<p><strong>ಧಾರವಾಡ:</strong> ಕಸ ಸಂಗ್ರಹ ವಾಹನಗಳು ನಗರದ ಕೆಲವು ಬಡಾವಣೆಗಳಿಗೆ ವಾರಕ್ಕೊಮ್ಮೆ ಬರುತ್ತಿವೆ. ರಸ್ತೆ ಬದಿ, ಕೆರೆ ದಂಡೆ, ನಿವೇಶನ, ಪಾಳುಕಟ್ಟಡ ಪ್ರದೇಶಗಳಲ್ಲಿ ಕಸ ಎಸೆಯುವ ಪರಿಪಾಟ ಅವ್ಯಾಹತವಾಗಿದೆ.</p>.<p>ಕೆಲವು ಕಡೆಗಳಿಗೆ ಕಸ ಸಂಗ್ರಹ ವಾಹನಗಳು ಹೋಗಲ್ಲ. ಇಂಥ ಓಣಿ, ಪ್ರದೇಶಗಳಲ್ಲಿ ರಸ್ತೆ ಬದಿ, ನಿವೇಶನಗಳಲ್ಲಿ ಕಸ ಸುರಿಯವುದು ಹೆಚ್ಚು. ರಸ್ತೆ ಬದಿ, ನಿವೇಶನಗಳಲ್ಲಿ ಕಸ ಸುರಿದರೆ ದಂಡ ವಿಧಿಸಲಾಗುವುದು ಎಂಬ ಫಲಕಗಳು ನಾಮಕಾವಸ್ತೆ ಎಂಬಂತಾಗಿದೆ. ಈ ಫಲಕಗಳ ಬುಡದಲ್ಲಿಯೇ ಕಸ ಸುರಿಯುತ್ತಾರೆ. ಕಸ ವಿಲೇವಾರಿ ಘಟಕವಿರುವ ಹೊಸ ಯಲ್ಲಾಪುರ ಸುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ದುರ್ನಾತದ ಸಮಸ್ಯೆ ತಪ್ಪಿಲ್ಲ.</p>.<p>‘ಕಸ ಸಂಗ್ರಹ ವಾಹನ ಮತ್ತು ಸಿಬ್ಬಂದಿ ಕೊರತೆ ಇದೆ. ಹೊಸದಾಗಿ ಆಟೊ, ಟಿಪ್ಪರ್ಗಳ ಖರೀದಿ ನಿಟ್ಟಿನಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಹೊಸ ವಾಹನಗಳು ಕಸ ಸಂಗ್ರಹ, ವಿಲೇವಾರಿಯ ಬಹುಪಾಲು ಸಮಸ್ಯೆ ಪರಿಹಾರವಾಗಲಿದೆ‘ ಎಂದು ಪಾಲಿಕೆ ಅಧಿಕಾರಿಗಳು ಹೇಳುತ್ತಾರೆ.</p>.<p>ಮೂರು ದಿನಕ್ಕೊಮ್ಮೆಯಾದರೂ ನಿಯಮಿತವಾಗಿ ಎಲ್ಲ ಬಡಾವಣೆಗಳಲ್ಲಿ ಕಸ ಸಂಗ್ರಹ ವಾಹನ ಬರುವಂತೆ ವ್ಯವಸ್ಥೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಕಸ ಸಂಗ್ರಹ ವಾಹನಗಳು ನಗರದ ಕೆಲವು ಬಡಾವಣೆಗಳಿಗೆ ವಾರಕ್ಕೊಮ್ಮೆ ಬರುತ್ತಿವೆ. ರಸ್ತೆ ಬದಿ, ಕೆರೆ ದಂಡೆ, ನಿವೇಶನ, ಪಾಳುಕಟ್ಟಡ ಪ್ರದೇಶಗಳಲ್ಲಿ ಕಸ ಎಸೆಯುವ ಪರಿಪಾಟ ಅವ್ಯಾಹತವಾಗಿದೆ.</p>.<p>ಕೆಲವು ಕಡೆಗಳಿಗೆ ಕಸ ಸಂಗ್ರಹ ವಾಹನಗಳು ಹೋಗಲ್ಲ. ಇಂಥ ಓಣಿ, ಪ್ರದೇಶಗಳಲ್ಲಿ ರಸ್ತೆ ಬದಿ, ನಿವೇಶನಗಳಲ್ಲಿ ಕಸ ಸುರಿಯವುದು ಹೆಚ್ಚು. ರಸ್ತೆ ಬದಿ, ನಿವೇಶನಗಳಲ್ಲಿ ಕಸ ಸುರಿದರೆ ದಂಡ ವಿಧಿಸಲಾಗುವುದು ಎಂಬ ಫಲಕಗಳು ನಾಮಕಾವಸ್ತೆ ಎಂಬಂತಾಗಿದೆ. ಈ ಫಲಕಗಳ ಬುಡದಲ್ಲಿಯೇ ಕಸ ಸುರಿಯುತ್ತಾರೆ. ಕಸ ವಿಲೇವಾರಿ ಘಟಕವಿರುವ ಹೊಸ ಯಲ್ಲಾಪುರ ಸುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ದುರ್ನಾತದ ಸಮಸ್ಯೆ ತಪ್ಪಿಲ್ಲ.</p>.<p>‘ಕಸ ಸಂಗ್ರಹ ವಾಹನ ಮತ್ತು ಸಿಬ್ಬಂದಿ ಕೊರತೆ ಇದೆ. ಹೊಸದಾಗಿ ಆಟೊ, ಟಿಪ್ಪರ್ಗಳ ಖರೀದಿ ನಿಟ್ಟಿನಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಹೊಸ ವಾಹನಗಳು ಕಸ ಸಂಗ್ರಹ, ವಿಲೇವಾರಿಯ ಬಹುಪಾಲು ಸಮಸ್ಯೆ ಪರಿಹಾರವಾಗಲಿದೆ‘ ಎಂದು ಪಾಲಿಕೆ ಅಧಿಕಾರಿಗಳು ಹೇಳುತ್ತಾರೆ.</p>.<p>ಮೂರು ದಿನಕ್ಕೊಮ್ಮೆಯಾದರೂ ನಿಯಮಿತವಾಗಿ ಎಲ್ಲ ಬಡಾವಣೆಗಳಲ್ಲಿ ಕಸ ಸಂಗ್ರಹ ವಾಹನ ಬರುವಂತೆ ವ್ಯವಸ್ಥೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>