<p><strong>ಕುಂದಗೋಳ</strong>: ತಾಲ್ಲೂಕಿನ ತರ್ಲಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲಗುಡ್ಡ ಗ್ರಾಮದಲ್ಲಿ ಬಾಲಕನೊಬ್ಬನಿಗೆ ಅಪರಿಚಿತ ಮುಸುಕಧಾರಿ ವ್ಯಕ್ತಿಗಳು ಚುಚ್ಚುಮದ್ದು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.</p>.<p>‘ಗುರುವಾರ ಮಧ್ಯಾಹ್ನ ಮನೆ ಬಳಿ ಬಂದ ಇಬ್ಬರು ಅಪರಿಚಿತರು ನಮ್ಮ ಮಗನಿಗೆ ಚುಚ್ಚುಮದ್ದು ನೀಡಿದ್ದಾರೆ’ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.</p>.<p>ಹೊಲಗೆಲಸಕ್ಕೆ ತೆರಳಿದ್ದ ಪೋಷಕರು ಮನೆಗೆ ಮರಳಿದ ಕೂಡಲೇ, ಘಟನೆ ಕುರಿತು ಬಾಲಕ ವಿಷಯ ತಿಳಿಸಿದ್ದಾನೆ. ಇದರಿಂದ ಆತಂಕಗೊಂಡ ಪೋಷಕರು, ತಕ್ಷಣವೇ ಆತನನ್ನು ಕುಂದಗೋಳ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.</p>.<p>‘ಇಂತಹ ಪ್ರಕರಣದ ನಿಖರ ಪರೀಕ್ಷೆಗೆ ಅಗತ್ಯ ಸೌಲಭ್ಯ ಇಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಬಾಲಕನನ್ನು ಹುಬ್ಬಳ್ಳಿಯ ಕೆಎಂಸಿಆರ್ಐ ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಲಾಗಿದೆ’ ಎಂದು ತಾಲ್ಲೂಕು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.</p>.<p>‘ಈ ಸಂಬಂಧ ದೂರು ದಾಖಲಾಗಿಲ್ಲ. ಪರಿಶೀಲನೆ ನಡೆಸಿದ್ದೇವೆ’ ಎಂದು ಗುಡಗೇರಿ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-24-1998804284</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಗೋಳ</strong>: ತಾಲ್ಲೂಕಿನ ತರ್ಲಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲಗುಡ್ಡ ಗ್ರಾಮದಲ್ಲಿ ಬಾಲಕನೊಬ್ಬನಿಗೆ ಅಪರಿಚಿತ ಮುಸುಕಧಾರಿ ವ್ಯಕ್ತಿಗಳು ಚುಚ್ಚುಮದ್ದು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.</p>.<p>‘ಗುರುವಾರ ಮಧ್ಯಾಹ್ನ ಮನೆ ಬಳಿ ಬಂದ ಇಬ್ಬರು ಅಪರಿಚಿತರು ನಮ್ಮ ಮಗನಿಗೆ ಚುಚ್ಚುಮದ್ದು ನೀಡಿದ್ದಾರೆ’ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.</p>.<p>ಹೊಲಗೆಲಸಕ್ಕೆ ತೆರಳಿದ್ದ ಪೋಷಕರು ಮನೆಗೆ ಮರಳಿದ ಕೂಡಲೇ, ಘಟನೆ ಕುರಿತು ಬಾಲಕ ವಿಷಯ ತಿಳಿಸಿದ್ದಾನೆ. ಇದರಿಂದ ಆತಂಕಗೊಂಡ ಪೋಷಕರು, ತಕ್ಷಣವೇ ಆತನನ್ನು ಕುಂದಗೋಳ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.</p>.<p>‘ಇಂತಹ ಪ್ರಕರಣದ ನಿಖರ ಪರೀಕ್ಷೆಗೆ ಅಗತ್ಯ ಸೌಲಭ್ಯ ಇಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಬಾಲಕನನ್ನು ಹುಬ್ಬಳ್ಳಿಯ ಕೆಎಂಸಿಆರ್ಐ ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಲಾಗಿದೆ’ ಎಂದು ತಾಲ್ಲೂಕು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.</p>.<p>‘ಈ ಸಂಬಂಧ ದೂರು ದಾಖಲಾಗಿಲ್ಲ. ಪರಿಶೀಲನೆ ನಡೆಸಿದ್ದೇವೆ’ ಎಂದು ಗುಡಗೇರಿ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-24-1998804284</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>