲ್ಲಿ ವರುಣನ ಕೃಪೆಯಿಂದ ಉತ್ತಮ ಮಳೆಯಾಗಿದೆ. ಹೀಗಾಗಿ ಬೆಂಕಿ ಬಿಳಿಸುವುದು ಅವರಿಗೆ ಗೊತ್ತಿದ್ದರೆ, ಅದರ ಶಮನ ಮಾಡುವ ಸಾಮರ್ಥ್ಯ ನಮಗೂ ಇದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>