2019ರಲ್ಲಿ ಉತ್ತಮ ಅಂಕ ಪಡೆದವರ ದಾಖಲೆಗಳ ಪರಿಶೀಲನೆ ನಡೆದಿತ್ತು. ಆಗ ದಾಖಲೆಗಳು ಸರಿಯಾಗಿವೆ ಎಂದು ಪ್ರಮಾಣೀಕರಿಸಿದ್ದರೂ, ಆ ಬಳಿಕ ಸೇವಾನುಭವ ಪ್ರಮಾಣಪತ್ರದಲ್ಲಿ ‘ನಿರ್ದಿಷ್ಟ ಕಾರ್ಯಕ್ಷೇತ್ರದ ಕಾರ್ಯಾನುಭವದಲ್ಲಿ ಸ್ಪಷ್ಟತೆ ಇಲ್ಲ’ ಎಂದು ಕಾರಣ ಹೇಳಿ ತಿರಸ್ಕರಿಸಲಾಗಿದೆ. ಈ ಬಗ್ಗೆ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸದೆ, ಕಾರ್ಖಾನೆಗಳು, ಬಾಯ್ಲರ್ಗಳು, ಕಾರ್ಖಾನೆಗಳ ಸುರಕ್ಷತೆ ಹಾಗೂ ಸ್ವಾಸ್ಥ್ಯ ಇಲಾಖೆಯ ಉಪನಿರ್ದೇಶಕರಿಂದ ಸೇವಾನುಭವ ಪತ್ರ ಸಿಂಧುತ್ವ ಪರಿಶೀಲನೆಗೆ ಸೂಚಿಸದೆ ಅನ್ಯಾಯ ಮಾಡಲಾಗುತ್ತಿದೆ ಎಂಬುದು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳ ಆರೋಪ.