<p><strong>ಹುಬ್ಬಳ್ಳಿ: </strong>ಕೊರೊನಾದಿಂದಾಗಿ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ – ಹೈದರಾಬಾದ್ ಬಸ್ ಸಂಚಾರವನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಮತ್ತೆ ಆರಂಭಿಸಿದೆ.</p>.<p>ಸರ್ಕಾರದ ಮಾರ್ಗಸೂಚಿ ಪ್ರಕಾರ, ಸುರಕ್ಷತಾ ಕ್ರಮಗಳೊಂದಿಗೆ ಬಸ್ ಸಂಚಾರ ಆರಂಭಿಸಲಾಗಿದೆ. ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣ ಹಾಗೂ ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಿಂದ ಬಸ್ಸುಗಳು ಹೊರಡುತ್ತವೆ ಎಂದು ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಂಗಳವಾರ ತಿಳಿಸಿದ್ದಾರೆ.</p>.<p>ಮೊದಲ ಹಂತದಲ್ಲಿ 1 ಎಸಿ ಸ್ಲೀಪರ್ (ರಾತ್ರಿ 8 ಕ್ಕೆ), 1 ನಾನ್ ಎಸಿ ಸ್ಲೀಪರ್ (ಸಂಜೆ 7ಕ್ಕೆ), 1 ರಾಜಹಂಸ( ಸಂಜೆ 7ಕ್ಕೆ) ಹಾಗೂ 2 ವೇಗದೂತ ಬಸ್ಸುಗಳ (ಬೆಳಿಗ್ಗೆ 7 ಮತ್ತು 8ಕ್ಕೆ) ಸಂಚಾರ ಆರಂಭಿಸಲಾಗಿದೆ. ಬೆಳಿಗ್ಗೆ 7ಕ್ಕೆ ಹೊರಡುವ ವೇಗದೂತ ಮತ್ತು ಎಲ್ಲಾ ಐಶಾರಾಮಿ ಬಸ್ಸುಗಳು ಗದಗ, ಕೊಪ್ಪಳ, ಗಂಗಾವತಿ, ಸಿಂಧನೂರು, ರಾಯಚೂರು, ಮೆಹಬೂಬನಗರ, ಝಡ್ ಚರ್ಲಾ ಮಾರ್ಗವಾಗಿ ಸಂಚರಿಸುತ್ತವೆ.</p>.<p>ಬೆಳಿಗ್ಗೆ 8ಕ್ಕೆ ಹೊರಡುವ ವೇಗದೂತ ಬಸ್ಸು ನವಲಗುಂದ, ರೋಣ, ಗಜೇಂದ್ರಗಡ, ಕುಷ್ಟಗಿ, ಸಿಂಧನೂರು, ರಾಯಚೂರು, ಮೆಹಬೂಬ್ ನಗರ, ಝಡ್ ಚರ್ಲಾ ಮಾರ್ಗವಾಗಿ ಸಂಚರಿಸುತ್ತದೆ. ಪ್ರಯಾಣಿಕರ ಪ್ರತಿಕ್ರಿಯೆ ಆಧರಿಸಿ, ವೋಲ್ವೊ ಬಸ್ ಸಂಚಾರ ಆರಂಭಿಸುವ ಬಗ್ಗೆ ನಿರ್ಧರಿಸಲಾಗುವುದು.</p>.<p>ಎಲ್ಲಾ ಬಸ್ಸುಗಳಿಗೆ ಆನ್ಲೈನ್ ಮತ್ತು ಮುಂಗಡ ಬುಕ್ಕಿಂಗ್ ಕೌಂಟರ್ಗಳ ಮೂಲಕ ಸೀಟು ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯ. ಬಸ್ಸಿನಲ್ಲಿ ಹೊದಿಕೆ ಮತ್ತು ನೀರಿನ ಬಾಟಲಿಗಳನ್ನು ನೀಡುವುದಿಲ್ಲ ಎಂದು ರಾಮನಗೌಡರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಕೊರೊನಾದಿಂದಾಗಿ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ – ಹೈದರಾಬಾದ್ ಬಸ್ ಸಂಚಾರವನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಮತ್ತೆ ಆರಂಭಿಸಿದೆ.</p>.<p>ಸರ್ಕಾರದ ಮಾರ್ಗಸೂಚಿ ಪ್ರಕಾರ, ಸುರಕ್ಷತಾ ಕ್ರಮಗಳೊಂದಿಗೆ ಬಸ್ ಸಂಚಾರ ಆರಂಭಿಸಲಾಗಿದೆ. ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣ ಹಾಗೂ ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಿಂದ ಬಸ್ಸುಗಳು ಹೊರಡುತ್ತವೆ ಎಂದು ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಂಗಳವಾರ ತಿಳಿಸಿದ್ದಾರೆ.</p>.<p>ಮೊದಲ ಹಂತದಲ್ಲಿ 1 ಎಸಿ ಸ್ಲೀಪರ್ (ರಾತ್ರಿ 8 ಕ್ಕೆ), 1 ನಾನ್ ಎಸಿ ಸ್ಲೀಪರ್ (ಸಂಜೆ 7ಕ್ಕೆ), 1 ರಾಜಹಂಸ( ಸಂಜೆ 7ಕ್ಕೆ) ಹಾಗೂ 2 ವೇಗದೂತ ಬಸ್ಸುಗಳ (ಬೆಳಿಗ್ಗೆ 7 ಮತ್ತು 8ಕ್ಕೆ) ಸಂಚಾರ ಆರಂಭಿಸಲಾಗಿದೆ. ಬೆಳಿಗ್ಗೆ 7ಕ್ಕೆ ಹೊರಡುವ ವೇಗದೂತ ಮತ್ತು ಎಲ್ಲಾ ಐಶಾರಾಮಿ ಬಸ್ಸುಗಳು ಗದಗ, ಕೊಪ್ಪಳ, ಗಂಗಾವತಿ, ಸಿಂಧನೂರು, ರಾಯಚೂರು, ಮೆಹಬೂಬನಗರ, ಝಡ್ ಚರ್ಲಾ ಮಾರ್ಗವಾಗಿ ಸಂಚರಿಸುತ್ತವೆ.</p>.<p>ಬೆಳಿಗ್ಗೆ 8ಕ್ಕೆ ಹೊರಡುವ ವೇಗದೂತ ಬಸ್ಸು ನವಲಗುಂದ, ರೋಣ, ಗಜೇಂದ್ರಗಡ, ಕುಷ್ಟಗಿ, ಸಿಂಧನೂರು, ರಾಯಚೂರು, ಮೆಹಬೂಬ್ ನಗರ, ಝಡ್ ಚರ್ಲಾ ಮಾರ್ಗವಾಗಿ ಸಂಚರಿಸುತ್ತದೆ. ಪ್ರಯಾಣಿಕರ ಪ್ರತಿಕ್ರಿಯೆ ಆಧರಿಸಿ, ವೋಲ್ವೊ ಬಸ್ ಸಂಚಾರ ಆರಂಭಿಸುವ ಬಗ್ಗೆ ನಿರ್ಧರಿಸಲಾಗುವುದು.</p>.<p>ಎಲ್ಲಾ ಬಸ್ಸುಗಳಿಗೆ ಆನ್ಲೈನ್ ಮತ್ತು ಮುಂಗಡ ಬುಕ್ಕಿಂಗ್ ಕೌಂಟರ್ಗಳ ಮೂಲಕ ಸೀಟು ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯ. ಬಸ್ಸಿನಲ್ಲಿ ಹೊದಿಕೆ ಮತ್ತು ನೀರಿನ ಬಾಟಲಿಗಳನ್ನು ನೀಡುವುದಿಲ್ಲ ಎಂದು ರಾಮನಗೌಡರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>