<p><strong>ಅಳ್ನಾವರ:</strong> ಇಲ್ಲಿನ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಅಧಿಕಾರಿಗಳಿಗೆ ಸೂಚಿಸಿದರು. </p>.<p>ಇಲ್ಲಿನ ಬಸ್ ನಿಲ್ದಾಣಕ್ಕೆ ಸೋಮವಾರ ಮಧ್ಯಾಹ್ನ ಇಲಾಖೆಯ ಅಧಿಕಾರಿಗಳ ತಂಡದ ಜೊತೆ ಭೇಟಿ ನೀಡಿದ ಅವರು, ನಿಲ್ದಾಣದ ಆವರಣದಲ್ಲಿ ಸುತ್ತಾಡಿ ಅವ್ಯವಸ್ಥೆಯನ್ನು ಕೂಡಲೆ ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕಸ, ಕೊಳಚೆ, ಸ್ವಚ್ಚತೆಯಿಲ್ಲದ ಆವರಣ. ಎಲ್ಲೆಂದರಲ್ಲಿ ವಾಹನಗಳ ನಿಲುಗಡೆ ಮತ್ತಿತರ ಅವ್ಯವಸ್ಥೆಗಳನ್ನು ಕಂಡು ಗರಂ ಆದ ಅವರು, ತ್ಯಾಜ್ಯವನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜೊತೆಗೆ ಪ್ರಯಾಣಿಕರಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.</p>.<p>ಖಾಸಗಿ ವಾಹನಗಳಿಗೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ನಿಗದಿತ ಜಾಗ ಗುರುತುಪಡಿಸಬೇಕು. ಪಾರ್ಕಿಂಗ್ ಶುಲ್ಕ ಆಕರಿಸಬೇಕು. ಗ್ರಾಮೀಣ ಭಾಗದ ಸಾರಿಗೆ ಸುಧಾರಣೆಗೆ ಕಾಳಜಿ ವಹಿಸಲು ತಿಳಿಸಿದರು.</p>.<p>ಇದೇ ಸಮಯದಲ್ಲಿ ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಪ್ರಿಯಾಂಗಾ ಅವರ ಗಮನಕ್ಕೆ ತಂದರು. ಖಾಸಗಿ ವಾಹನಗಳು ನಿಲ್ದಾಣದೊಳಗೆ ಬಂದು, ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿವೆ. ಗ್ರಾಮೀಣ ಭಾಗದ ಬಸ್ ನಿಗದಿತ ಸಮಯದಲ್ಲಿ ಓಡುತ್ತಿಲ್ಲ. ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ದೂರಿದರು.</p>.<p>ಅಂತರರಾಜ್ಯ ಸಾರಿಗೆ ಬಸ್ ಸಂಚಾರಕ್ಕೆ ಅಳ್ನಾವರ ನಿಲ್ದಾಣದ ಮೂಲಕ ಸಂಚರಿಸಲು ಕ್ರಮ ಕೈಗೊಳ್ಳಬೇಕು. ನಿಲ್ದಾಣದಲ್ಲಿ ರಸ್ತೆಗೆ ಹೊಂದಿಕೊಂಡಂತೆ ವಾಣಿಜ್ಯ ಮಳಿಗೆ ನಿರ್ಮಿಸಿ ಬಾಡಿಗೆ ನೀಡುವಂತೆ ಸಾರ್ವಜನಿಕರು ಮನವಿ ಮಾಡಿದರು. </p>.<p>ನಿಲ್ದಾಣದಲ್ಲಿ ಕುಡಿಯುವ ನೀರು, ಆಸನಗಳ ವ್ಯವಸ್ಥೆ ಜೊತೆಗೆ ನಿಗದಿತ ಸಮಯಕ್ಕೆ ಬಸ್ಸುಗಳನ್ನು ಓಡಿಸುವುದು ಸೇರಿದಂತೆ ವಿವಿದ ದೂರುಗಳ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗೆ ಪ್ರಿಯಾಂಗಾ ಅವರು ಸೂಚಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳ್ನಾವರ:</strong> ಇಲ್ಲಿನ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಅಧಿಕಾರಿಗಳಿಗೆ ಸೂಚಿಸಿದರು. </p>.<p>ಇಲ್ಲಿನ ಬಸ್ ನಿಲ್ದಾಣಕ್ಕೆ ಸೋಮವಾರ ಮಧ್ಯಾಹ್ನ ಇಲಾಖೆಯ ಅಧಿಕಾರಿಗಳ ತಂಡದ ಜೊತೆ ಭೇಟಿ ನೀಡಿದ ಅವರು, ನಿಲ್ದಾಣದ ಆವರಣದಲ್ಲಿ ಸುತ್ತಾಡಿ ಅವ್ಯವಸ್ಥೆಯನ್ನು ಕೂಡಲೆ ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕಸ, ಕೊಳಚೆ, ಸ್ವಚ್ಚತೆಯಿಲ್ಲದ ಆವರಣ. ಎಲ್ಲೆಂದರಲ್ಲಿ ವಾಹನಗಳ ನಿಲುಗಡೆ ಮತ್ತಿತರ ಅವ್ಯವಸ್ಥೆಗಳನ್ನು ಕಂಡು ಗರಂ ಆದ ಅವರು, ತ್ಯಾಜ್ಯವನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜೊತೆಗೆ ಪ್ರಯಾಣಿಕರಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.</p>.<p>ಖಾಸಗಿ ವಾಹನಗಳಿಗೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ನಿಗದಿತ ಜಾಗ ಗುರುತುಪಡಿಸಬೇಕು. ಪಾರ್ಕಿಂಗ್ ಶುಲ್ಕ ಆಕರಿಸಬೇಕು. ಗ್ರಾಮೀಣ ಭಾಗದ ಸಾರಿಗೆ ಸುಧಾರಣೆಗೆ ಕಾಳಜಿ ವಹಿಸಲು ತಿಳಿಸಿದರು.</p>.<p>ಇದೇ ಸಮಯದಲ್ಲಿ ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಪ್ರಿಯಾಂಗಾ ಅವರ ಗಮನಕ್ಕೆ ತಂದರು. ಖಾಸಗಿ ವಾಹನಗಳು ನಿಲ್ದಾಣದೊಳಗೆ ಬಂದು, ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿವೆ. ಗ್ರಾಮೀಣ ಭಾಗದ ಬಸ್ ನಿಗದಿತ ಸಮಯದಲ್ಲಿ ಓಡುತ್ತಿಲ್ಲ. ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ದೂರಿದರು.</p>.<p>ಅಂತರರಾಜ್ಯ ಸಾರಿಗೆ ಬಸ್ ಸಂಚಾರಕ್ಕೆ ಅಳ್ನಾವರ ನಿಲ್ದಾಣದ ಮೂಲಕ ಸಂಚರಿಸಲು ಕ್ರಮ ಕೈಗೊಳ್ಳಬೇಕು. ನಿಲ್ದಾಣದಲ್ಲಿ ರಸ್ತೆಗೆ ಹೊಂದಿಕೊಂಡಂತೆ ವಾಣಿಜ್ಯ ಮಳಿಗೆ ನಿರ್ಮಿಸಿ ಬಾಡಿಗೆ ನೀಡುವಂತೆ ಸಾರ್ವಜನಿಕರು ಮನವಿ ಮಾಡಿದರು. </p>.<p>ನಿಲ್ದಾಣದಲ್ಲಿ ಕುಡಿಯುವ ನೀರು, ಆಸನಗಳ ವ್ಯವಸ್ಥೆ ಜೊತೆಗೆ ನಿಗದಿತ ಸಮಯಕ್ಕೆ ಬಸ್ಸುಗಳನ್ನು ಓಡಿಸುವುದು ಸೇರಿದಂತೆ ವಿವಿದ ದೂರುಗಳ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗೆ ಪ್ರಿಯಾಂಗಾ ಅವರು ಸೂಚಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>