<p><strong>ಹುಬ್ಬಳ್ಳಿ:</strong> ‘ವಿಶ್ವಕರ್ಮ ಸಮಾಜದಲ್ಲಿ 39 ಉಪಜಾತಿಗಳಿವೆ. ಜಾತಿ ಗಣತಿ ಸಂದರ್ಭದಲ್ಲಿ ಜಾತಿ ಕಾಲಂನಲ್ಲಿ ಉಪಜಾತಿಗಳ ಹೆಸರು ನಮೂದಿಸದೆ, ವಿಶ್ವಕರ್ಮ ಎಂದು ಬರೆಸಬೇಕು’ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ಹೇಳಿದರು.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಂಚ ಕುಲಕಸುಬುಗಳನ್ನು ಮಾಡುವರೆಲ್ಲರೂ ವಿಶ್ವಕರ್ಮರು. ವಿಶ್ವ ಬ್ರಾಹ್ಮಣ ಎಂಬುದು ವಿಶ್ವಕರ್ಮ ಜಾತಿಯ ಉಪಜಾತಿಯಾಗಿದೆ. ಇದಕ್ಕೂ, ಬ್ರಾಹ್ಮಣ ಜಾತಿಗೂ ಸಂಬಂಧವಿಲ್ಲ’ ಎಂದರು.</p>.<p>‘ರಾಜ್ಯದಲ್ಲಿ ಮುಂದಿನ ವರ್ಷದಿಂದ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದಿಂದ ಐದು ಸಾವಿರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.</p>.<p>‘ರಾಜ್ಯ ಸರ್ಕಾರ ಮರು ಜಾತಿ ಸಮೀಕ್ಷೆ ನಡೆಸಲು ಮುಂದಾಗಿದೆ. ಎಲ್ಲ ಸಮಾಜಗಳು ಜಾಗೃತರಾಗಬೇಕು. ಇಲ್ಲದಿದ್ದರೆ, ಧ್ವನಿ ಇಲ್ಲದ ಸಮಾಜಗಳಿಗೆ ಅನ್ಯಾಯವಾಗುತ್ತದೆ. ರಾಜಕೀಯ ಜ್ಞಾನ ಇರುವ ಸಮಾಜದವರು ಪ್ರಬಲರಾಗುತ್ತಾರೆ’ ಎಂದರು.</p>.<p>‘ನಾನು ವಿಧಾನ ಪರಿಷತ್ ಸ್ಥಾನದ ಆಕಾಂಕ್ಷಿಯಲ್ಲ. ಯಾವುದೇ ಸ್ಥಾನಮಾನಕ್ಕಿಂತ ನಮ್ಮ ಸಮಾಜಕ್ಕೆ ನ್ಯಾಯ ಸಿಗಬೇಕು ಎಂಬುದು ನನ್ನ ಉದ್ದೇಶ. ಕಾಂಗ್ರೆಸ್ ಸೇರುವ ಸಂದರ್ಭದಲ್ಲಿ ಯಾವುದೇ ಸ್ಥಾನಮಾನಕ್ಕಾಗಿ ಷರತ್ತು ಹಾಕಿಲ್ಲ’ ಎಂದು ಹೇಳಿದರು.</p>.<p>‘ವಿಶ್ವಕರ್ಮ ಸಮಾಜಕ್ಕೆ ಸದ್ಯ 2ಎ ಮೀಸಲಾತಿ ಕಲ್ಪಿಸಲಾಗಿದೆ. ಪ್ರಬಲ ಜಾತಿಗಳ ನಡುವೆ ನಮ್ಮ ಸಮಾಜಕ್ಕೆ ಮೀಸಲಾತಿಯ ಲಾಭ ಸಿಗುತ್ತಿಲ್ಲ. ನಮ್ಮ ಮಕ್ಕಳ ಭವಿಷ್ಯಕ್ಕಾಗಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು’ ಎಂದು ಒತ್ತಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ವಿಶ್ವಕರ್ಮ ಸಮಾಜದಲ್ಲಿ 39 ಉಪಜಾತಿಗಳಿವೆ. ಜಾತಿ ಗಣತಿ ಸಂದರ್ಭದಲ್ಲಿ ಜಾತಿ ಕಾಲಂನಲ್ಲಿ ಉಪಜಾತಿಗಳ ಹೆಸರು ನಮೂದಿಸದೆ, ವಿಶ್ವಕರ್ಮ ಎಂದು ಬರೆಸಬೇಕು’ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ಹೇಳಿದರು.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಂಚ ಕುಲಕಸುಬುಗಳನ್ನು ಮಾಡುವರೆಲ್ಲರೂ ವಿಶ್ವಕರ್ಮರು. ವಿಶ್ವ ಬ್ರಾಹ್ಮಣ ಎಂಬುದು ವಿಶ್ವಕರ್ಮ ಜಾತಿಯ ಉಪಜಾತಿಯಾಗಿದೆ. ಇದಕ್ಕೂ, ಬ್ರಾಹ್ಮಣ ಜಾತಿಗೂ ಸಂಬಂಧವಿಲ್ಲ’ ಎಂದರು.</p>.<p>‘ರಾಜ್ಯದಲ್ಲಿ ಮುಂದಿನ ವರ್ಷದಿಂದ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದಿಂದ ಐದು ಸಾವಿರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.</p>.<p>‘ರಾಜ್ಯ ಸರ್ಕಾರ ಮರು ಜಾತಿ ಸಮೀಕ್ಷೆ ನಡೆಸಲು ಮುಂದಾಗಿದೆ. ಎಲ್ಲ ಸಮಾಜಗಳು ಜಾಗೃತರಾಗಬೇಕು. ಇಲ್ಲದಿದ್ದರೆ, ಧ್ವನಿ ಇಲ್ಲದ ಸಮಾಜಗಳಿಗೆ ಅನ್ಯಾಯವಾಗುತ್ತದೆ. ರಾಜಕೀಯ ಜ್ಞಾನ ಇರುವ ಸಮಾಜದವರು ಪ್ರಬಲರಾಗುತ್ತಾರೆ’ ಎಂದರು.</p>.<p>‘ನಾನು ವಿಧಾನ ಪರಿಷತ್ ಸ್ಥಾನದ ಆಕಾಂಕ್ಷಿಯಲ್ಲ. ಯಾವುದೇ ಸ್ಥಾನಮಾನಕ್ಕಿಂತ ನಮ್ಮ ಸಮಾಜಕ್ಕೆ ನ್ಯಾಯ ಸಿಗಬೇಕು ಎಂಬುದು ನನ್ನ ಉದ್ದೇಶ. ಕಾಂಗ್ರೆಸ್ ಸೇರುವ ಸಂದರ್ಭದಲ್ಲಿ ಯಾವುದೇ ಸ್ಥಾನಮಾನಕ್ಕಾಗಿ ಷರತ್ತು ಹಾಕಿಲ್ಲ’ ಎಂದು ಹೇಳಿದರು.</p>.<p>‘ವಿಶ್ವಕರ್ಮ ಸಮಾಜಕ್ಕೆ ಸದ್ಯ 2ಎ ಮೀಸಲಾತಿ ಕಲ್ಪಿಸಲಾಗಿದೆ. ಪ್ರಬಲ ಜಾತಿಗಳ ನಡುವೆ ನಮ್ಮ ಸಮಾಜಕ್ಕೆ ಮೀಸಲಾತಿಯ ಲಾಭ ಸಿಗುತ್ತಿಲ್ಲ. ನಮ್ಮ ಮಕ್ಕಳ ಭವಿಷ್ಯಕ್ಕಾಗಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು’ ಎಂದು ಒತ್ತಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>