ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನ್ನಿ ಕೃಷ್ಣಾ, ಮಹದಾಯಿ, ನವಲಿ ಸಂಕಲ್ಪ ಯಾತ್ರೆ ಏ.13ಕ್ಕೆ: ಎಸ್.ಆರ್. ಪಾಟೀಲ

Last Updated 11 ಏಪ್ರಿಲ್ 2022, 7:09 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳನ್ನು ಶೀಘ್ರ ಅನುಷ್ಠಾನ ಮಾಡುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆ ಸಹಯೋಗದಲ್ಲಿ ಏಪ್ರಿಲ್ 13ರಂದು ಗದಗದ ನರಗುಂದದಿಂದ "ಬನ್ನಿ ಕೃಷ್ಣಾ, ಮಹದಾಯಿ, ನವಲಿ ಸಂಕಲ್ಪ ಯಾತ್ರೆ" ಹಮ್ಮಿಕೊಳಲಾಗಿದ್ದು, ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಗುವುದು ಎಂದು ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆಯ ಅಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡುವುದಕ್ಕೆ ನಿರಂತರವಾಗಿ ನಿರ್ಲಕ್ಷಿಸಲಾಗುತ್ತಿದೆ‌. ನೀರಾವರಿ ಯೋಜನೆ ದಕ್ಷಿಣ ಕರ್ನಾಟಕದಲ್ಲಿ ಅನುಷ್ಠಾನವಾದಷ್ಟು ಇಲ್ಲಿ ಆಗಿಲ್ಲ‌.

ಹೀಗಾಗಿ, ಪಕ್ಷಾತೀತವಾಗಿ ಹೋರಾಟ ನಡೆಸಲಾಗುತ್ತಿದೆ. ನಾನು ಕಾಂಗ್ರೆಸ್ ಗೆ ಸೆಡ್ಡು ಹೊಡೆದು ಹೋರಾಟ ಮಾಡುತ್ತಿಲ್ಲ. ನಾನು ಅಪ್ಪನ (ಪಕ್ಷದ) ವಿರುದ್ಧ ಹೋಗುವುದಿಲ್ಲ. ಕಾಂಗ್ರೆಸ್ ನಾಯಕರು ಭಾಗವಹಿಸಬಹುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT