‘ಕುವೆಂಪು ಅವರ ಕವಿತೆಗಳನ್ನು ಹಾಡಿದವರು ನೂರಾರು ಜನ. ಅವರ ಕವಿತೆಯೊಂದು ನಾಡಗೀತೆಯಾಗಿ ಕಿವಿಯ ಮೇಲೆ ಬೀಳುತ್ತಲೇ ಇರುತ್ತದೆ. ಅವರ ಬರಹಗಳು ಅದೆಷ್ಟೋ ಮಧುರ ಕಂಠಗಳನ್ನು ಹಾದು ಬಂದಿವೆ. ಅವರ ಕಾದಂಬರಿಗಳು, ನಾಟಕಗಳು, ಕಥೆಗಳು ರಂಗದ ಮೇಲೆ, ಸಿನಿಮಾ ಪರದೆಯ ಮೇಲೆ ಕಾಣಿಸಿಕೊಂಡು ಜನರನ್ನು ತಲುಪಿವೆ. ವಿದ್ವತ್ ವಲಯದ ಮೇಲೆ ಕುವೆಂಪು ಬರಹಗಳು, ಚಿಂತನೆಗಳು, ವಿಮರ್ಶೆಯ ನೋಟಗಳು ಬೀರಿರುವ ಪ್ರಭಾವವೂ ದೊಡ್ಡದು’ ಎಂದರು.