ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರಲ್ಲಿ ಶೇ 30ಷ್ಟು ಟೈಲ್ಸ್ ಕಾರ್ಮಿಕರಿದ್ದಾರೆ. ಆದರೆ, ಇದುವರೆಗೆ ಅವರಿಗೆ ಯಾವುದೇ ಟೂಲ್ ಕಿಟ್ ನೀಡಿಲ್ಲ. ಅವರನ್ನು ಕಡೆಗಣಿಸಲಾಗಿದೆ. ಹಿರಿಯ ಕಾರ್ಮಿಕರಿಗೆ ಪಿಂಚಣಿ ಯೋಜನೆ ಅರ್ಜಿ ಸಲ್ಲಿಸಲು ಹೇರಿರುವ ನಿರ್ಬಂಧ ತೆರವುಗೊಳಿಸಬೇಕು. ಸೇವಾಸಿಂಧು ಪೋರ್ಟಲ್ನಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಸರಿಪಡಿಸಬೇಕು’ ಎಂದರು.