<p><strong>ಹುಬ್ಬಳ್ಳಿ</strong>: ಕರ್ನಾಟಕದಲ್ಲಿ ಲಾಕ್ಡೌನ್ ಹೇರಿರುವ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ ಕೆಲ ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.</p>.<p>ಮೇ 3ರಿಂದ ಮುಂದಿನ ಆದೇಶದ ತನಕ ಮೈಸೂರು–ಸಾಯಿನಗರ ಶಿರಡಿ ಎಕ್ಸ್ಪ್ರೆಸ್ ವಿಶೇಷ ರೈಲು ಎರಡೂ ಮಾರ್ಗದಿಂದ, ಮೇ 5ರಿಂದ ಹುಬ್ಬಳ್ಳಿ–ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್ಪ್ರೆಸ್ ಸಂಚಾರವನ್ನು ಹುಬ್ಬಳ್ಳಿಯಿಂದ, 6ರಿಂದ ಚೆನ್ನೈನಿಂದ ರದ್ದು ಪಡಿಸಲಾಗಿದೆ.</p>.<p>ಏ. 30ರಿಂದ ಮೈಸೂರು–ಬಾಗಲಕೋಟೆ ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರ ಮೈಸೂರಿನಿಂದ ರದ್ದಾಗಿದ್ದು, ಮೇ 1ರಿಂದ ಬಾಗಲಕೋಟೆಯಿಂದಲೂ ಈ ರೈಲು ಸಂಚರಿಸುವುದಿಲ್ಲ. ಯಶವಂತಪುರ–ಹೊಸಪೇಟೆ ನಡುವಿನ ನಿತ್ಯದ ರೈಲು ಮತ್ತು ಬೆಂಗಳೂರು–ಹುಬ್ಬಳ್ಳಿ ನಡುವೆ ನಿತ್ಯ ಸಂಚರಿಸುತ್ತಿದ್ದ ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನೂ ಮೇ 1ರಿಂದ ರದ್ದುಪಡಿಸಲಾಗಿದೆ.</p>.<p><strong>ಮುಂಗಡ ಕಾಯ್ದಿರಿಸಲಷ್ಟೇ ಅವಕಾಶ</strong>: ರೈಲಿನಲ್ಲಿ ಸುರಕ್ಷಿತ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಮುಂಗಡ ಟಿಕೆಟ್ ಪಡೆದರಷ್ಟೇ ಪ್ರಯಾಣಿಸಲು ನೈರುತ್ಯ ರೈಲ್ವೆ ಅವಕಾಶ ಕಲ್ಪಿಸಿದೆ. ಆನ್ಲೈನ್ ಅಥವಾ ನಿಲ್ದಾಣಗಳ ಕೌಂಟರ್ನಲ್ಲಿ ಮುಂಗಡ ಟಿಕೆಟ್ ಪಡೆಯಬೇಕಿದೆ.</p>.<p><strong>ಆಗದ ವ್ಯತ್ಯಾಸ:</strong> ರಾಜ್ಯದಲ್ಲಿ ಲಾಕ್ಡೌನ್ ಇರುವ ಕಾರಣ ಪ್ರಯಾಣಿಕರ ಸಂಖ್ಯೆಯಲ್ಲಿ ಬಹಳಷ್ಟು ಇಳಿಮುಖವಾಗಿದೆ. ಆದ್ದರಿಂದ ಅಗತ್ಯವಿಲ್ಲದ ಮಾರ್ಗಗಳಲ್ಲಿ ರೈಲುಗಳನ್ನು ರದ್ದುಪಡಿಸಲಾಗಿದೆ. ಆದರೆ, ಹೊರ ರಾಜ್ಯಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚು ವ್ಯತ್ಯಾಸ ಕಂಡುಬಂದಿಲ್ಲ.</p>.<p>‘ವಾಸ್ಕೊ, ಗುವಾಹಟಿ, ದಾನಾಪುರ ಹೀಗೆ ಹೊರ ರಾಜ್ಯಗಳಿಗೆ ಹೋಗುವ ರೈಲುಗಳಲ್ಲಿ ಉತ್ತಮ ಸಂಖ್ಯೆಯಲ್ಲಿ ಪ್ರಯಾಣಿಕರು ಇದ್ದಾರೆ. ಬಹಳಷ್ಟು ಜನ ಸ್ಲೀಪರ್ ಕ್ಲಾಸ್ನಲ್ಲಿ ಮುಂಗಡ ಟಿಕೆಟ್ ಪಡೆಯುತ್ತಿದ್ದಾರೆ. ಎಸಿ ಕೋಚ್ಗೆ ಬೇಡಿಕೆ ಕಡಿಮೆಯಾಗಿದೆ. ಹಿಂದೆ ಲಾಕ್ಡೌನ್ ಘೋಷಿಸಿದ್ದಾಗ ಸಂಪೂರ್ಣ ಬಂದ್ ಆಗಿತ್ತು. ಆದರೆ, ಈ ಬಾರಿ ಕೈಗಾರಿಕಾ ಚಟುವಟಿಕೆಗಳಿಗೆ ಅವಕಾಶ ನೀಡಿರುವುದರಿಂದ ಹೊರರಾಜ್ಯಗಳಿಗೆ ಹೋಗುವವರ ಸಂಖ್ಯೆ ಹಿಂದಿನಷ್ಟಿಲ್ಲ’ ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗಡೆ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಂಡಿದ್ದೇವೆ. ಮುಂದೆ ಯಾವ ಮಾರ್ಗದಲ್ಲಿಯಾದರೂ ಬೇಡಿಕೆ ಕಂಡುಬಂದರು ರೈಲು ಓಡಿಸಲು ಸಿದ್ಧರಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಕರ್ನಾಟಕದಲ್ಲಿ ಲಾಕ್ಡೌನ್ ಹೇರಿರುವ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ ಕೆಲ ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.</p>.<p>ಮೇ 3ರಿಂದ ಮುಂದಿನ ಆದೇಶದ ತನಕ ಮೈಸೂರು–ಸಾಯಿನಗರ ಶಿರಡಿ ಎಕ್ಸ್ಪ್ರೆಸ್ ವಿಶೇಷ ರೈಲು ಎರಡೂ ಮಾರ್ಗದಿಂದ, ಮೇ 5ರಿಂದ ಹುಬ್ಬಳ್ಳಿ–ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್ಪ್ರೆಸ್ ಸಂಚಾರವನ್ನು ಹುಬ್ಬಳ್ಳಿಯಿಂದ, 6ರಿಂದ ಚೆನ್ನೈನಿಂದ ರದ್ದು ಪಡಿಸಲಾಗಿದೆ.</p>.<p>ಏ. 30ರಿಂದ ಮೈಸೂರು–ಬಾಗಲಕೋಟೆ ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರ ಮೈಸೂರಿನಿಂದ ರದ್ದಾಗಿದ್ದು, ಮೇ 1ರಿಂದ ಬಾಗಲಕೋಟೆಯಿಂದಲೂ ಈ ರೈಲು ಸಂಚರಿಸುವುದಿಲ್ಲ. ಯಶವಂತಪುರ–ಹೊಸಪೇಟೆ ನಡುವಿನ ನಿತ್ಯದ ರೈಲು ಮತ್ತು ಬೆಂಗಳೂರು–ಹುಬ್ಬಳ್ಳಿ ನಡುವೆ ನಿತ್ಯ ಸಂಚರಿಸುತ್ತಿದ್ದ ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನೂ ಮೇ 1ರಿಂದ ರದ್ದುಪಡಿಸಲಾಗಿದೆ.</p>.<p><strong>ಮುಂಗಡ ಕಾಯ್ದಿರಿಸಲಷ್ಟೇ ಅವಕಾಶ</strong>: ರೈಲಿನಲ್ಲಿ ಸುರಕ್ಷಿತ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಮುಂಗಡ ಟಿಕೆಟ್ ಪಡೆದರಷ್ಟೇ ಪ್ರಯಾಣಿಸಲು ನೈರುತ್ಯ ರೈಲ್ವೆ ಅವಕಾಶ ಕಲ್ಪಿಸಿದೆ. ಆನ್ಲೈನ್ ಅಥವಾ ನಿಲ್ದಾಣಗಳ ಕೌಂಟರ್ನಲ್ಲಿ ಮುಂಗಡ ಟಿಕೆಟ್ ಪಡೆಯಬೇಕಿದೆ.</p>.<p><strong>ಆಗದ ವ್ಯತ್ಯಾಸ:</strong> ರಾಜ್ಯದಲ್ಲಿ ಲಾಕ್ಡೌನ್ ಇರುವ ಕಾರಣ ಪ್ರಯಾಣಿಕರ ಸಂಖ್ಯೆಯಲ್ಲಿ ಬಹಳಷ್ಟು ಇಳಿಮುಖವಾಗಿದೆ. ಆದ್ದರಿಂದ ಅಗತ್ಯವಿಲ್ಲದ ಮಾರ್ಗಗಳಲ್ಲಿ ರೈಲುಗಳನ್ನು ರದ್ದುಪಡಿಸಲಾಗಿದೆ. ಆದರೆ, ಹೊರ ರಾಜ್ಯಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚು ವ್ಯತ್ಯಾಸ ಕಂಡುಬಂದಿಲ್ಲ.</p>.<p>‘ವಾಸ್ಕೊ, ಗುವಾಹಟಿ, ದಾನಾಪುರ ಹೀಗೆ ಹೊರ ರಾಜ್ಯಗಳಿಗೆ ಹೋಗುವ ರೈಲುಗಳಲ್ಲಿ ಉತ್ತಮ ಸಂಖ್ಯೆಯಲ್ಲಿ ಪ್ರಯಾಣಿಕರು ಇದ್ದಾರೆ. ಬಹಳಷ್ಟು ಜನ ಸ್ಲೀಪರ್ ಕ್ಲಾಸ್ನಲ್ಲಿ ಮುಂಗಡ ಟಿಕೆಟ್ ಪಡೆಯುತ್ತಿದ್ದಾರೆ. ಎಸಿ ಕೋಚ್ಗೆ ಬೇಡಿಕೆ ಕಡಿಮೆಯಾಗಿದೆ. ಹಿಂದೆ ಲಾಕ್ಡೌನ್ ಘೋಷಿಸಿದ್ದಾಗ ಸಂಪೂರ್ಣ ಬಂದ್ ಆಗಿತ್ತು. ಆದರೆ, ಈ ಬಾರಿ ಕೈಗಾರಿಕಾ ಚಟುವಟಿಕೆಗಳಿಗೆ ಅವಕಾಶ ನೀಡಿರುವುದರಿಂದ ಹೊರರಾಜ್ಯಗಳಿಗೆ ಹೋಗುವವರ ಸಂಖ್ಯೆ ಹಿಂದಿನಷ್ಟಿಲ್ಲ’ ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗಡೆ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಂಡಿದ್ದೇವೆ. ಮುಂದೆ ಯಾವ ಮಾರ್ಗದಲ್ಲಿಯಾದರೂ ಬೇಡಿಕೆ ಕಂಡುಬಂದರು ರೈಲು ಓಡಿಸಲು ಸಿದ್ಧರಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>