<p>ಸಂಶಿ (ಗುಡಗೇರಿ): ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದ ಕೋಟೆ ಬಾವಿ ಎದ್ದಾಣಿಯಲ್ಲಿ ಗುರುವಾರ ರಾತ್ರಿ ಬಸವೇಶ್ವರ ಮೂರ್ತಿಯನ್ನು ದಿಢೀರ್ ಪ್ರತಿಷ್ಠಾಪಿಸಲಾಗಿದೆ. ಯಾರು ಪ್ರತಿಷ್ಠಾಪಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.</p>.<p>ಗ್ರಾಮದ ಸಂಗಮೇಶ್ವರ ಸಂಘದ ಅಧ್ಯಕ್ಷ ಬಸವರಾಜ ಮುಗಳಿ ಅವರು ಬಸವೇಶ್ವರರ ಮೂರ್ತಿ ಪ್ರತಿಷ್ಠಾಪನೆಗಾಗಿ ಸ್ಥಳೀಯ ಆಡಳಿತ ಹಾಗೂ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪರಮೇಶ್ವರಪ್ಪ ನಾಯ್ಕರ್ ಅವರು ಕುಂದಗೋಳದಲ್ಲಿ ಈಚೆಗೆ ನಡೆದ ಜನತಾದರ್ಶನದಲ್ಲೂ ಸಚಿವ ಸಂತೋಷ ಲಾಡ್ ಅವರ ಗಮನ ತಂದಿದ್ದರು.</p>.<p>ತಹಶೀಲ್ದಾರ್ ರಾಜು ಮಾವರಕರ ಪ್ರತಿಕ್ರಿಯಿಸಿ, ‘ಗ್ರಾಮದ ವಿವಿಧ ಸಂಘಟನೆಗಳು ಹಾಗೂ ಮುಖಂಡರ ಸಭೆ ಕರೆಯಲಾಗಿದೆ. ಈ ಕುರಿತು ಚರ್ಚಿಸಿ, ಹಿರಿಯ ಅಧಿಕಾರಿಗಳ ಮಾರ್ಗದರ್ಶನಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘2015ರಲ್ಲಿ ಬಸವೇಶ್ವರ ವೃತ್ತ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿಯಿಂದ ಅನುಮತಿ ನೀಡಲಾಗಿದೆ. ಮೂರ್ತಿ ಸ್ಥಾಪನೆಗೆ ಸಂಗಮೇಶ್ವರ ಸಂಘದಿಂದ ಮನವಿ ಸಲ್ಲಿಸಲಾಗಿತ್ತು, ಆದರೆ ಅನುಮತಿ ಸಿಕ್ಕಿರಲಿಲ್ಲ’ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಾಂಡುರಂಗ ಹಟ್ಟಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-24-498130088</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂಶಿ (ಗುಡಗೇರಿ): ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದ ಕೋಟೆ ಬಾವಿ ಎದ್ದಾಣಿಯಲ್ಲಿ ಗುರುವಾರ ರಾತ್ರಿ ಬಸವೇಶ್ವರ ಮೂರ್ತಿಯನ್ನು ದಿಢೀರ್ ಪ್ರತಿಷ್ಠಾಪಿಸಲಾಗಿದೆ. ಯಾರು ಪ್ರತಿಷ್ಠಾಪಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.</p>.<p>ಗ್ರಾಮದ ಸಂಗಮೇಶ್ವರ ಸಂಘದ ಅಧ್ಯಕ್ಷ ಬಸವರಾಜ ಮುಗಳಿ ಅವರು ಬಸವೇಶ್ವರರ ಮೂರ್ತಿ ಪ್ರತಿಷ್ಠಾಪನೆಗಾಗಿ ಸ್ಥಳೀಯ ಆಡಳಿತ ಹಾಗೂ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪರಮೇಶ್ವರಪ್ಪ ನಾಯ್ಕರ್ ಅವರು ಕುಂದಗೋಳದಲ್ಲಿ ಈಚೆಗೆ ನಡೆದ ಜನತಾದರ್ಶನದಲ್ಲೂ ಸಚಿವ ಸಂತೋಷ ಲಾಡ್ ಅವರ ಗಮನ ತಂದಿದ್ದರು.</p>.<p>ತಹಶೀಲ್ದಾರ್ ರಾಜು ಮಾವರಕರ ಪ್ರತಿಕ್ರಿಯಿಸಿ, ‘ಗ್ರಾಮದ ವಿವಿಧ ಸಂಘಟನೆಗಳು ಹಾಗೂ ಮುಖಂಡರ ಸಭೆ ಕರೆಯಲಾಗಿದೆ. ಈ ಕುರಿತು ಚರ್ಚಿಸಿ, ಹಿರಿಯ ಅಧಿಕಾರಿಗಳ ಮಾರ್ಗದರ್ಶನಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘2015ರಲ್ಲಿ ಬಸವೇಶ್ವರ ವೃತ್ತ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿಯಿಂದ ಅನುಮತಿ ನೀಡಲಾಗಿದೆ. ಮೂರ್ತಿ ಸ್ಥಾಪನೆಗೆ ಸಂಗಮೇಶ್ವರ ಸಂಘದಿಂದ ಮನವಿ ಸಲ್ಲಿಸಲಾಗಿತ್ತು, ಆದರೆ ಅನುಮತಿ ಸಿಕ್ಕಿರಲಿಲ್ಲ’ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಾಂಡುರಂಗ ಹಟ್ಟಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-24-498130088</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>