<p><strong>ಹುಬ್ಬಳ್ಳಿ: </strong>ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಶನಿವಾರ ವಿವಿಧೆಡೆ ಸರಳವಾಗಿ ಕಾರ್ಮಿಕರ ದಿನ ಆಚರಿಸಲಾಯಿತು.</p>.<p>ಎಪಿಎಂಸಿ ಹಮಾಲಿ ಕಾರ್ಮಿಕರ ಒಕ್ಕೂಟ ಹಾಗೂ ಸಿಐಟಿಯು ಸಂಯೋಜಿತ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ವತಿಯಿಂದ ಮನೆ ಮನಗಳಲ್ಲಿ, ಕೆಲಸದ ಸ್ಥಳಗಳಲ್ಲಿ ವಿಶ್ವ ಕಾರ್ಮಿಕ ದಿನದ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಒಕ್ಕೂಟದ ಕಚೇರಿಯಲ್ಲಿ ಸಾಂಕೇತಿಕವಾಗಿ ಸಿಐಟಿಯು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ ‘ಆರೋಗ್ಯಕ್ಕೆ ₹20 ಲಕ್ಷ ಕೋಟಿ ಮತ್ತು ಲಸಿಕೆಗೆ ₹35 ಸಾವಿರ ಕೋಟಿ ತೆಗೆದಿರಿಸಿರುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಈ ಹಣದಲ್ಲಿ ದೇಶದ 130 ಕೋಟಿ ಜನರಿಗೆ ಎರಡೂ ಹಂತದಲ್ಲಿ ಲಸಿಕೆ ಒದಗಿಸಬಹುದಾಗಿತ್ತು. ಹಾಗಾದರೇ ಆ ಹಣ ಏನಾಯಿತು ಎಂಬುದೇ ಗೊತ್ತಾಗಲಿಲ್ಲ’ ಎಂದರು.</p>.<p>‘ಶುಕ್ರವಾರದಿಂದ ಉಚಿತ ಲಸಿಕೆ ವಿತರಿಸುವುದಾಗಿ ಹೇಳಿದ್ದ ಸರ್ಕಾರ ಈಗ ಅದನ್ನು ಮುಂದೂಡಿ ಜನರ ಜೀವಗಳೊಂದಿಗೆ ಚೆಲ್ಲಾಟವಾಡುತ್ತಿದೆ. ಕೋವಿಡ್ನಿಂದ ಸಂಕಷ್ಟಕ್ಕೀಡಾದ ಜನತೆಗೆ ನೆಮ್ಮದಿಯ ಬದುಕು ಕಲ್ಪಿಸಲು ಸರ್ಕಾರ ಮುಂದಾಗಬೇಕಿತ್ತು. ತನ್ನ ಜವಾಬ್ದಾರಿ ಮರೆತು ಚುನಾವಣೆ, ರಾಮಮಂದಿರ, ಕುಂಭಮೇಳ ಮಾಡುವುದರಲ್ಲಿ ಮಗ್ನವಾಯಿತು. ಈ ಬೇಜವಾಬ್ದಾರಿ ನಡೆಗಳಿಂದಾಗಿ ಕೋವಿಡ್ ಎರಡನೇ ಅಲೆ ವಿಕೋಪಕ್ಕೆ ಹೋಯಿತು’ ಎಂದು ದೂರಿದರು.</p>.<p>ಕಾರ್ಮಿಕರಿಗೆ ಯಾವುದೇ ಪರಿಹಾರ ಒದಗಿಸದೆ ಲಾಕ್ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರದಿಂದ ಮೇ 14ರ ತನಕ ‘ಜೀವಗಳನ್ನು ಉಳಿಸಿ, ಪರಿಹಾರವನ್ನು ಒದಗಿಸಿ’ ಅಭಿಯಾನ ನಡೆಸಲು ನಿರ್ಧರಿಸಲಾಯಿತು.</p>.<p>‘ರಾಜ್ಯ ಸರ್ಕಾರ ಎಲ್ಲರಿಗೂ ಉಚಿತ ಆಮ್ಲಜನಕ, ಲಸಿಕೆ ನೀಡಬೇಕು. ಅಸಂಘಟಿತ ಕಾರ್ಮಿಕ ಕುಟುಂಬಗಳಿಗೆ ₹10 ಸಾವಿರ, ತಲಾ 10 ಕೆ.ಜಿ. ಆಹಾರ ಧಾನ್ಯ ಕೊಡಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಗುರುಸಿದ್ದಪ್ಪ ಅಂಬಿಗೇರ, ಮಂಜುನಾಥ ಹುಜರಾತಿ, ಬಸವಣ್ಣೆಪ್ಪ ನೀರಲಗಿ, ಕರಿಯಪ್ಪ ದಳವಾಯಿ, ಹುಸೇನಸಾಬ ನದಾಫ್ ಪಾಲ್ಗೊಂಡಿದ್ದರು.</p>.<p>ಕಿಟ್ ವಿತರಣೆ: ಕಾರ್ಮಿಕರ ದಿನದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಕಟ್ಟಡ ಕಾರ್ಮಿಕರ ಸುರಕ್ಷತೆಗಾಗಿ ಕಾರ್ಮಿಕ ಇಲಾಖೆ ವತಿಯಿಂದ ಬಾರ್ ಬೆಂಡಿಂಗ್, ಪೇಂಟರ್ ಹಾಗೂ ಕಾರ್ಮಿಕರಿಗೆ ಸುರಕ್ಷಾ ಕಿಟ್ಗಳನ್ನು ವಿತರಿಸಿದರು.</p>.<p>ಕಾರ್ಮಿಕ ಅಧಿಕಾರಿಗಳಾದ ಮಲ್ಲಿಕಾರ್ಜುನ ಜೋಗೂರ, ಮಾರಿಕಾಂಬಾ ಹುಲಕೋಟಿ, ಹಿರಿಯ ಕಾರ್ಮಿಕ ನಿರೀಕ್ಷಕ ಎ. ಅಲ್ಲಾಪುರ, ಶಮಿ ಹಿರೇಹಾಳ, ಕಾರ್ಮಿಕ ಮುಖಂಡರಾದ ದುರಗಪ್ಪ ಚಿಕ್ಕತುಂಬಳ, ಮೆಹಬೂಬ್ ಸಾಬ್ ಸುಂಕದ, ವಾಸು ಲಮಾಣಿ, ಸಿ.ವಿ. ಸ್ವಾಮಿ. ಮುಸ್ತಾಕ್ ನದಾಫ್, ಭೀಮಣ್ಣ ಮೇಲಿನಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಶನಿವಾರ ವಿವಿಧೆಡೆ ಸರಳವಾಗಿ ಕಾರ್ಮಿಕರ ದಿನ ಆಚರಿಸಲಾಯಿತು.</p>.<p>ಎಪಿಎಂಸಿ ಹಮಾಲಿ ಕಾರ್ಮಿಕರ ಒಕ್ಕೂಟ ಹಾಗೂ ಸಿಐಟಿಯು ಸಂಯೋಜಿತ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ವತಿಯಿಂದ ಮನೆ ಮನಗಳಲ್ಲಿ, ಕೆಲಸದ ಸ್ಥಳಗಳಲ್ಲಿ ವಿಶ್ವ ಕಾರ್ಮಿಕ ದಿನದ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಒಕ್ಕೂಟದ ಕಚೇರಿಯಲ್ಲಿ ಸಾಂಕೇತಿಕವಾಗಿ ಸಿಐಟಿಯು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ ‘ಆರೋಗ್ಯಕ್ಕೆ ₹20 ಲಕ್ಷ ಕೋಟಿ ಮತ್ತು ಲಸಿಕೆಗೆ ₹35 ಸಾವಿರ ಕೋಟಿ ತೆಗೆದಿರಿಸಿರುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಈ ಹಣದಲ್ಲಿ ದೇಶದ 130 ಕೋಟಿ ಜನರಿಗೆ ಎರಡೂ ಹಂತದಲ್ಲಿ ಲಸಿಕೆ ಒದಗಿಸಬಹುದಾಗಿತ್ತು. ಹಾಗಾದರೇ ಆ ಹಣ ಏನಾಯಿತು ಎಂಬುದೇ ಗೊತ್ತಾಗಲಿಲ್ಲ’ ಎಂದರು.</p>.<p>‘ಶುಕ್ರವಾರದಿಂದ ಉಚಿತ ಲಸಿಕೆ ವಿತರಿಸುವುದಾಗಿ ಹೇಳಿದ್ದ ಸರ್ಕಾರ ಈಗ ಅದನ್ನು ಮುಂದೂಡಿ ಜನರ ಜೀವಗಳೊಂದಿಗೆ ಚೆಲ್ಲಾಟವಾಡುತ್ತಿದೆ. ಕೋವಿಡ್ನಿಂದ ಸಂಕಷ್ಟಕ್ಕೀಡಾದ ಜನತೆಗೆ ನೆಮ್ಮದಿಯ ಬದುಕು ಕಲ್ಪಿಸಲು ಸರ್ಕಾರ ಮುಂದಾಗಬೇಕಿತ್ತು. ತನ್ನ ಜವಾಬ್ದಾರಿ ಮರೆತು ಚುನಾವಣೆ, ರಾಮಮಂದಿರ, ಕುಂಭಮೇಳ ಮಾಡುವುದರಲ್ಲಿ ಮಗ್ನವಾಯಿತು. ಈ ಬೇಜವಾಬ್ದಾರಿ ನಡೆಗಳಿಂದಾಗಿ ಕೋವಿಡ್ ಎರಡನೇ ಅಲೆ ವಿಕೋಪಕ್ಕೆ ಹೋಯಿತು’ ಎಂದು ದೂರಿದರು.</p>.<p>ಕಾರ್ಮಿಕರಿಗೆ ಯಾವುದೇ ಪರಿಹಾರ ಒದಗಿಸದೆ ಲಾಕ್ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರದಿಂದ ಮೇ 14ರ ತನಕ ‘ಜೀವಗಳನ್ನು ಉಳಿಸಿ, ಪರಿಹಾರವನ್ನು ಒದಗಿಸಿ’ ಅಭಿಯಾನ ನಡೆಸಲು ನಿರ್ಧರಿಸಲಾಯಿತು.</p>.<p>‘ರಾಜ್ಯ ಸರ್ಕಾರ ಎಲ್ಲರಿಗೂ ಉಚಿತ ಆಮ್ಲಜನಕ, ಲಸಿಕೆ ನೀಡಬೇಕು. ಅಸಂಘಟಿತ ಕಾರ್ಮಿಕ ಕುಟುಂಬಗಳಿಗೆ ₹10 ಸಾವಿರ, ತಲಾ 10 ಕೆ.ಜಿ. ಆಹಾರ ಧಾನ್ಯ ಕೊಡಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಗುರುಸಿದ್ದಪ್ಪ ಅಂಬಿಗೇರ, ಮಂಜುನಾಥ ಹುಜರಾತಿ, ಬಸವಣ್ಣೆಪ್ಪ ನೀರಲಗಿ, ಕರಿಯಪ್ಪ ದಳವಾಯಿ, ಹುಸೇನಸಾಬ ನದಾಫ್ ಪಾಲ್ಗೊಂಡಿದ್ದರು.</p>.<p>ಕಿಟ್ ವಿತರಣೆ: ಕಾರ್ಮಿಕರ ದಿನದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಕಟ್ಟಡ ಕಾರ್ಮಿಕರ ಸುರಕ್ಷತೆಗಾಗಿ ಕಾರ್ಮಿಕ ಇಲಾಖೆ ವತಿಯಿಂದ ಬಾರ್ ಬೆಂಡಿಂಗ್, ಪೇಂಟರ್ ಹಾಗೂ ಕಾರ್ಮಿಕರಿಗೆ ಸುರಕ್ಷಾ ಕಿಟ್ಗಳನ್ನು ವಿತರಿಸಿದರು.</p>.<p>ಕಾರ್ಮಿಕ ಅಧಿಕಾರಿಗಳಾದ ಮಲ್ಲಿಕಾರ್ಜುನ ಜೋಗೂರ, ಮಾರಿಕಾಂಬಾ ಹುಲಕೋಟಿ, ಹಿರಿಯ ಕಾರ್ಮಿಕ ನಿರೀಕ್ಷಕ ಎ. ಅಲ್ಲಾಪುರ, ಶಮಿ ಹಿರೇಹಾಳ, ಕಾರ್ಮಿಕ ಮುಖಂಡರಾದ ದುರಗಪ್ಪ ಚಿಕ್ಕತುಂಬಳ, ಮೆಹಬೂಬ್ ಸಾಬ್ ಸುಂಕದ, ವಾಸು ಲಮಾಣಿ, ಸಿ.ವಿ. ಸ್ವಾಮಿ. ಮುಸ್ತಾಕ್ ನದಾಫ್, ಭೀಮಣ್ಣ ಮೇಲಿನಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>