ಹುಬ್ಬಳ್ಳಿ: ಕುಂದಗೋಳ ಕ್ಷೇತ್ರದ ನೂತನ ಶಾಸಕಿ ಕುಸುಮಾವತಿ ಶಿವಳ್ಳಿ ಅವರು ಹುಬ್ಬಳ್ಳಿ ಕಿಮ್ಸ್ಗೆ ಶುಕ್ರವಾರ ತಮ್ಮ ಪ್ರಥಮ ಭೇಟಿ ನೀಡಿ, ರೋಗಿಗಳ ಅಹವಾಲು ಆಲಿಸಿದರು.
ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಗುಣಮಟ್ಟದ ಸೇವೆ ಒದಗಿಸುವಂತೆ ವೈದ್ಯ ಸಿಬ್ಬಂದಿಗೆ ಸೂಚಿಸಿದರು.
ಪತಿ, ಸಿ.ಎಸ್.ಶಿವಳ್ಳಿ ಅವರು ಕಿಮ್ಸ್ ಬಗ್ಗೆ ವಿಶೇಷ ಕಾಳಜಿ ಇಟ್ಟುಕೊಂಡಿದ್ದರು. ಆಸ್ಪತ್ರೆ ಅಭಿವೃದ್ಧಿಗೆ ಕನಸು ಕಂಡಿದ್ದರು. ಅವರ ಆಶಯದಂತೆ ಆಸ್ಪತ್ರೆಗೆ ಅಗತ್ಯ ಮೂಲಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದರು.
ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ, ಮುಖಂಡ ಷಣ್ಮುಖ ಶಿವಳ್ಳಿ ಇದ್ದರು.