<p><strong>ಧಾರವಾಡ</strong>: ಯೋಜನೆಯೊಂದರ ಮೂಲಕ ಕಂತುಗಳಲ್ಲಿ ₹2ಲಕ್ಷ ಪಾವತಿಸಿದರೂ ಬಂಗಾರದ ನೀಡದೆ ಸೇವಾ ನ್ಯೂನತೆ ಎಸಗಿದ ಹುಬ್ಬಳ್ಳಿಯ ಲಕ್ಷ್ಮಿ ಗೋಲ್ಡ್ ಪ್ಯಾಲೇಸ್ಗೆ 64ಗ್ರಾಂ ಬಂಗಾರದೊಂದಿಗೆ ₹35ಸಾವಿರ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.</p>.<p>ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಗುರ್ಲಹೊಸೂರು ಗ್ರಾಮದ ಸತೀಶ ಇಜಂತಕರ ಎಂಬುವವರು ತಮ್ಮ ಮಗಳ ಹೆಸರಿನಲ್ಲಿ ‘ಆದಿತ್ಯ ಗೋಲ್ಡ್ ಪರ್ಚೇಸ್’ ಯೋಜನೆಯಡಿ ಒಟ್ಟು 19 ಕಂತುಗಳಲ್ಲಿ ₹2ಲಕ್ಷ ಕಟ್ಟಿದ್ದರು. ಈ ಹಣಕ್ಕೆ ಸಮನಾಂತರವಾಗಿ ಒಟ್ಟು 64.011 ಗ್ರಾಂ ಬಂಗಾರ ನೀಡಬೇಕಿದ್ದ ಮಳಿಗೆಯವರು, ಅವಧಿ ಮೀರಿದರೂ ಬಂಗಾರದ ನೀಡದೇ ಸತಾಯಿಸಿದ್ದಾರೆ. ಆ ಮೂಲಕ ಸೇವಾ ನ್ಯೂನತೆ ಎಸಗಿದ್ದಾರೆ’ ಎಂದು ಆರೋಪಿಸಿ ಸತೀಶ ಅವರು ಆಯೋಗಕ್ಕೆ ದೂರು ಸಲ್ಲಿಸಿದ್ದರು.</p>.<p>ದೂರಿನ ವಿಚಾರಣೆಯನ್ನು ಆಯೋಗದ ಅಧ್ಯಕ್ಷ ಈಶಪ್ಪ ಕೆ. ಭೂತೆ, ಸದಸ್ಯರಾದ ವಿ.ಅ.ಬೋಳಶೆಟ್ಟಿ ಹಾಗೂ ಪಿ.ಸಿ.ಹಿರೇಮಠ ಅವರು ನಡೆಸಿದರು.</p>.<p>‘ಯೋಜನೆಯ ಒಪ್ಪಂದದಂತೆ ದೂರುದಾರರಿಂದ ಹಣ ಪಡೆದು ಅದಕ್ಕೆಸಮಾನಾಂತರ ಮೌಲ್ಯದ ಬಂಗಾರ ನೀಡದೆ ಲಕ್ಷ್ಮಿ ಗೋಲ್ಡ್ ಪ್ಯಾಲೇಸ್ ಸೇವಾ ನ್ಯೂನತೆ ಎಸಗಿದೆ. ಹೀಗಾಗಿ 24 ಕ್ಯಾರೆಟ್ನ 64.011 ಗ್ರಾಂ ತೂಕದ ಚಿನ್ನವನ್ನು ಗ್ರಾಹಕರಿಗೆ ನೀಡಬೇಕು. ಸೇವಾ ನ್ಯೂನತೆ ಎಸಗಿದ್ದಕ್ಕಾಗಿ ದೂರುದಾರರಿಗೆ ₹25ಸಾವಿರ ಪರಿಹಾರ ಮತ್ತು ₹10ಸಾವಿರ ಪ್ರಕರಣದ ವೆಚ್ಚವನ್ನು ನೀಡಬೇಕು’ ಎಂದು ಆದೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಯೋಜನೆಯೊಂದರ ಮೂಲಕ ಕಂತುಗಳಲ್ಲಿ ₹2ಲಕ್ಷ ಪಾವತಿಸಿದರೂ ಬಂಗಾರದ ನೀಡದೆ ಸೇವಾ ನ್ಯೂನತೆ ಎಸಗಿದ ಹುಬ್ಬಳ್ಳಿಯ ಲಕ್ಷ್ಮಿ ಗೋಲ್ಡ್ ಪ್ಯಾಲೇಸ್ಗೆ 64ಗ್ರಾಂ ಬಂಗಾರದೊಂದಿಗೆ ₹35ಸಾವಿರ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.</p>.<p>ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಗುರ್ಲಹೊಸೂರು ಗ್ರಾಮದ ಸತೀಶ ಇಜಂತಕರ ಎಂಬುವವರು ತಮ್ಮ ಮಗಳ ಹೆಸರಿನಲ್ಲಿ ‘ಆದಿತ್ಯ ಗೋಲ್ಡ್ ಪರ್ಚೇಸ್’ ಯೋಜನೆಯಡಿ ಒಟ್ಟು 19 ಕಂತುಗಳಲ್ಲಿ ₹2ಲಕ್ಷ ಕಟ್ಟಿದ್ದರು. ಈ ಹಣಕ್ಕೆ ಸಮನಾಂತರವಾಗಿ ಒಟ್ಟು 64.011 ಗ್ರಾಂ ಬಂಗಾರ ನೀಡಬೇಕಿದ್ದ ಮಳಿಗೆಯವರು, ಅವಧಿ ಮೀರಿದರೂ ಬಂಗಾರದ ನೀಡದೇ ಸತಾಯಿಸಿದ್ದಾರೆ. ಆ ಮೂಲಕ ಸೇವಾ ನ್ಯೂನತೆ ಎಸಗಿದ್ದಾರೆ’ ಎಂದು ಆರೋಪಿಸಿ ಸತೀಶ ಅವರು ಆಯೋಗಕ್ಕೆ ದೂರು ಸಲ್ಲಿಸಿದ್ದರು.</p>.<p>ದೂರಿನ ವಿಚಾರಣೆಯನ್ನು ಆಯೋಗದ ಅಧ್ಯಕ್ಷ ಈಶಪ್ಪ ಕೆ. ಭೂತೆ, ಸದಸ್ಯರಾದ ವಿ.ಅ.ಬೋಳಶೆಟ್ಟಿ ಹಾಗೂ ಪಿ.ಸಿ.ಹಿರೇಮಠ ಅವರು ನಡೆಸಿದರು.</p>.<p>‘ಯೋಜನೆಯ ಒಪ್ಪಂದದಂತೆ ದೂರುದಾರರಿಂದ ಹಣ ಪಡೆದು ಅದಕ್ಕೆಸಮಾನಾಂತರ ಮೌಲ್ಯದ ಬಂಗಾರ ನೀಡದೆ ಲಕ್ಷ್ಮಿ ಗೋಲ್ಡ್ ಪ್ಯಾಲೇಸ್ ಸೇವಾ ನ್ಯೂನತೆ ಎಸಗಿದೆ. ಹೀಗಾಗಿ 24 ಕ್ಯಾರೆಟ್ನ 64.011 ಗ್ರಾಂ ತೂಕದ ಚಿನ್ನವನ್ನು ಗ್ರಾಹಕರಿಗೆ ನೀಡಬೇಕು. ಸೇವಾ ನ್ಯೂನತೆ ಎಸಗಿದ್ದಕ್ಕಾಗಿ ದೂರುದಾರರಿಗೆ ₹25ಸಾವಿರ ಪರಿಹಾರ ಮತ್ತು ₹10ಸಾವಿರ ಪ್ರಕರಣದ ವೆಚ್ಚವನ್ನು ನೀಡಬೇಕು’ ಎಂದು ಆದೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>