ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಗುರ್ಲಹೊಸೂರು ಗ್ರಾಮದ ಸತೀಶ ಇಜಂತಕರ ಎಂಬುವವರು ತಮ್ಮ ಮಗಳ ಹೆಸರಿನಲ್ಲಿ ‘ಆದಿತ್ಯ ಗೋಲ್ಡ್ ಪರ್ಚೇಸ್’ ಯೋಜನೆಯಡಿ ಒಟ್ಟು 19 ಕಂತುಗಳಲ್ಲಿ ₹2ಲಕ್ಷ ಕಟ್ಟಿದ್ದರು. ಈ ಹಣಕ್ಕೆ ಸಮನಾಂತರವಾಗಿ ಒಟ್ಟು 64.011 ಗ್ರಾಂ ಬಂಗಾರ ನೀಡಬೇಕಿದ್ದ ಮಳಿಗೆಯವರು, ಅವಧಿ ಮೀರಿದರೂ ಬಂಗಾರದ ನೀಡದೇ ಸತಾಯಿಸಿದ್ದಾರೆ. ಆ ಮೂಲಕ ಸೇವಾ ನ್ಯೂನತೆ ಎಸಗಿದ್ದಾರೆ’ ಎಂದು ಆರೋಪಿಸಿ ಸತೀಶ ಅವರು ಆಯೋಗಕ್ಕೆ ದೂರು ಸಲ್ಲಿಸಿದ್ದರು.