ಧಾರವಾಡ: ಕೆಪಿಸಿಸಿ ರಾಜ್ಯ ವಕ್ತಾರ ಪಿ.ಎಚ್.ನೀರಲಕೇರಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ಧಾರೆ.
‘ಪಕ್ಷದ ತತ್ವ ಸಿದ್ದಾಂತಕ್ಕೆ ನಿಷ್ಠನಾಗಿ ಕಾರ್ಯನಿರ್ವಹಿಸಿದ್ದೇನೆ. ನಾಯಕರು ಕಡೆಗಣಿಸಿದ್ದರಿಂದ ನೋವಾಗಿದೆ. ಹೀಗಾಗಿ ರಾಜೀನಾಮೆಗೆ ನೀಡಿದ್ದೇನೆ. ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ನಡೆ ನಿರ್ಧರಿಸುತ್ತೇನೆ’ ಎಂದು ನೀರಲಕೇರಿ ‘ಪ್ರಜಾವಾಣಿ’ಗೆ ತಿಳಿಸಿದರು.