<p><strong>ಧಾರವಾಡ:</strong> ಕರ್ನಾಟಕ ವಿಶ್ವವಿದ್ಯಾಲಯದ 75ನೇ ಘಟಿಕೋತ್ಸವ ನಡೆದಿಲ್ಲ. 2023–24 ಮತ್ತು 2024–25ನೇ ಸಾಲಿನಲ್ಲಿ ವಿವಿಧ ಕೋರ್ಸ್ ಪೂರೈಸಿದವರು ಅರ್ಜಿ ಸಲ್ಲಿಸಿ ಘಟಿಕೋತ್ಸವ ಪ್ರಮಾಣ ಪತ್ರಕ್ಕಾಗಿ ಕಾಯುವಂತಾಗಿದೆ.</p>.<p>2024 ಸೆಪ್ಟೆಂಬರ್ನಲ್ಲಿ 74ನೇ ಘಟಿಕೋತ್ಸವ ಜರುಗಿತ್ತು. 2025ರಲ್ಲಿ ಘಟಿಕೋತ್ಸವ ಈವರೆಗೆ ನಡೆದಿಲ್ಲ. ಉದ್ಯೋಗ, ವಿದೇಶದಲ್ಲಿ ವಿದ್ಯಾಭ್ಯಾಸ, ಅನ್ಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವ್ಯಾಸಂಗಕ್ಕೆ ಅರ್ಜಿ ಸಲ್ಲಿಕೆಗೆ ಘಟಿಕೋತ್ಸವ ಪ್ರಮಾಣ ಅಗತ್ಯವಾಗಿದೆ.</p>.<p>ಕರ್ನಾಟಕ ವಿಶ್ವವಿದ್ಯಾಲಯವು ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿ ಹೊಂದಿದೆ. ಗದಗ ಮತ್ತು ಕಾರವಾರವದಲ್ಲಿ ಸ್ನಾತಕೋತ್ತರ ಕೇಂದ್ರಗಳನ್ನು ಹೊಂದಿದೆ. 266 ಸಂಯೋಜಿತ ಕಾಲೇಜುಗಳು ಇವೆ.</p>.<p>ಪದವಿ, ಸ್ನಾತಕೋತ್ತರ ಪದವಿ, ಪಿಎಚ್.ಡಿ ಸಹಿತ ವಿವಿಧ ಕೋರ್ಸ್ ಪೂರೈಸಿದವರು ಘಟಿಕೋತ್ಸವ ಪ್ರಮಾಣ ಪತ್ರ ನಿರೀಕ್ಷೆಯಲ್ಲಿದ್ಧಾರೆ. ಹಲವರು ತಾತ್ಕಾಲಿಕ ಪ್ರಮಾಣ ಪತ್ರ (ಪ್ರಾವಿಷನಲ್ ಸರ್ಟಿಫಿಕೇಟ್) ಪಡೆದು ಅರ್ಜಿ ಸಲ್ಲಿಸಿದ್ದಾರೆ.</p>.<p>‘ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಘಟಿಕೋತ್ಸವ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿದ್ದೇನೆ. ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಘಟಿಕೋತ್ಸವ ಪ್ರಮಾಣ ಪತ್ರ ಬೇಕು. ವಿಶ್ವವಿದ್ಯಾಲಯದವರು ಘಟಿಕೋತ್ಸವ ಆಯೋಜನೆಗೆ ವಿಳಂಬ ಮಾಡುತ್ತಿದ್ದಾರೆ’ ಎಂದು ರಸಾಯನವಿಜ್ಞಾನ ಸ್ನಾತಕೋತ್ತರ ಪದವೀಧರೆಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಹುಬ್ಬಳ್ಳಿಯ ಕಾನೂನು ವಿಶ್ವವಿದ್ಯಾಲಯ, ಧಾರವಾಡ ಕೃಷಿ ವಿಶ್ವವಿದ್ಯಾಲಯಗಳು ಘಟಿಕೋತ್ಸವ ನಡೆಸಿವೆ. ಕರ್ನಾಟಕ ವಿಶ್ವವಿದ್ಯಾಲಯ ತಡ ಮಾಡುತ್ತಿದೆ. ಈ ವಿಶ್ವವಿದ್ಯಾಲಯ ಹಣಕಾಸಿನ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ.</p>.<p>‘ಬೇರೆ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಕೋರ್ಸ್ಗೆ ಅರ್ಜಿ ಸಲ್ಲಿಸಿದ್ದೇನೆ. ಈಗ ತಾತ್ಕಾಲಿಕ ಸರ್ಟಿಫಿಕೇಟ್ ಸಲ್ಲಿಸಿದ್ದೇನೆ. ಆಯ್ಕೆಯಾದರೆ ಸೂಚಿತ ಸಮಯದೊಳಗೆ ಘಟಿಕೋತ್ಸವ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಆ ವಿಶ್ವವಿದ್ಯಾಲಯದವರು ತಿಳಿಸಿದ್ಧಾರೆ’ ಎಂದು ಕವಿವಿ ಸ್ನಾತಕೋತ್ತರ ಪದವೀಧರರೊಬ್ಬರು ತಿಳಿಸಿದರು.</p>.<p>‘74ನೇ ಘಟಿಕೋತ್ಸವ ಮುಗಿದ ಬಳಿಕ ಒಂಬತ್ತು ತಿಂಗಳು ಪ್ರಭಾರ ಕುಲಪತಿಗಳು ಆಡಳಿತ ನಿರ್ವಹಿಸಿದರು. ಘಟಿಕೋತ್ಸವ ಆಯೋಜನೆಗೆ ಅವರು ಆಸಕ್ತಿ ತೋರಲಿಲ್ಲ. ಐದು ತಿಂಗಳ ಹಿಂದೆ ಕುಲಪತಿ ನೇಮಕವಾಗಿದ್ದಾರೆ, ಘಟಿಕೋತ್ಸವ ಆಯೋಜನೆಗೆ ಸಂಬಂಧಿಸಿದಂತೆ ಅವರು ಸಭೆ ನಡೆಸಿದ್ದಾರೆ’ ಎಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ತಿಳಿಸಿದರು.</p>.<div><blockquote>2026 ಜನವರಿ ಎರಡನೇ ವಾರದಲ್ಲಿ ಘಟಿಕೋತ್ಸವ ಆಯೋಜಿಸಲಾಗುವುದು. ಸಭೆ ನಡೆಸಲಾಗಿದೆ. ಸಿದ್ದತೆ ಮಾಡಿಕೊಳ್ಳಲಾಗಿದೆ. ರಾಜ್ಯಪಾಲರ ದಿನಾಂಕ ಕೋರಿ ರಾಜಭವನದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ </blockquote><span class="attribution">ಪ್ರೊ.ಎ.ಎಂ.ಖಾನ್ ಕುಲಪತಿ ಕ.ವಿ.ವಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಕರ್ನಾಟಕ ವಿಶ್ವವಿದ್ಯಾಲಯದ 75ನೇ ಘಟಿಕೋತ್ಸವ ನಡೆದಿಲ್ಲ. 2023–24 ಮತ್ತು 2024–25ನೇ ಸಾಲಿನಲ್ಲಿ ವಿವಿಧ ಕೋರ್ಸ್ ಪೂರೈಸಿದವರು ಅರ್ಜಿ ಸಲ್ಲಿಸಿ ಘಟಿಕೋತ್ಸವ ಪ್ರಮಾಣ ಪತ್ರಕ್ಕಾಗಿ ಕಾಯುವಂತಾಗಿದೆ.</p>.<p>2024 ಸೆಪ್ಟೆಂಬರ್ನಲ್ಲಿ 74ನೇ ಘಟಿಕೋತ್ಸವ ಜರುಗಿತ್ತು. 2025ರಲ್ಲಿ ಘಟಿಕೋತ್ಸವ ಈವರೆಗೆ ನಡೆದಿಲ್ಲ. ಉದ್ಯೋಗ, ವಿದೇಶದಲ್ಲಿ ವಿದ್ಯಾಭ್ಯಾಸ, ಅನ್ಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವ್ಯಾಸಂಗಕ್ಕೆ ಅರ್ಜಿ ಸಲ್ಲಿಕೆಗೆ ಘಟಿಕೋತ್ಸವ ಪ್ರಮಾಣ ಅಗತ್ಯವಾಗಿದೆ.</p>.<p>ಕರ್ನಾಟಕ ವಿಶ್ವವಿದ್ಯಾಲಯವು ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿ ಹೊಂದಿದೆ. ಗದಗ ಮತ್ತು ಕಾರವಾರವದಲ್ಲಿ ಸ್ನಾತಕೋತ್ತರ ಕೇಂದ್ರಗಳನ್ನು ಹೊಂದಿದೆ. 266 ಸಂಯೋಜಿತ ಕಾಲೇಜುಗಳು ಇವೆ.</p>.<p>ಪದವಿ, ಸ್ನಾತಕೋತ್ತರ ಪದವಿ, ಪಿಎಚ್.ಡಿ ಸಹಿತ ವಿವಿಧ ಕೋರ್ಸ್ ಪೂರೈಸಿದವರು ಘಟಿಕೋತ್ಸವ ಪ್ರಮಾಣ ಪತ್ರ ನಿರೀಕ್ಷೆಯಲ್ಲಿದ್ಧಾರೆ. ಹಲವರು ತಾತ್ಕಾಲಿಕ ಪ್ರಮಾಣ ಪತ್ರ (ಪ್ರಾವಿಷನಲ್ ಸರ್ಟಿಫಿಕೇಟ್) ಪಡೆದು ಅರ್ಜಿ ಸಲ್ಲಿಸಿದ್ದಾರೆ.</p>.<p>‘ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಘಟಿಕೋತ್ಸವ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿದ್ದೇನೆ. ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಘಟಿಕೋತ್ಸವ ಪ್ರಮಾಣ ಪತ್ರ ಬೇಕು. ವಿಶ್ವವಿದ್ಯಾಲಯದವರು ಘಟಿಕೋತ್ಸವ ಆಯೋಜನೆಗೆ ವಿಳಂಬ ಮಾಡುತ್ತಿದ್ದಾರೆ’ ಎಂದು ರಸಾಯನವಿಜ್ಞಾನ ಸ್ನಾತಕೋತ್ತರ ಪದವೀಧರೆಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಹುಬ್ಬಳ್ಳಿಯ ಕಾನೂನು ವಿಶ್ವವಿದ್ಯಾಲಯ, ಧಾರವಾಡ ಕೃಷಿ ವಿಶ್ವವಿದ್ಯಾಲಯಗಳು ಘಟಿಕೋತ್ಸವ ನಡೆಸಿವೆ. ಕರ್ನಾಟಕ ವಿಶ್ವವಿದ್ಯಾಲಯ ತಡ ಮಾಡುತ್ತಿದೆ. ಈ ವಿಶ್ವವಿದ್ಯಾಲಯ ಹಣಕಾಸಿನ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ.</p>.<p>‘ಬೇರೆ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಕೋರ್ಸ್ಗೆ ಅರ್ಜಿ ಸಲ್ಲಿಸಿದ್ದೇನೆ. ಈಗ ತಾತ್ಕಾಲಿಕ ಸರ್ಟಿಫಿಕೇಟ್ ಸಲ್ಲಿಸಿದ್ದೇನೆ. ಆಯ್ಕೆಯಾದರೆ ಸೂಚಿತ ಸಮಯದೊಳಗೆ ಘಟಿಕೋತ್ಸವ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಆ ವಿಶ್ವವಿದ್ಯಾಲಯದವರು ತಿಳಿಸಿದ್ಧಾರೆ’ ಎಂದು ಕವಿವಿ ಸ್ನಾತಕೋತ್ತರ ಪದವೀಧರರೊಬ್ಬರು ತಿಳಿಸಿದರು.</p>.<p>‘74ನೇ ಘಟಿಕೋತ್ಸವ ಮುಗಿದ ಬಳಿಕ ಒಂಬತ್ತು ತಿಂಗಳು ಪ್ರಭಾರ ಕುಲಪತಿಗಳು ಆಡಳಿತ ನಿರ್ವಹಿಸಿದರು. ಘಟಿಕೋತ್ಸವ ಆಯೋಜನೆಗೆ ಅವರು ಆಸಕ್ತಿ ತೋರಲಿಲ್ಲ. ಐದು ತಿಂಗಳ ಹಿಂದೆ ಕುಲಪತಿ ನೇಮಕವಾಗಿದ್ದಾರೆ, ಘಟಿಕೋತ್ಸವ ಆಯೋಜನೆಗೆ ಸಂಬಂಧಿಸಿದಂತೆ ಅವರು ಸಭೆ ನಡೆಸಿದ್ದಾರೆ’ ಎಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ತಿಳಿಸಿದರು.</p>.<div><blockquote>2026 ಜನವರಿ ಎರಡನೇ ವಾರದಲ್ಲಿ ಘಟಿಕೋತ್ಸವ ಆಯೋಜಿಸಲಾಗುವುದು. ಸಭೆ ನಡೆಸಲಾಗಿದೆ. ಸಿದ್ದತೆ ಮಾಡಿಕೊಳ್ಳಲಾಗಿದೆ. ರಾಜ್ಯಪಾಲರ ದಿನಾಂಕ ಕೋರಿ ರಾಜಭವನದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ </blockquote><span class="attribution">ಪ್ರೊ.ಎ.ಎಂ.ಖಾನ್ ಕುಲಪತಿ ಕ.ವಿ.ವಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>